ಶಾಸಕರಿಗೆ ಬಿಜೆಪಿ ಆಮಿಷ: ಆಧಾರ ಇದೆ ಎಂದ ಸಿದ್ದರಾಮಯ್ಯ
ಬೆಂಗಳೂರು, ಜನವರಿ 1: ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 25-30 ಕೋಟಿ ರೂ. ಆಮಿಷ ಒಡ್ಡಿತ್ತು ಎಂಬ ತಮ್ಮ ಆರೋಪವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಅಲ್ಲದೆ, ಬಿಜೆಪಿ ವಿರುದ್ಧದ ತಮ್ಮ ಆರೋಪಕ್ಕೆ ಆಧಾರಗಳಿವೆ ಎಂದೂ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯು ಆಮಿಷ ಒಡ್ಡಿದ ವಿಚಾರದಲ್ಲಿ ಬಿಜೆಪಿ ವಿರುದ್ಧ ತಾವು ಬ್ಲೇಮ್ ಗೇಮ್ ಮಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ತಮ್ಮ ಆರೋಪಕ್ಕೆ ಅವರು ಬಿ.ಸಿ. ಪಾಟೀಲ್ ಅವರಿಗೆ ಬಿಜೆಪಿ ನೀಡಿದ್ದ ಆಫರ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಸಮಯ ಬಂದ ಬಳಿಕ ಇನ್ನೂ ಕೆಲವು ಶಾಸಕರಿಂದ ಈ ವಿಚಾರವನ್ನು ಬಹಿರಂಗಪಡಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಜೆಪಿಯಿಂದ ಶಾಸಕರಿಗೆ ಆಮಿಷ ವಿಚಾರದಲ್ಲಿ ನಾನು ಬಿಜೆಪಿ ಮೇಲೆ ಬ್ಲೇಮ್ ಗೇಮ್ ಮಾಡುತ್ತಿಲ್ಲ. ಆಧಾರ ಇಟ್ಟುಕೊಂಡೇ ಹೇಳಿದ್ದೀನಿ.
— Siddaramaiah (@siddaramaiah) 1 January 2019
ಶಾಸಕ ಬಿ.ಸಿ.ಪಾಟೀಲ್ ಗೆ ಅವರು ಆಫರ್ ಕೊಟ್ಟಿರಲಿಲ್ವ? ಸಮಯ ಬರಲಿ, ಇನ್ನೂ ಕೆಲವರಿಂದ ಈ ವಿಚಾರವನ್ನು ಬಹಿರಂಗಪಡಿಸುತ್ತೇನೆ.@INCKarnataka
ಬಿಜೆಪಿಯಿಂದ ಶಾಸಕರಿಗೆ ಆಮಿಷ ವಿಚಾರದಲ್ಲಿ ನಾನು ಬಿಜೆಪಿ ಮೇಲೆ ಬ್ಲೇಮ್ ಗೇಮ್ ಮಾಡುತ್ತಿಲ್ಲ. ಆಧಾರ ಇಟ್ಟುಕೊಂಡೇ ಹೇಳಿದ್ದೀನಿ. ಶಾಸಕ ಬಿ.ಸಿ.ಪಾಟೀಲ್ ಗೆ ಅವರು ಆಫರ್ ಕೊಟ್ಟಿರಲಿಲ್ವ? ಸಮಯ ಬರಲಿ, ಇನ್ನೂ ಕೆಲವರಿಂದ ಈ ವಿಚಾರವನ್ನು ಬಹಿರಂಗಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯು ಕುದುರೆ ವ್ಯಾಪಾರಕ್ಕೆ ಇಳಿದಿದೆ. ಶಾಸಕರಿಗೆ 20-30 ಕೋಟಿ ನೀಡುವುದಾಗಿ ಆಮಿಷ ಒಡ್ಡಲಾಗುತ್ತಿದೆ. ಈ ಹಣ ಎಲ್ಲಿಂದ ಬರುತ್ತಿದೆ ಇದು ಭ್ರಷ್ಟಾಚಾರದ ಹಣವಲ್ಲವೆ ಎಂದು ಅವರು ಪ್ರಶ್ನೆ ಮಾಡಿದ್ದರು.
104 ಶಾಸಕರನ್ನಿಟ್ಟುಕೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಪ್ರಜಾಪ್ರಭುತ್ವದಲ್ಲಿ ಬಹುಮತ ಇದ್ದರಷ್ಟೆ ಸರ್ಕಾರ ರಚಿಸಲು ಸಾಧ್ಯ ಅದರ ಅರಿವು ಆ ಪಕ್ಷಕ್ಕೆ ಇರಬೇಕು. ಬಿಜೆಪಿ ಯಾವ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಯಾವ ಶಾಸಕರೂ ಬಿಜೆಪಿಯ ಆಮಿಷಕ್ಕೆ ಬಲಿ ಆಗುವುದಿಲ್ಲ ಎಂದಿದ್ದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ











Click it and Unblock the Notifications