ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಳೆ ಮೈಸೂರು ಭಾಗದ ಮುಖಂಡರೊಂದಿಗೆ ಸಿದ್ದರಾಮಯ್ಯ ಸಭೆ

|
Google Oneindia Kannada News

ಬೆಂಗಳೂರು, ಜನವರಿ 31: ಲೋಕಸಭೆ ಚುನಾವಣೆ ಸೀಟು ಹಂಚಿಕೆ ಮುನ್ನಾ ಕ್ಷೇತ್ರವಾರು ಮುಖಂಡರ, ಶಾಸಕರ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಮುಂದಾಗಿದ್ದು, ಇಂದು ಸಿದ್ದರಾಮಯ್ಯ ಅವರ ಹಳೆ ಮೈಸೂರು ಭಾಗದ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದ್ದಾರೆ.

ಹಳೆ ಮಿತ್ರ ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡಹಳೆ ಮಿತ್ರ ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡ

ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಮೈಸೂರು, ಚಾಮರಾಜಪೇಟೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗಗಳ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

Siddaramaiah had meeting with congress leaders of Old mysuru region

ಲೋಕಸಭೆ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಸೀಟು ಹಂಚಿಕೆ ಮಾಡಿಕೊಳ್ಳುತ್ತಿದ್ದು ಅದರ ಪುರ್ವಭಾವಿಯಾಗಿ ಈ ಸಭೆ ಕರೆಯಲಾಗಿದ್ದು. ನಾಯಕರ ಅಭಿಪ್ರಾಯ ಮತ್ತು ಕ್ಷೇತ್ರದಲ್ಲಿ ಪಕ್ಷದ ಪ್ರಸ್ತುತ ಸ್ಥಿತಿ-ಗತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ.

ತುಮಕೂರಿನಲ್ಲಿ ನಗುತ್ತಾ ಪರಸ್ಪರ ಕೈ ಕುಲುಕಿದ ಕುಮಾರಸ್ವಾಮಿ- ಸಿದ್ದರಾಮಯ್ಯ ತುಮಕೂರಿನಲ್ಲಿ ನಗುತ್ತಾ ಪರಸ್ಪರ ಕೈ ಕುಲುಕಿದ ಕುಮಾರಸ್ವಾಮಿ- ಸಿದ್ದರಾಮಯ್ಯ

ಸಭೆಯಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್, ಹಾಸನದ ಎ.ಮಂಜು, ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಬಾಲಕೃಷ್ಣ, ಸೋಮಶೇಖರ್, ಟಿ.ಬಿ.ಜಯಚಂದ್ರ, ಸುಧಾಕರ್ ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.

Siddaramaiah had meeting with congress leaders of Old mysuru region

ಬಹುತೇಕ ಶಾಸಕರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯನ್ನೇ ಕಣಕ್ಕಿಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಭಾಗಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಕೂಗು ಜೋರಾಗಿ ಕೇಳಿ ಬಂದಿದೆ ಎನ್ನಲಾಗಿದೆ.

English summary
Siddaramaiah had meeting with congress leaders and MLAs of old Mysuru region. He discussed about seat sharing with JDS in Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X