ಗುಡ್ ನ್ಯೂಸ್; ಮಳೆಯಿಂದ ರೈತರ ಬೆಳೆಹಾನಿ: ಪರಿಹಾರ ಬಿಡುಗಡೆ ಬಗ್ಗೆ ಮಾಹಿತಿ ಕೊಟ್ಟ ಸಿದ್ದರಾಮಯ್ಯ
ಕಲಬುರಗಿ, ಸೆಪ್ಟೆಂಬರ್ 30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ಮಾಹಿತಿ ಪಡೆದರು. ಮಳೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದರು.
ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದು, ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ಕೊಟ್ಟರೆ ಒಳ್ಳೆಯದು ಎನ್ನುವ ಅಭಿಪ್ರಾಯಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ಇಲ್ಲದಿದ್ದರೆ ಕೆಲವರಿಗೆ ಮಾತ್ರ ಪರಿಹಾರ ಬಂದಿದೆ, ನಮಗೆ ಬಂದಿಲ್ಲ ಎನ್ನುವ ಗೊಂದಲ, ಅನುಮಾನಗಳು ಶುರುವಾಗಬಹುದು. ಈ ಕಾರಣಕ್ಕೇ ಎಲ್ಲರಿಗೂ ಒಟ್ಟಿಗೇ ಪರಿಹಾರ ಒದಗಿಸುವುದು ಸೂಕ್ತವಾಗಿದೆ. ಸದ್ಯ ಜಮೀನಿಗೆ ಕಾಲಿಡುವ ಪರಿಸ್ಥಿತಿ ಇಲ್ಲ. ಪ್ರವಾಹ ಇಳಿಕೆಯಾದ ಬಳಿಕ ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ತುದಿಗಾಲಲ್ಲಿ ಇದೆ. ಇದಕ್ಕೆ ಸಮೀಕ್ಷೆಯ ಅಗತ್ಯವಿದೆ ಎಂದರು. ಅಕ್ಕ ಪಕ್ಕದ ಪ್ರವಾಹ ಇಲ್ಲದ ಜಿಲ್ಲೆಗಳಿಂದ ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ನಿಯೋಜಿಸುವ ಬಗ್ಗೆ ಯೂ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸದ್ಯ ಜನ, ಜನವಾರು ಪ್ರಾಣ ಹಾನಿ ಬಗ್ಗೆ ಸಮೀಕ್ಷೆ ಸಿಕ್ಕಿದೆ. ಆದರೆ ಪೂರ್ಣ ಸಮೀಕ್ಷೆ ಆಗಿಲ್ಲದ ಕಾರಣದಿಂದ ಮನೆಗಳ ಹಾನಿ ಬಗ್ಗೆ ಪೂರ್ಣ ವರದಿ ಇಲ್ಲ. ಸಮೀಕ್ಷೆ ಬಳಿಕ ಸರಿಯಾದ ಲೆಕ್ಕ ಸಿಗುತ್ತದೆ. ಆಗ ಎಲ್ಲಾ ಸಂತ್ರಸ್ಥರಿಗೂ ಪರಿಹಾರ ನೀಡಲು ಅನುಕೂಲ ಆಗುತ್ತದೆ. ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ಮತ್ತು ಪ್ರವಾಹ ಇದಾಗಿರುವುದರಿಂದ ಸಂಪರ್ಕ ರಸ್ತೆಗಳು, ಸೇತುವೆ, ಬ್ಯಾರೇಜ್ ಗಳು ತುಂಬಾ ಹಾನಿಯಾಗಿವೆ, ಮುಳುಗಡೆಯಾಗಿವೆ. ಹೀಗಾಗಿ ಈ ಬಗ್ಗೆಯೂ ಸಮೀಕ್ಷೆ ಮಾಡಿ ವರದಿ ನೀಡಲು ಸೂಚನೆ ನೀಡಲಾಯಿತು.
ಮಹಾರಾಷ್ಟ್ರ, ಉಜನಿಯಲ್ಲಾಗುವ ಮಳೆ ಜೊತೆಗೆ ನಮ್ಮಲ್ಲೂ ಬೀಳುತ್ತಿರುವ ದಾಖಲೆ ಮಳೆ ಸೇರಿ ಅನಾಹುತದ ಪ್ರಮಾಣ ಹೆಚ್ಚಾಗುತ್ತಿದೆ. ಅಗತ್ಯ ಇರುವ ಕಡೆ ತಾತ್ಕಾಲಿಕ, ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಲು ಸಿಎಂ ಸೂಚಿಸಿದರು. ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ fitness ಪರೀಕ್ಷಿಸುವುದನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಗಮನಿಸಬೇಕು. Fitness ಇಲ್ಲದಿದ್ದರೆ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯವಾಗಿ ಮಾಡಬೇಕು. ಇದರಲ್ಲಿ ನಿರ್ಲಕ್ಷ್ಯ ಸಹಿಸಲ್ಲ ಎಂದು ಖಡಕ್ ಸೂಚನೆ ನೀಡಲಾಯಿತು.
ಹಣಕ್ಕೆ ಕೊರತೆ ಇಲ್ಲ. PD ಖಾತೆಯಲ್ಲಿ ಹಣ ಸಂಗ್ರಹ ಇದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಿರಂತರವಾಗಿ ನಡೆಸಿ. ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದ ಗ್ರಾಮಗಳ ಸ್ಥಳಾಂತರದ ಬಗ್ಗೆ ಹಿಂದಿನ ಎಲ್ಲಾ ಇಲಾಖೆ ಅನುಭವಗಳನ್ನು ಪರಿಗಣಿಸಿ ಸೂಕ್ತ ಯೋಜನೆ ರೂಪಿಸಲು ಸೂಚನೆ ನೀಡಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Karnataka: ರಾಜ್ಯದಲ್ಲಿ ಹೆಚ್ಚಾಯ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 3 ವರ್ಷದಲ್ಲಿ 27 ಸಾವು -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ











Click it and Unblock the Notifications