ಐದು ವರ್ಷ ಪೂರ್ಣಗೊಳಿಸಿದ ಎರಡನೇ ಮುಖ್ಯಮಂತ್ರಿ ಸಿದ್ದರಾಮಯ್ಯ!
ಬೆಂಗಳೂರು, ಮೇ 13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯನ್ನು ಸಂಪೂರ್ಣ ಐದು ವರ್ಷಗಳ ಕಾಲ ನಿಭಾಯಿಸಿದ ಎರಡನೇ ಮುಖ್ಯಮಂತ್ರಿ ಎಂಬ ಕೀರ್ತಿಗೆ ಭಾಜನರಾಗಿದ್ದು, ಭಾನುವಾರಕ್ಕೆ ಸರಿಯಾಗಿ ಐದು ವರ್ಷದ ಅವಧಿ ಪೂರ್ಣಗೊಳಿಸಿದ್ದಾರೆ.
ಈ ಹಿಂದೆ ನಾಲ್ಕವೇ ವಿಧಾನಸಭೆಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರು 1972ರ ಮಾರ್ಚ್ 20ರಿಂದ 1977ರ ಡಿಸೆಂಬರ್ 31ರವರೆಗೆ ಐದು ವರ್ಷ 286 ದಿನಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಅರಸು ಬಳಿಕ ಸಂಪೂರ್ಣ ಐದು ವರ್ಷಗಳ ಕಾಲ ಸಿಎಂ ಹುದ್ದೆ ನಿಭಾಯಿಸಿರುವುದು ಸಿದ್ದರಾಮಯ್ಯ ಒಬ್ಬರೇ.
2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದರು. 2013ರ ಮೇ 13ರಂದು ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಐದು ವರ್ಷಗಳ ಅವಧಿಯಲ್ಲಿ ಐಎಎಸ್ ಅಧಿಕಾರಿ ಡಿ.ಕೆ.ರವಿ, ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಗಳು, ಪುತ್ರ ಡಾ.ಯತೀಂದ್ರ ಪಾಲುದಾರಿಕೆ ಕಂಪನಿಗೆ ಲ್ಯಾಬ್ ಗುತ್ತಿಗೆ ನೀಡಿದ್ದ ಪ್ರಕರಣ, ಹ್ಯುಬ್ಲೋಟ್ ವಾಚ್ ಕಾಣಿಕೆ ಪ್ರಕರಣ ಹೀಗೆ ಹಲವು ಮುಜುಗರದ ಸನ್ನಿವೇಶಗಳನ್ನು ಎದುರಿಸಿದರೂ ತಮ್ಮ ನಾಯಕತ್ವಕ್ಕೆ ಚ್ಯುತಿ ಬಾರದಂತೆ ಯಶಸ್ವಿಯಾಗಿ ನಿರ್ವಹಿಸಿದ ಚಾಣಾಕ್ಷ ರಾಜಕಾರಣಿ ಸಿದ್ದರಾಮಯ್ಯ.
ಒಂದು ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಿಎಂ ಹುದ್ದೆ ನೀಡಬೇಕೆಂಬ ಪ್ರಬಲ ದಲಿತ ಮುಖ್ಯಮಂತ್ರಿ ಧ್ವನಿ ಎದ್ದಾಗಲೂ ಕೂಡ ಅಷ್ಟೇ ಜಾಣ್ಮೆಯಿಂದ ಹುದ್ದೆಗೆ ಚ್ಯುತಿ ಬಾರದಂತೆ ನೋಡಿಕೊಂಡ ಸಿದ್ದರಾಮಯ್ಯ ಅವರು ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಯಲ್ಲಿ ದೊರೆತ ಗೆಲುವಿನ ನಂತರ ಮತ್ತೆ ತಿರುಗಿ ನೋಡಲಿಲ್ಲ.
ಆರಂಭದಿಂದಲೇ ಅನ್ನಭಾಗ್ಯದಂತಹ ಜನಪ್ರಿಯ ಯೋಜನೆಗಳನ್ನು ಆರಂಭಿಸಿ ಇತ್ತೀಚಿನ ಇಂದಿರಾ ಕ್ಯಾಂಟೀನ್ ಯೋಜನೆ ತನಕ ತಮ್ಮ ಹಾಗೂ ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸುವಂತಹ ಕಾರ್ಯಕ್ರಮಗಳನ್ನೇ ನೀಡಿದರು. ವೀರಶೈವ ಲಿಂಗಾಯತ ಧರ್ಮ ವಿಭಜನೆ, ಟಿಪ್ಪು ಜಯಂತಿ ಹಾಗೂ ಜಾತಿ ಗಣತಿಯಂತಹ ವಿವಾದಾತ್ಮಕ ವಿಚಾರಗಳಲ್ಲೂ ಮೇಲುಗೈ ಸಾಧಿಸಿದ್ದರು.
ಸಿದ್ದರಾಮಯ್ಯ ನಾಯಕತ್ವದಲ್ಲೇ ಮತ್ತೊಂದು ವಿಧಾನಸಭೆ ಚುನಾವಣೆ ನಡೆಸುವ ನಿರ್ಧಾರಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್ ಹೈಕಮಾಂಡ್ ಬರುವಂತೆ ಮಾಡುವಲ್ಲೂ ಸಿದ್ದರಾಮಯ್ಯ ರಾಜಕೀಯ ನಿಪುಣತೆ ಎದ್ದು ಕಾಣುತ್ತದೆ. ಮೂಲ ಹಾಗೂ ವಲಸೆ ಕಾಂಗ್ರೆಸ್ ಎಂಬ ಧ್ವನಿಯನ್ನು ಸಿದ್ದರಾಮಯ್ಯ ಸಂಪೂರ್ಣ ಅಡಗಿಸಿದ್ದರೂ ಅಂತಹ ಅಭಿಪ್ರಾಯ ಪಕ್ಷದಲ್ಲಿ ಕೆಲಮಟ್ಟಿಗೆ ಮಡುಗಟ್ಟಿರುವುದನ್ನು ಕೂಡ ಸಂಪೂರ್ಣ ಅಲ್ಲಗಳೆಯುವಂತಿಲ್ಲ.
ಇಂತಹ ಪರಿಸ್ಥಿತಿಯಲ್ಲಿ ವಿಧಾನಸಭೆ ಅವಧಿ ಐದು ವರ್ಷ ಪೂರ್ಣಗೊಂಡಿದ್ದರಿಂದ ಮತ್ತೊಮ್ಮೆ ಜನಾದೇಶ ಬಯಸಿ ಕಾಂಗ್ರೆಸ್ ಚುನಾವಣೆ ಎದುರಿಸಿದೆ. ಟಿಕೆಟ್ ಹಂಚಿಕೆಯಲ್ಲೂ ಸಿದ್ದರಾಮಯ್ಯ ಪಕ್ಷದ ಆಂತರಿಕ ವಿಚಾರದಲ್ಲಿ ಹಿಡಿತ ಸಾಧಿಸಿದ್ದು, ಮೇ 15ರಂದು ಪ್ರಕಟಗೊಳ್ಳುವ ಲಿತಾಂಶ ಅವರ ಮುಂದಿನ ರಾಜಕೀಯ ಭವಿಷ್ಯಕ್ಕೆ ನಿರ್ಣಾಯಕವಾಗಲಿದೆ. ಹಾಗೆಯೇ ಕಾಂಗ್ರೆಸ್ ಪಕ್ಷಕ್ಕೂ ಅಷ್ಟೇ ನಿರ್ಣಾಯಕ ಕೂಡ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications