ಉಪಚುನಾವಣೆ, ಕೆಪಿಸಿಸಿ ಪದಾಧಿಕಾರಿ ನೇಮಕ ಕುರಿತು ಸೋನಿಯಾಗಾಂಧಿ ಜೊತೆ ಚರ್ಚೆ
ಬೆಂಗಳೂರು ಅಕ್ಟೋಬರ್ 5, ರಾಜ್ಯದಲ್ಲಿ ಬರುತ್ತಿರುವ ಎರಡು ವಿಧಾನಸಭಾ ಉಪಚುನಾವಣೆ ಮತ್ತು ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಸಂಬಂಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರೊಂದಿಗೆ ಚರ್ಚೆ ನಡೆಸಿದರು.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಆಹ್ವಾನದ ಮೇರೆಗೆ ಸಿದ್ದರಾಮಯ್ಯ ಅವರ ಮಂಗಳವಾರ ಬೆಳಿಗ್ಗೆ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿನ ಕೆಲವು ಬದಲಾವಣೆಗಳು, ಮುಂಚೂಣಿ ಘಟಕಗಳು ಹಾಗೂ ಜಿಲ್ಲಾಧ್ಯಕ್ಷರುಗಳ ನೇಮಕ ಮತ್ತು ಬದಲಾವಣೆ ಕುರಿತು ಭೇಟಿ ಸಂದರ್ಭದಲ್ಲಿ ಚರ್ಚಿಸಲಾಯಿತು.
"ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕೆಪಿಸಿಸಿ ಪದಾಧಿಕಾರಿಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಬೇಕಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆವರೊಂದಿಗೆ ಈ ಕುರಿತು ಮಾತ್ರ ಚರ್ಚೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಪಟ್ಟಿಯೊಂದನ್ನೂ ನೀಡಿದ್ದೇನೆ. ಇನ್ನೂ ಹೆಚ್ಚಿನ ವಿಷಯಗಳನ್ನು ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ. ಅದು ಪಕ್ಷದ ಆಂತರಿಕ ವಿಚಾರಗಳು" ಎಂದು ಸಿದ್ದರಾಮಯ್ಯ ಹೇಳಿದರು.

ರಾಷ್ಟ್ರರಾಜಕಾರಣದ ಚರ್ಚೆ ಆಗಿಲ್ಲ:
"ಸೋನಿಯಾಗಾಂಧಿ ಅವರು ನನ್ನನ್ನು ರಾಷ್ಟ್ರರಾಜಕಾರಣಕ್ಕೆ ಆಹ್ವಾನಿಸಿದರು ಎಂಬುದು ಸುಳ್ಳು. ಈ ಕುರಿತು ಯಾವುದೇ ಪ್ರಸ್ತಾಪ ಆಗಿಲ್ಲ. ನಾನೂ ಸಹ ಮಾತನಾಡಿಲ್ಲ. ಈ ಮೊದಲು ರಾಹುಲ್ ಗಾಂಧಿ ಅವರು ನನ್ನನ್ನು ಕರೆದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗುವಂತೆ ಸೂಚಿಸಿದ್ದರು. ಆದರೆ, ನಾನು ಬೇಡ ಎಂದಿದ್ದೆ. ಬಳಿಕ ಅವರು ಕಾರ್ಯಕಾರಿ ಸಮಿತಿಯ ಸದಸ್ಯನನ್ನಾಗಿ ನೇಮಿಸಿದರು. ಕೆಲ ದಿನಗಳ ಬಳಿಕ ಅದಕ್ಕೂ ರಾಜೀನಾಮೆ ನೀಡಿದ್ದೆ. ಪಂಚರಾಜ್ಯದ ಚುನಾವಣೆಗೆ ನನ್ನನ್ನು ಬಳಸಿಕೊಳ್ಳುತ್ತಾರೆ ಎಂಬುದು ಸುಳ್ಳು. ಈ ಬಗ್ಗೆ ಚರ್ಚೆಯೇ ಆಗಿಲ್ಲ'' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೋದಿಯದು ಹಿಟ್ಲರ್ ಸರ್ಕಾರ
"ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕಾರು ನುಗ್ಗಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿದೆ. ಇದು ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನೆನಪಿಸುತ್ತದೆ. ಈ ಸಂಬಂಧ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮಗನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೂಡಲೇ ಆತನನ್ನು ಜೈಲಿಗೆ ಕಳುಹಿಸಬೇಕು ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆ ಪಡೆಯಬೇಕು. ರೈತರಿಗೆ ಸಾಂತ್ವನ ಹೇಳಲು ಹೋಗುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಮೇಲೂ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಮತ್ತೊಂದೆಡೆ ದೆಹಲಿಯಲ್ಲಿ ರೈತರು ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ. ಇದೆಲ್ಲವನ್ನೂ ನೋಡಿದರೆ ಮೋದಿಯದು ಹಿಟ್ಲರ್ ಸರ್ಕಾರ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.
"ಬಿಜೆಪಿಯವರು ಮತ್ತು ಆರ್ಎಸ್ಎಸ್ನವರಿಗೆ ನೀವು ತಾಲಿಬಾನಿಗಳು ಎಂದರೆ ಸಿಟ್ಟು ಬರುತ್ತದೆ. ಆದರೆ ಅವರು ಸದಾ ಪ್ರಜಾಪ್ರಭುತ್ವದ ವಿರುದ್ಧ ಧಮನಕಾರಿಯಾಗಿಯೇ ವರ್ತಿಸುತ್ತಾರೆ. ಅವರಿಗೆ ಸತ್ಯ ಅಹಿಂಸೆಯ ಬದಲು ಅಸತ್ಯ ಮತ್ತು ಹಿಂಸೆಯ ಮೇಲೆಯೇ ಹೆಚ್ಚಿನ ನಂಬಿಕೆ ಇದೆ" ಎಂದು ಟೀಕಾಪ್ರಹಾರ ನಡೆಸಿದರು.
ಶಾಸಕ ಜಮೀರ್ ಅಹಮದ್ ಸಿದ್ದರಾಮಯ್ಯ ಜೊತೆಗಿದ್ದರು.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications