ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಳ್ಳನೇ ಪೊಲೀಸ್ ಆಗಿರುವುದು ದುರಂತ: ಸಿದ್ದರಾಮಯ್ಯ ಲೇವಡಿ

|
Google Oneindia Kannada News

ಬೆಂಗಳೂರು, ಮಾರ್ಚ್ 16: 'ನಾನೂ ಚೌಕಿದಾರ' ಎಂದು ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಟ್ವೀಟ್‌ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯದ ಪ್ರತಿಕ್ರಿಯೆ ನೀಡಿದ್ದಾರೆ.

ದೇಶದಾದ್ಯಂತ ಬಿರುಗಾಳಿ ಎಬ್ಬಿಸಿರುವ ಮೋದಿಯವರ 'ಮೈ ಭಿ ಚೌಕಿದಾರ್' ದೇಶದಾದ್ಯಂತ ಬಿರುಗಾಳಿ ಎಬ್ಬಿಸಿರುವ ಮೋದಿಯವರ 'ಮೈ ಭಿ ಚೌಕಿದಾರ್'

ಕಳ್ಳನೇ ಪೊಲೀಸ್ ಆಗಿರುವುದು ದೇಶದ ದುರಂತ ಎಂದು ಸಿದ್ದರಾಮಯ್ಯ, ಮೋದಿಯನ್ನು ಟೀಕಿಸಿದ್ದಾರೆ.

#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ

"ನಿಮ್ಮ ಚೌಕಿದಾರ ದೇಶ ಸೇವೆಗೆ ಸದೃಢವಾಗಿ ನಿಂತಿದ್ದಾನೆ. ಆದರೆ ನಾನು ಒಬ್ಬಂಟಿಯಲ್ಲ. ಭ್ರಷ್ಟಾಚಾರ, ದುಷ್ಟಶಕ್ತಿಯ ವಿರುದ್ಧ ಹೋರಾಡುವ ಪ್ರತಿಯೊಬ್ಬರೂ ಚೌಕಿದಾರರೇ. ಭಾರತದ ಪ್ರಗತಿಗಾಗಿ ಹೋರಾಡುವ ಪ್ರತಿಯೊಬ್ಬರೂ ಚೌಕಿದಾರರೇ. ಇಂದು ಪ್ರತಿ ಭಾರತೀಯನೂ ಹೇಳುತ್ತಿದ್ದಾನೆ, 'ನಾನೂ ಚೌಕಿದಾರ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.

Siddaramaiah criticised narendra modi for his statement of Main Bhi Chowkidar

'ಮೇ ಭೀ ಚೌಕಿದಾರ್' ಎಂಬ ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಭಾರಿ ಮಟ್ಟದಲ್ಲಿ ಟ್ರೆಂಡ್ ಆಗಿದೆ. ಮೋದಿ ಅವರ ಹೇಳಿಕೆಯನ್ನು ಅನುಸರಿಸಿ ಅವರ ಬೆಂಬಲಿಗರು ಟ್ವೀಟ್ ಮಾಡುತ್ತಿದ್ದಾರೆ. ಇದು ವಿರೋಧಿಗಳಿಗೆ ಆಹಾರವಾಗಿ ಪರಿಣಮಿಸಿದೆ.

ಕಳ್ಳನೇ ಪೊಲೀಸ್ ಆಗಿ ಪೊಲೀಸರ ಗೌರವ ಕಳೆಯುತ್ತಿರುವುದು ಈ ದೇಶದ ದುರಂತ. ಈ ಸೋಂಕು ಊರೆಲ್ಲಾ ಹರಡಿ ದೇಶದ ಕಳ್ಳರೆಲ್ಲಾ ಪೊಲೀಸ್ ಆಗಲು ಹೊರಟವ್ರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
Congress leader Siddaramaiah criticised Prime Minister Narendra Modi on his Main Bhi Chowkidar statement in twitter. Thief impersonating as Policeman is the greatest tragedy of our times & an insult to the real ones, he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X