Get Updates
Get notified of breaking news, exclusive insights, and must-see stories!

ಗ್ಯಾರಂಟಿಗಳ ಬಗ್ಗೆ ಟೀಕಿಸಿದ ಮೋದಿಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 2: ಮಂಗಳವಾರ ಪುಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಟೀಕೆ ಮಾಡಿದ್ದಾರೆ.

ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ ಎಂದು ಟ್ವಿಟ್‌ ಮಾಡಿದ್ದಾರೆ.

Siddaramaiah countered Narendra Modi who criticized Congress guarantees

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ಕರ್ನಾಟಕದ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ ಎಂದು ಕರೆ ನೀಡಿದರು.

ಇಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಗುಡುಗುತ್ತಲೇ ಇದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಪ್ರಧಾನಿ ನರೇಂದ್ರ ಮೋದಿ ಅವರೇ?

Siddaramaiah countered Narendra Modi who criticized Congress guarantees

ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಬಿಜೆಪಿ ಸರ್ಕಾರ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1000 ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3000 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ ಪ್ರಧಾನಿ ನರೇಂದ್ರ ಮೋದಿ ಅವರೇ? ಎಂದು ಕೇಳಿದ್ದಾರೆ.

ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ ಪ್ರಧಾನಿ ಮೋದಿ ಅವರೇ?

ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರ್ಕಾರ ಅಂದಾಜು 1.25 ಲಕ್ಷ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ ಪ್ರಧಾನಿ ಮೋದಿ ಅವರೇ? ಡಬಲ್ ಎಂಜಿನ್ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ.

ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಅರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ ಪ್ರಧಾನಿ ನರೇಂದ್ರ ಮೋದಿ ಅವರೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+