ಪರಿಷತ್ ಅಭ್ಯರ್ಥಿಗಳ ಪಟ್ಟಿ ಹಿಡಿದು ದೆಹಲಿಗೆ ಹೊರಟ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 01 : ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.
ಮಂಗಳವಾರ ಸಂಜೆ ಸಿದ್ದರಾಮಯ್ಯ ಮತ್ತು ಗೃಹ ಸಚಿವ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ದೆಹಲಿಗೆ ತೆರಳಲಿದ್ದಾರೆ. ಬುಧವಾರ ಬೆಳಗ್ಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಒಪ್ಪಿಗೆ ಪಡೆಯಲಿದ್ದಾರೆ. [ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ]

ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಜೆಪಿ ಈಗಾಗಲೇ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. [ನಾನು ಎಂಎಲ್ಸಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದ ರಮ್ಯಾ]
25 ಸ್ಥಾನಗಳಿಗೆ ಹಲವಾರು ಆಕಾಂಕ್ಷಿಗಳಿದ್ದು ಪಟ್ಟಿ ಅಂತಿಮಗೊಳಿಸಲು ವಿಳಂಬವಾಗುತ್ತಿದೆ. ಜೆಡಿಎಸ್ ಪಕ್ಷವೂ ಕಾಂಗ್ರೆಸ್ ಪಟ್ಟಿ ಬಿಡುಗಡೆಯನ್ನು ಎದುರು ನೋಡುತ್ತಿದೆ. ಇದುವರೆಗೂ ಪಟ್ಟಿ ಬಿಡುಗಡೆ ಮಾಡದ ಜೆಡಿಎಸ್, ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದವರನ್ನು ಪಕ್ಷಕ್ಕೆ ಸೆಳೆದು ಟಿಕೆಟ್ ನೀಡುವ ಸಾಧ್ಯತೆ ಇದೆ. [ಪರಿಷತ್ ಚುನಾವಣೆ ವೇಳಾಪಟ್ಟಿ]
ಡಿಸೆಂಬರ್ 2ರ ಬುಧವಾರದಿಂದ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಡಿಸೆಂಬರ್ 9 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಷ್ಟರೊಳಗೆ ಅಭ್ಯರ್ಥಿಗಳನ್ನು ಅಂತಿಗೊಳಿಸಬೇಕಾಗಿದೆ. ಹಾಲಿ ಸದಸ್ಯರಿಗೆ ಟಿಕೆಟ್ ನೀಡುವ ಪ್ರಸ್ತಾವನೆ ಪಕ್ಷದ ಮುಂದಿದ್ದು, ಇದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಲಿದೆಯೇ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
-
ತಮಿಳುನಾಡು ಅಖಾಡದಲ್ಲಿ ಬಿಜೆಪಿ ಗೆಲುವಿಗೆ ನಾನಾ ತಂತ್ರ, ದಕ್ಷಿಣ ಜಯಕ್ಕಾಗಿ ಭರ್ಜರಿ ಪ್ಲಾನ್ | Tamil Nadu Election -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಬೆಂಗಳೂರು ಮತದಾರರ ಪಟ್ಟಿ: ನಗರದಲ್ಲಿ 11 ಲಕ್ಷ ಮತದಾರರು ಕಾಣೆಯಾದ್ರಾ, ಏನಿದು ಜಿಬಿಎ ಎಲೆಕ್ಷನ್ ಲೋಪ: ಕೃಷ್ಣಭಟ್ ಬರಹ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು











Click it and Unblock the Notifications