Siddaramaiah Government: ಬಿಜೆಪಿಯ 14 ಕಾರ್ಯಕ್ರಮ ಕೈಬಿಟ್ಟ ಸಿದ್ದರಾಮಯ್ಯ: ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು, ಜುಲೈ24: ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಈ ಕುರಿತು ಸೋಮವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ದಲಿತೋದ್ಧಾರಕ ಎನ್ನುವ ಕಾಂಗ್ರೆಸ್ಸಿಗರು ಬಿಜೆಪಿ ಜಾರಿಗೊಳಿಸಿದ 14 ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಕೈಬಿಟ್ಟಿದ್ದಾರೆ. ನೂತನ ಶಿಕ್ಷಣ ನೀತಿ ರದ್ದು ಮಾಡಿದ್ದಾರೆ. ಪಠ್ಯ ಪರಿಷ್ಕರಿಸಿದ್ದಾರೆ. ರೈತರು ಮತ್ತಿತರರಿಗೆ ಜಾರಿ ಮಾಡಿದ್ದ ವಿದ್ಯಾನಿಧಿ ನಿಲ್ಲಿಸಿದ್ದಾರೆ. ಪ್ರತಿಯೊಂದು ಜಿಲ್ಲೆಗೆ ಗೋಶಾಲೆ ಕಟ್ಟುವ ಯೋಜನೆಯನ್ನು ಕೈಬಿಟ್ಟಿದ್ದಾರೆ. ರೈತಪರ ಎಪಿಎಂಸಿ ಕಾಯ್ದೆ ಬದಲಿಸಿದ್ದಾರೆ ಎಂದು ಟೀಕಿಸಿದರು.

chalavadi-narayanaswamy

ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಕೊಟ್ಟಿದ್ದು, ಅದನ್ನು ಕೈಬಿಟ್ಟಿದ್ದಾರೆ. 'ನಮ್ಮ ಕ್ಲಿನಿಕ್' ಕೈಬಿಟ್ಟಿದ್ದಾರೆ. ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀಸಾಮಥ್ರ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರವನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ. ಕೊಡುವ ಶ್ರಮಶಕ್ತಿಯನ್ನು ಕೈಬಿಟ್ಟಿದ್ದಾರೆ. ಅಗ್ನಿವೀರರಾಗಲು ಎಸ್ಸಿ, ಎಸ್‍ಟಿ ಯುವಕರಿಗೆ ತರಬೇತಿಯನ್ನು ರದ್ದು ಮಾಡಿದ್ದಾರೆ. ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ, ಹಾಲು ಉತ್ಪಾದಕರ ಬ್ಯಾಂಕ್ ರದ್ದು, ವಿನಯ ಸಾಮರಸ್ಯ ಸ್ಕೀಂ ಕೈಬಿಟ್ಟಿದ್ದಾರೆ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ ಎಂದ ಛಲವಾದಿ ನಾರಾಯಣಸ್ವಾಮಿ ಅವರು, ಅವರು 1995-2000, 2013ರಿಂದ 18ರವರೆಗೆ ಬಜೆಟ್ ಮಂಡಿಸಿದ್ದರು. ಅವನ್ನು ಅವಲೋಕನ ಮಾಡಿದಾಗ ಅವರು ಮಂಡಿಸಿದ ಬಜೆಟ್‍ಗಳ ಸ್ಥಿತಿಗತಿ ಅರ್ಥವಾಗುತ್ತದೆ. 2000ವರೆಗಿನ 5 ವರ್ಷಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮಿಗತೆಯಿಂದ ಆರ್ಥಿಕ ದುಸ್ಥಿತಿ ಕಡೆ ನಡೆಯಿತು ಎಂದು ಹೇಳಿದರು.

ನಂತರ ಎಸ್.ಎಂ.ಕೃಷ್ಣರ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗ ಅವರು ಹಣಕಾಸಿನ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿದ್ದರು. ಆಗ ರಾಜ್ಯದ ಆರ್ಥಿಕ ಸ್ಥಿತಿ ಶಿಥಿಲವಾದುದನ್ನು ತಿಳಿಸಿದ್ದರು. 2018ರಲ್ಲಿ ಅಧಿಕಾರದಿಂದ ಕೆಳಕ್ಕೆ ಇಳಿಯುವಾಗ ಸಾಲಕ್ಕೆ ರಾಜ್ಯವನ್ನು ಸಿಲುಕಿಸಿದ್ದನ್ನು ಅಂಕಿಅಂಶಗಳೇ ಹೇಳುತ್ತವೆ. ಅವರು 2.42 ಲಕ್ಷ ಕೋಟಿ ಸಾಲ ಮಾಡಿದ್ದರು ಎಂದು ಟೀಕಿಸಿದರು.

25 ಸಾವಿರ ಪೌರಕಾರ್ಮಿಕರನ್ನು ನಾವು ಖಾಯಂ ಮಾಡಿದ್ದೇವೆ. ಇನ್ನೂ 30 ಸಾವಿರ ಪೌರಕಾರ್ಮಿಕರಿದ್ದು ಅವರ ಬಗ್ಗೆ ಸಿದ್ದರಾಮಯ್ಯರು ಚಕಾರ ಎತ್ತಿಲ್ಲ ಎಂದು ಆಕ್ಷೇಪಿಸಿದರು. 8 ಲಕ್ಷ ವಿದ್ಯಾರ್ಥಿನಿಯರಿಗೆ ನಾವು ಉಚಿತ ಬಸ್‍ಪಾಸ್ ಕೊಟ್ಟಿದ್ದೆವು. ಇವತ್ತು ಮಹಿಳೆಯರೆಲ್ಲರಿಗೆ ಉಚಿತ ಪ್ರಯಾಣ ಘೋಷಿಸಿದ್ದು, ಯಾರೂ ಬಸ್ ಹತ್ತಲಾಗುತ್ತಿಲ್ಲ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ನೀವು ಮಾಡಲಿಲ್ಲ. ಹಕ್ಕುಪತ್ರ ನೀಡಿರಲಿಲ್ಲ. ಲಕ್ಷಗಟ್ಟಲೆ ಕುಟುಂಬಗಳಿಗೆ ನಾವು ಹಕ್ಕುಪತ್ರ ನೀಡಿದ್ದೇವೆ. ಆದರೆ, ಸಿದ್ದರಾಮಯ್ಯರು ಸುಳ್ಳುಗಳ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+