ಸಿದ್ದರಾಮಯ್ಯ ವಿರುದ್ಧ ರೆಬೆಲ್ ಆದ ಶಾಸಕರಿಗೆ ಮಹತ್ವದ ಸ್ಥಾನ : ಯಾವ ಹುದ್ದೆ? ಇಲ್ಲಿದೆ ಮಾಹಿತಿ
ಬೆಂಗಳೂರು,ಡಿಸೆಂಬರ್ 30: ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಪಡೆಯಲು ಕಾಂಗ್ರೆಸ್ ಟಾರ್ಗೆಟ್ ಹಾಕಿಕೊಂಡಿದೆ. ಅದರಂತೆ ಕಾಂಗ್ರೆಸ್ ಪಾಳಯದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಲು ಪಕ್ಷದಲ್ಲಿ ಬಂಡಾಯಗೊಂಡ ಶಾಸಕರ ಅಸಮಾಧಾನವನ್ನ ಶಮನಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ.
ಹೌದು, ಮಂತ್ರಿಗಿರಿ ಮೇಲೆ ಕಣ್ಣೀಟ್ಟ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕೆಲ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಈ ಅಸಮಾಧಾನ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಹೆಚ್ಚು ಪರಿಣಾಯ ಬೀರಲಿದೆ ಎಂಬ ಲೆಕ್ಕಾಚಾರವನ್ನ ಹಾಕಿಕೊಂಡಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಬೇಸರಗೊಂಡ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಸಿದ್ದರಾಮಯ್ಯ ಪ್ಲಾನ್ ಹಾಕಿಕೊಂಡಿದ್ರು, ಆದರೆ ನಿಗಮ ಮಂಡಳಿಯನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ರೆಬಲ್ ಶಾಸಕರಿಗೆ ಮಹತ್ವದ ಸ್ಥಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು ರೆಬೆಲ್ ಆಗಿರುವ ಬಸವರಾಜ್ ರಾಯರೆಡ್ಡಿ, ಬಿ.ಆರ್ ಪಾಟೀಲ್ ಹಾಗೂ ಆರ್.ವಿ ದೇಶಪಾಂಡೆಗೆ ವಿಶೇಷ ಹುದ್ದೆಗೆ ನೇಮಕ ಮಾಡಲಾಗಿದೆ. ಅಲ್ಲದೇ ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಈ ಹಿಂದೆ ಶಾಸಕರ ಪತ್ರಗಳಿಗೆ ಸಚಿವರು ಕಿಮ್ಮತ್ತು ನೀಡುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದ ಹಿರಿಯ ಶಾಸಕರಿಗೆ ಇದೀಗ ಸಿಎಂ ಸಿದ್ದರಾಮಯ್ಯ ಮಹತ್ತರ ಹುದ್ದೆಗಳನ್ನು ನೀಡಿದ್ದಾರೆ.

ಮೂವರು ಹಿರಿಯ ಶಾಸಕರಾದ ಆರ್. ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ ಮತ್ತು ಬಿ ಆರ್ ಪಾಟೀಲ್ ಅವರಿಗೆ ಸರ್ಕಾರದಲ್ಲಿ ಮಹತ್ವದ ಹುದ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಇವರ ನೇಮಕಾತಿ ಕುರಿತು ಆದೇಶ ಹೊರಡಿಸಲಾಗಿದೆ. ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
-
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ












Click it and Unblock the Notifications