Siddaramaiah: ಸಿಎಂ ಕುರ್ಚಿ ಕಿತ್ತಾಟದ ನಡುವೆ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ಶಾಕ್
ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ತುಸು ತಣ್ಣಗಾದಂತಿದೆ. ಮತ್ತೊಂದೆಡೆ ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನ ಇರುವ ಕಾರಣಕ್ಕೆ ಪಕ್ಷದಲ್ಲಿ ಯಾವುದೇ ಗೊಂದಲ ಇರಬಾರದು ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಬ್ರೇಕ್ಫಾಸ್ಟ್ ಮೀಟಿಂಗ್ ಮಾಡುವ ಮೂಲಕ ಎಲ್ಲ ಗೊಂದಲಗಳಿಗೆ ಬ್ರೇಕ್ ಹಾಕಿದ್ದರು. ಇನ್ನೇನು ಎಲ್ಲ ಗೊಂದಲಗಳು ಪರಿಹಾರವಾಯ್ತಲ್ಲ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ಬಿಗ್ಶಾಕ್ ನೀಡಿದೆ.
ಮುಡಾ ಕೇಸ್ನಿಂದಾಗಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುವ ಮಟ್ಟಕ್ಕೆ ತಲುಪಿತ್ತು. ಆದರೆ ಈ ಪ್ರಕರಣದಿಂದ ಅವರಿಗೆ ಇತ್ತೀಚೆಗೆ ರಿಲೀಫ್ ಕೂಡ ಸಿಕ್ಕಿತ್ತು. ಇದೀಗ ಮತ್ತೊಂದು ಹಳೆಯ ಪ್ರಕರಣವು ಸಿದ್ದರಾಮಯ್ಯ ಅವರ ಬೆನ್ನುಹತ್ತಿದೆ. 2023ರಲ್ಲಿ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಸಿದ್ದರಾಮಯ್ಯ ಗೆದ್ದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈಗ ಇದೇ ಪ್ರಕರಣ ಸಂಬಂಧಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕೆ.ಶಂಕರ್ ಎಂಬುವವರು ಸಿದ್ದರಾಮಯ್ಯ ಅವರ ವಿರುದ್ಧ ಈ ಆರೋಪ ಮಾಡಿದ್ದರು. ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಅವರ ಆಯ್ಕೆಯನ್ನು ಪ್ರಶ್ನಿಸಿದ್ದರು. ಈ ಹಿಂದೆ ಶಂಕರ್ ಅವರ ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದರು. ಈ ಗೆಲುವನ್ನು ಪ್ರಶ್ನಿಸಿ ಶಂಕರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ. ಇಂದು ಇದರ ವಿಚಾರಣೆಯೂ ನಡೆಸಿ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ. ಇದರಿಂದ ಸಿಎಂ ಕುರ್ಚಿ ಕಿತ್ತಾಟದ ಟೆನ್ಷನ್ನಲ್ಲಿರುವ ಸಿದ್ದರಾಮಯ್ಯ ಅವರಿಗೆ ಮತ್ತೊಂದು ವಿಘ್ನ ಎದುರಾಗಿದೆ.
ಸಿದ್ದರಾಮಯ್ಯ ಮೇಲಿನ ಆರೋಪವೇನು?
ಸಿದ್ದರಾಮಯ್ಯ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿದ್ದರು. ಇದರಿಂದಲೇ ಅವರು ಗೆಲುವು ಸಾಧಿಸಿದ್ದಾರೆ. ಆಮಿಷಗಳನ್ನು ನೀಡಿ ಮತದಾರರನ್ನು ಸೆಳೆಯುವುದು ಚುನಾವಣಾ ನಿಯಮಗಳಿಗೆ ವಿರುದ್ಧ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮೊದಲೇ ಗೊತ್ತಿತ್ತು. ಅಲ್ಲದೇ ಗ್ಯಾರಂಟಿ ಕಾರ್ಡ್ ಮೇಲೂ ಅವರೇ ಸಹಿ ಮಾಡುವ ಮೂಲಕ ಮತದಾರರಿಗೆ ಆಮಿಷ ನೀಡಿ ಮತ ಕೇಳಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರ ಆಯ್ಕೆ ಅಸಿಂಧುಗೊಳಿಸಿ ಎಂದು ಮೈಸೂರಿನ ವರುಣ ಹೋಬಳಿಯ ಶಂಕರ್ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹಳೆಯ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications