ಬಿಎಸ್ ವೈ ಕೇಸ್ ಬಲಗೊಳಿಸಲು ಸಿಎಂ ಸರ್ಕಸ್ : ಸುರೇಶ್ ವ್ಯಂಗ್ಯ
ಗೋವಿಂದ ರಾಜು ಡೈರಿ ಗೌಪ್ಯತೆಯನ್ನು ಬಿಜೆಪಿ ಬಹಿರಂಗ ಪಡಿಸಿದ ನಂತರ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಹೈಕಮಾಂಡ್ ಗೆ ನೀಡಲಾದ ಕಪ್ಪದ ಮಾಹಿತಿಯನ್ನು ಕಾಂಗ್ರೆಸ್ ಬಹಿರಂಗಪಡಿಸಿತ್ತು.
ಬೆಂಗಳೂರು, ಫೆಬ್ರವರಿ 27: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪವರ ವಿರುದ್ಧದ ಕೇಸ್ ಗಳನ್ನು ಮತ್ತಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಸರತ್ತು ನಡೆಸುತ್ತಿದ್ದಾರೆಂದು ಮಾಜಿ ಸಚಿವ, ಬಿಜೆಪಿ ನಾಯಕ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.[ಸಿಟ್ಟು, ಪಟ್ಟು ಎರಡರ ಕಾಂಬೋ ಬಿಎಸ್ ವೈಗೆ 74ನೇ ಜನ್ಮದಿನ]
ಯಡಿಯೂರಪ್ಪ ವಿರುದ್ಧದ ಕೇಸನ್ನು ರಾಜ್ಯ ಹೈಕೋರ್ಟ್ ಕೈಬಿಟ್ಟಿದೆ. ಹೀಗಿರುವಾಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಈ ಕೇಸನ್ನು ಬಲಪಡಿಸಲು ಸಿದ್ದರಾಮಯ್ಯ ಅವರು ಕಸರತ್ತು ನಡೆಸಿದ್ದಾರೆ. ಅದು ಒಳ್ಳೆಯದೇ. ಆದರೆ, ಅವರು ಎಷ್ಟೇ ಪ್ರಯತ್ನ ಪಡಲಿ, ಯಡಿಯೂರಪ್ಪ ಅವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.[ಡೊನೇಷನ್ ಗೇಟ್ ಪಿತೂರಿ : ಯಾವುದು ಸತ್ಯ, ಯಾವುದು ಮಿಥ್ಯ?]

ವಿಧಾನಸಭೆ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಡೈರಿಯಲ್ಲಿನ ಮಾಹಿತಿ ಸೋರಿಕೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಚಡಪಡಿಸುವಂತಾಗಿದೆ ಎಂದು ತಿಳಿಸಿದರು.[ಡೊನೇಷನ್ ಗೇಟ್ : ಬಿಜೆಪಿ ಬಣ್ಣ ಬಯಲು ಮಾಡಿದ ಕಾಂಗ್ರೆಸ್]
ಇದೇ ವೇಳೆಯಲ್ಲಿ ಮಾತನಾಡಿದ ಮತ್ತೊಬ್ಬ ಬಿಜೆಪಿ ನಾಯಕ ಗೋ. ಮದುಸೂದನ್, ಕೇಸ್ ಗಳು ಬದುಕಿದ್ದಿದ್ದರೆ ಜೀವ ಕೊಡಬಹುದಿತ್ತು
. ಸತ್ತಿರುವ ಕೇಸ್ ಗಳಿಗೆ ಸಿಎಂ ಜೀವ ಕೊಡೋಕೆ ಸಾಧ್ಯವಿಲ್ಲ.
ನಿಮ್ಮ ಎಲೆಯಲ್ಲಿ ಹೆಗಣ ಸತ್ತು ಬಿದ್ದಿದೆ
. ಮತ್ತೊಬ್ಬರ ಎಲೆಯಲ್ಲಿರುವ ನೊಣ ಓಡಿಸೋಕೆ ಬರ್ತಿದ್ದೀರಿ ಎಂದು ವ್ಯಂಗ್ಯವಾಡಿದರು.
ಆನಂತರ ಮಾತು ಮುಂದುವರಿಸಿ, ''ಸೋನಿಯಾ, ರಾಹುಲ್ ಗೆ ಸಾವಿರ ಕೋಟಿ ಕಪ್ಪ ಕೊಡ್ತೀರಿ
ಅವರಿಗೆ ಸಾವಿರಾರು ಕೊಟ್ಟಿದ್ದೀರ.
ನೀವು,ನಿಮ್ಮ ಮಂತ್ರಿಗಳು ಎಷ್ಟು ಸಾವಿರ ಕೋಟಿ ನುಂಗಿದ್ದೀರಿ. ಈಗ ಬಿಎಸ್ ವೈ ಮೇಲೆ ಕೇಸ್ ಹಾಕೋಕೆ ಹೊರಟಿದ್ದೀರ.
ನೀವು ಏನು ಬೇಕಾದ್ರೂ ಮಾಡಿ.
ನಿಮ್ಮ ಕಟ್ಟಾ ರೋಪ್ ಗೆ ಹೆದರೋರು ನಾವಲ್ಲ'' ಎಂದು ಮದುಸೂದನ್ ವಾಗ್ದಾಳಿ ನಡೆಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications