ವರ್ಗಾವಣೆಗೆ ಅಧಿಕಾರಿಗಳು ಇಂತಹ ಕೆಲಸ ಮಾಡ್ತೀರಾ? ನಾನು ಸಹಿಸಲ್ಲ; ಏಕಾಏಕಿ ಗರಂ ಆದ ಸಿದ್ದರಾಮಯ್ಯ
ಮೈಸೂರು, ನವೆಂಬರ್10: ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ್ತೀರಿ...ಇದು ಕೆಟ್ಟ ನಡವಳಿಕೆಯನ್ನ ನಾನು ಸಹಿಸಲ್ಲ. ಕಾರ್ಯಕರ್ತರಿಗೂ ಕೆಟ್ಟ ಹೆಸರು ತರುತ್ತೀರಿ. ಸರ್ಕಾರಕ್ಕೂ ಕೆಟ್ಟ ಹೆಸರು ತರಲು ಮುಂದಾದರೆ ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ವಿರುದ್ದ ಗರಂ ಆಗಿದ್ದಾರೆ.
ಇಂದು(ಸೋಮವಾರ) ಮೈಸೂರು ಜಿಲ್ಲಾ ಕೆಡಿಪಿ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಭೆ ಆರಂಭವಾಗುತ್ತಿದ್ದಂತೆಯೇ, ಸಭೆಗೆ ಗೈರು ಆಗಿರುವ ಅಧಿಕಾರಿ ಮತ್ತು ಸಿಬ್ಬಂದಿ ಯಾರಾದರೂ ಇದ್ದರೆ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದರು. ಬಳಿಕ ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ರ್ಥಪರ್ಣವಾಗಿ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ರ್ಗಕ್ಕೆ ಅಭಿನಂದನೆ ಸಲ್ಲಿಸಿದರು.

ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು. ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ಬರ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಹೆಚ್ಚಾಗಿ ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ ಎಂದು ಪ್ರಶ್ನಿಸಿ, "ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ ಎಂದು ಎಚ್ಚರಿಸಿದರು.
ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎನ್ನುವ ನಾನು ಕೊಟ್ಟ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ಸ್ಪೆಕ್ಟರ್ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ. ವರದಿ ಬಂದಿಲ್ಲ ಏಕೆ ಎಂದು ಪ್ರಶ್ನಿಸಿದರು.
ಹಾಸ್ಟೆಲ್ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು. ಹೊಸದಾಗಿ ಬಂದಿರುವ ಡಿಡಿಪಿಐ ಅವರಿಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಸತಾ ರ್ತೇನೆ ಎನ್ನುವ ಸೂಚನೆ ನೀಡಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಿ ಎಂದರು, ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಗರಂ ಆದ ಸಿಎಂ ಬೇಗ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು.
ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ. ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ, ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ನಾವು ಐದು ವರ್ಷಕ್ಕೊಮ್ಮೆ ಬರುವವರು-ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications