ತಿನ್ನಲು ಬರುವುದು ಅಕ್ಕಿಯೇ ಹೊರತು ಹಣವಲ್ಲ! ಕರ್ನಾಟಕ ‘ಅಕ್ಕಿ’ ಕದನದಲ್ಲಿ ಗೆಲುವು ಯಾರಿಗೆ? ಸೋಲು ಯಾರಿಗೆ?
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಈಗ ಅಕ್ಕಿ ಕದನ ಬಲು ಜೋರಾಗಿದೆ. ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕದನಕ್ಕೆ ಇಳಿದಿದ್ದರೆ, ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧವೇ ಆರೋಪ ಮಾಡುತ್ತಿದೆ. ಹೀಗಾಗಿ ಅನ್ನಭಾಗ್ಯ ಜಾರಿ ಆಗುತ್ತಾ? ಇಲ್ಲವಾ? ಅಂತಾ ರಾಜ್ಯದ ಜನರು ಚಿಂತೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್ & ಬಿಜೆಪಿ ಮಾತ್ರ ಇದೇ ವಿಚಾರವನ್ನ ಅಸ್ತ್ರ ಮಾಡಿಕೊಂಡು ಒಬ್ಬರ ಮೇಲೊಬ್ಬರು ಯುದ್ಧ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ವಿಚಾರದಲ್ಲಿ ಬಿಜೆಪಿ & ಕಾಂಗ್ರೆಸ್ ವಾರ್ ಮುಂದುವರಿದಿದೆ. ಈ ಮೂಲಕ ಅಕ್ಕಿ ವಿಚಾರಕ್ಕೆ ಕಿರಿಕ್ ಕೂಡ ಜೋರಾಗುತ್ತಿದೆ, ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ ಪಡೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಅದಕ್ಕೆ ಬಿಜೆಪಿ ನಾಯಕರು ಕೂಡ ಉತ್ತರ ಕೊಡುತ್ತಿದ್ದಾರೆ. ಅಲ್ಲದೆ ಯೋಜನೆ ಜಾರಿ ಮಾಡುವಾಗ ಕೇಂದ್ರದ ಬಳಿ ಅನುಮತಿ ಪಡೆದಿದ್ರಾ? ಎಂಬ ಪ್ರಶ್ನೆ ಕೂಡ ಕೇಳಿಬರುತ್ತಿದೆ. ಆದರೆ ಇದೇ ಹೊತ್ತಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಾಡ್ಗಿಚ್ಚೇ ಹೊತ್ತಿಕೊಂಡಿದೆ (Congress Guarantee).

'ತಿನ್ನಲು ಬರುವುದು ಅಕ್ಕಿಯೇ ಹೊರತು ಹಣವಲ್ಲ'
ಹೌದು, ಬಿಜೆಪಿ ವಿರುದ್ಧ ಅಕ್ಕಿ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಗರಂ ಆಗಿದೆ. ಅದರಲ್ಲೂ ಇದೇ ವಿಚಾರವನ್ನ ಅಸ್ತ್ರ ಮಾಡಿಕೊಂಡು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿಯನ್ನೂ ನಡೆಸಲಾಗುತ್ತಿದೆ. ಟ್ವಿಟ್ಟರ್ನಲ್ಲಿ 'ಅನ್ನಭಾಗ್ಯದಲ್ಲಿ ಅಕ್ಕಿಯ ಬದಲು ಹಣ ಕೊಡಿ ಎನ್ನುತ್ತಿದ್ದಾರೆ @ikseshwarappa ಹಾಗೂ ಇತರ @BJP4Karnataka ನಾಯಕರು. ತಿನ್ನಲು ಬರುವುದು ಅಕ್ಕಿಯೇ ಹೊರತು ಹಣವಲ್ಲ! ಬಿಜೆಪಿಗರಿಗೆ ಹಣವನ್ನೇ ತಿಂದು ಅಭ್ಯಾಸವಿರಬಹುದು ಆದರೆ ಜನಸಾಮಾನ್ಯರು ತಿನ್ನುವುದು ಅನ್ನವನ್ನ! ಹಣ ತಿನ್ನುವ ಬಿಜೆಪಿಗೆ ಅನ್ನ ತಿನ್ನುವವರ ಸಂಕಷ್ಟ ಅರ್ಥವಾಗುವುದು ಅಸಾಧ್ಯ!' ಎಂದಿದೆ ಕಾಂಗ್ರೆಸ್.
ಅನ್ನಭಾಗ್ಯದಲ್ಲಿ ಅಕ್ಕಿಯ ಬದಲು ಹಣ ಕೊಡಿ ಎನ್ನುತ್ತಿದ್ದಾರೆ @ikseshwarappa ಹಾಗೂ ಇತರ @BJP4Karnataka ನಾಯಕರು.
— Karnataka Congress (@INCKarnataka) June 19, 2023
ತಿನ್ನಲು ಬರುವುದು ಅಕ್ಕಿಯೇ ಹೊರತು ಹಣವಲ್ಲ!
ಬಿಜೆಪಿಗರಿಗೆ ಹಣವನ್ನೇ ತಿಂದು ಅಭ್ಯಾಸವಿರಬಹುದು ಆದರೆ ಜನಸಾಮಾನ್ಯರು ತಿನ್ನುವುದು ಅನ್ನವನ್ನ!
ಹಣ ತಿನ್ನುವ ಬಿಜೆಪಿಗೆ ಅನ್ನ ತಿನ್ನುವವರ ಸಂಕಷ್ಟ ಅರ್ಥವಾಗುವುದು ಅಸಾಧ್ಯ!
ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ತಿರುಗೇಟು!
ಕೇಂದ್ರಸರ್ಕಾರ ಅಕ್ಕಿ ಕೊಡುವ ವಿಚಾರಕ್ಕೆ ರಾಜಕೀಯ ಮಾಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕದ ಪ್ರತಿ ಜಿಲ್ಲಾ ಕೇಂದ್ರದಲ್ಲೂ ಹೋರಾಟಕ್ಕೆ ಕರೆಯನ್ನ ಕೊಟ್ಟಿದ್ದಾರೆ. ಈ ಕುರಿತು ಬಿಜೆಪಿ ಕೂಡ ಟ್ವೀಟ್ ಮಾಡಿ ತಿರುಗೇಟು ನೀಡಿದ್ದು, 'ಅನ್ನಭಾಗ್ಯಕ್ಕೆ ಅಕ್ಕಿ ಕೊಂಡುಕೊಳ್ಳಲೂ ಆಗದ, ಅಕ್ಕಿ ಕೊಡಲೂ ಆಗದ "ರಾಜ್ಯ ಕಾಂಗ್ರೆಸ್ ಸರ್ಕಾರದ" ವಿರುದ್ಧ ರಾಜ್ಯ ಕಾಂಗ್ರೆಸ್ನಿಂದ ನಾಳೆ ಜೂನ್ 20ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ !!! ದಯವಿಟ್ಟು ಪಾಲ್ಗೊಳ್ಳಿ!' ಎಂದು ಲೇವಡಿ ಮಾಡಿದೆ. ಈ ಮೂಲಕ ಎರಡೂ ಪಕ್ಷದ ನಡುವೆ ಅಕ್ಕಿ ವಾರ್ ಜೋರಾಗುತ್ತಿದೆ.
ಅನ್ನಭಾಗ್ಯಕ್ಕೆ ಅಕ್ಕಿ ಕೊಂಡುಕೊಳ್ಳಲೂ ಆಗದ, ಅಕ್ಕಿ ಕೊಡಲೂ ಆಗದ “ರಾಜ್ಯ ಕಾಂಗ್ರೆಸ್ ಸರ್ಕಾರದ” ವಿರುದ್ಧ ರಾಜ್ಯ ಕಾಂಗ್ರೆಸ್ನಿಂದ ನಾಳೆ ಜೂನ್ 20ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ !!!
— BJP Karnataka (@BJP4Karnataka) June 19, 2023
ದಯವಿಟ್ಟು ಪಾಲ್ಗೊಳ್ಳಿ! 😉 pic.twitter.com/Qg3oasuyuv
ಬಿಜೆಪಿಯಿಂದ 'ಗ್ಯಾರಂಟಿ ವಂಚನೆ' ಆರೋಪ
ಹಾಗೇ ಮತ್ತೊಂದು ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯದ ಕುರಿತಾಗಿ ಬಿಜೆಪಿ ಟ್ವೀಟ್ ಮಾಡಿದೆ. 'ಗ್ಯಾರಂಟಿ ವಂಚನೆಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ @INCKarnataka ಕ್ಕೆ ಇರುವುದು ಸ್ವಾರ್ಥ ಚಿಂತನೆ ಮಾತ್ರ. ಮುಖ್ಯಮಂತ್ರಿ @sidaramaiah ಮತ್ತು ಉಪಮುಖ್ಯಮಂತ್ರಿ @DKShivakumar ಅವರಿಗೆ ಇರುವುದು ಎರಡೇ - ಅಧಿಕಾರದ ದಾಹ, ಮತ್ತೊಂದು ಅಭದ್ರತಾ ಭಾವ. ಹೈಕಮಾಂಡ್ ಕಲೆಕ್ಷನ್ ಏಜೆಂಟ್ ರಣದೀಪ್ ಸುರ್ಜೇವಾಲರವರಿಗೆ ರಾಜ್ಯದ ಸಬ್-ಏಜೆಂಟ್ ತಾನಾಗಬೇಕೆಂಬುದೇ ಇಬ್ಬರ ಹೆಬ್ಬಯಕೆ. ಪರಿಣಾಮವಾಗಿ ಒಳಗುದ್ದಾಟ ಮತ್ತು ಕಾಲೆಳೆಯುವಿಕೆಯಲ್ಲೇ #ATMsarkara ನಿರತವಾಗಿದೆ.' ಎಂದು ಕಾಂಗ್ರೆಸ್ ಕಾಲೆಳೆದಿದೆ.
ಗ್ಯಾರಂಟಿ ವಂಚನೆಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ @INCKarnatakaಕ್ಕೆ ಇರುವುದು ಸ್ವಾರ್ಥ ಚಿಂತನೆ ಮಾತ್ರ.
— BJP Karnataka (@BJP4Karnataka) June 19, 2023
ಮುಖ್ಯಮಂತ್ರಿ @sidaramaiah ಮತ್ತು ಉಪಮುಖ್ಯಮಂತ್ರಿ @DKShivakumar ಅವರಿಗೆ ಇರುವುದು ಎರಡೇ - ಅಧಿಕಾರದ ದಾಹ, ಮತ್ತೊಂದು ಅಭದ್ರತಾ ಭಾವ.
ಹೈಕಮಾಂಡ್ ಕಲೆಕ್ಷನ್ ಏಜೆಂಟ್ ರಣದೀಪ್ ಸುರ್ಜೇವಾಲರವರಿಗೆ ರಾಜ್ಯದ ಸಬ್… pic.twitter.com/beWhUUPLh5
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications