Muda Scam: ಮುಡಾ ಮೇಲೆ ಇಡಿ ಕಣ್ಣು: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಕುತ್ತು?
ಬೆಂಗಳೂರು, ಜನವರಿ 18: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆ ಮತ್ತಷ್ಟು ಬಿಗಿಯಾಗುತ್ತಿದೆ. ಜಾರಿ ನಿರ್ದೇಶನಾಲಯ ಪ್ರಕರಣದ ಸಂಬಂಧ ಒಟ್ಟು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ತಿಳಿಸಿದೆ.
ಈ ಕುರಿತು ED ಟ್ವೀಟ್ ಮೂಲಕ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಯ ಒಟ್ಟು ಮೌಲ್ಯ 300 ಕೋಟಿ ರೂಪಾಯಿಗಳಾಗಿವೆ.

ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳಿಂದ ಯಾವುದೇ ಕ್ಷಣದಲ್ಲಾದರೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ಇಡಿ ಅಧಿಕಾರಿಗಳು ನಿನ್ನೆ ಪತ್ರಿಕ ಪ್ರಕಟಣೆ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 300 ಕೋಟಿ ಮೌಲ್ಯದ ಹಣ ಜಪ್ತಿ ಮಡಿಕೊಂಡಿದ್ದು, ಈ ಹಗರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ರಾಜಕೀಯ ನಾಯಕರು ಸೇರಿ ಬೇರೆ ಬೇರೆ ವ್ಯಕ್ತಿಗಳು ಬೇನಾಮಿ ನಿವೇಶನ ಪಡೆದುಕೊಂಡಿರುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಹಾಗಾಗಿ ಇದೀಗ ಯಾವುದೇ ಕ್ಷಣದಲ್ಲಾದರೂ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಸ್ನೇಹಮಯಿ ಕೃಷ್ಣ ದೂರಿನನ್ವಯ ತನಿಖೆ ನಡೆಸಿದ್ದ ED ಈಗ ಆಸ್ತಿ ಜಪ್ತಿ ಮಾಡಿದೆ.
ಜಾರಿ ನಿರ್ದೇಶನಾಲಯ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ರೂ. 300 ಕೋಟಿ ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇಡಿ ಹೇಳಿದೆ.
ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ವಿಪಕ್ಷಗಳು ಮುಡಾ ಹಗರಣದ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿವೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications