ಮತ್ತೆ ಟಿಕ್ ಟಿಕ್ ಎನ್ನುತ್ತಿದೆ ಸಿದ್ದರಾಮಯ್ಯನವರ ಉಬ್ಲೋ ವಾಚ್!
ಬೆಂಗಳೂರು, ಅಕ್ಟೋಬರ್. 08 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಜ್ರ ಖಚಿತ ಉಬ್ಲೋ ವಾಚ್ ಮತ್ತೆ ಸದ್ದು ಮಾಡುತ್ತಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ವಿಶೇಷ ಲೋಕಾಯುಕ್ತ ಕೋರ್ಟ್ ಗೆ ಸಲ್ಲಿಸಿದ್ದ ಖಾಸಗಿ ದೂರು ನವೆಂಬರ್ 5ರಂದು ವಿಚಾರಣೆ ನಡೆಯಲಿದೆ.
ಬಿಡಿಎ ಇಂಜಿನಿಯರ್ ಎಲ್. ರಘು ಅವರು ಸುಮಾರು 45 ಲಕ್ಷ ಮೌಲ್ಯದ ದುಬಾರಿ ವಾಚ್ ಅನ್ನು ಮುಖ್ಯಮಂತ್ರಿಗಳಿಗೆ ಕೊಡುಗೆಯಾಗಿ ನೀಡಿದ್ದಾರೆ . ಈ ಬಗ್ಗೆ ರಘು ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಗೆ ನಾನು ದೂರು ಕೊಟ್ಟಿದ್ದೇನೆ. ಈ ಪ್ರಕರಣದಲ್ಲಿ ರಘು ಅವರ ವಿರುದ್ಧ ವಿಚಾರಣೆಗೆ ಸಿದ್ದರಾಮಯ್ಯ ಅವರು ಪೂರ್ವಾನುಮತಿ ನೀಡಲಿಲ್ಲ ಎಂದು ಅಬ್ರಾಹಂ ದೂರಿನಲ್ಲಿ ತಿಳಿಸಿದ್ದಾರೆ. [ಊಬ್ಲೋ ವಾಚ್ ವಾರ್ : ಎಚ್ಡಿಕೆಯಿಂದ ಕಾಗೋಡು ತಿಮ್ಮಪ್ಪ ತನಕ!]

ಇಂಜಿನಿಯರ್ ರಘು ಅವರಿಗೆ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ ಸ್ನೇಹಿತರು. ಆದ್ದರಿಂದ, ಈ ವಾಚ್ ವರ್ಗಾವಣೆಯಲ್ಲಿ ಇವರ ಪಾತ್ರವೂ ಇದ್ದು, ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಉಬ್ಲೋ ವಾಚ್ ಅನ್ನು ತಮಗೆ ದುಬೈನಲ್ಲಿ ನೆಲೆಸಿರುವ ಸ್ನೇಹಿತ ಡಾ.ಗಿರೀಶ್ ಚಂದ್ರ ವರ್ಮಾ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಾಚ್ ಪ್ರಕರಣದ ಬಗ್ಗೆ ಎಸಿಬಿಯಲ್ಲಿಯೂ ದೂರು ದಾಖಲಾಗಿದೆ.
ಎಸಿಬಿ ವಿಚಾರಣೆ ಎದುರಿಸಿರುವ ಗಿರೀಶ್ ಚಂದ್ರ ವರ್ಮಾ ಅವರು, ಸಿದ್ದರಾಮಯ್ಯ ಅವರು 15 ವರ್ಷಗಳಿಂದ ಪರಿಚಿತರು. ಸ್ನೇಹ, ಆತ್ಮೀಯತೆಯಿಂದಾಗಿ ವಾಚ್ ಉಡುಗೊರೆ ನೀಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications