ಮಳೆ ಹಾನಿ ಪರಿಹಾರಕ್ಕೆ ಕೇಂದ್ರಕ್ಕೆ ಮೊರೆ : ಸಿಎಂ
ಗುಲ್ಬರ್ಗ, ಸೆ.7 : ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅತಿವೃಷ್ಟಿ ಪೀಡಿತ ರಾಯಚೂರು ಮತ್ತು ಗುಲ್ಬರ್ಗಕ್ಕೆ ಶನಿವಾರ ಸಿಎಂ ಭೇಟಿ ನೀಡಿದ್ದರು.
ಅತಿವೃಷ್ಟಿ ಪೀಡಿತ ಪ್ರದೇಶಗಳ ಅಧ್ಯಯನ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಾಥಮಿಕ ಅಂದಾಜಿನಂತೆ ಖಾಸಗಿ-ಸಾರ್ವಜನಿಕ ಆಸ್ತಿಪಾಸ್ತಿ ಸೇರಿ ಒಟ್ಟು 400 ಕೋಟಿ ರೂ. ನಷ್ಟವಾಗಿದೆ ಎಂದರು. [ನೆರೆ ಪೀಡಿತ ಉತ್ತರ ಕರ್ನಾಟಕಕ್ಕೆ ಸಿಎಂ ಭೇಟಿ]
ಮಳೆಯಿಂದ ಆಗಿರುವ ಹಾನಿ ಪ್ರಮಾಣವನ್ನು ನಿಖರವಾಗಿ ತಿಳಿದುಕೊಳ್ಳಲು ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಜಂಟಿ ಸಮೀಕ್ಷೆ ನಡೆಸಲಾಗುತ್ತದೆ. ಈ ವರದಿ ಬಂದ ಬಳಿಕ ನಷ್ಟದ ನಿಖರ ಅಂದಾಜು ದೊರೆಯಲಿದ್ದು, ಬಳಿಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು. ಮುಖ್ಯಮಂತ್ರಿಗಳ ಭೇಟಿಯ ಚಿತ್ರಗಳು

ರಾಜ್ಯದಲ್ಲಿ 125 ತಾಲೂಕುಗಳಲ್ಲಿ ಬರವಿದೆ
ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಲವು ಜಿಲ್ಲೆಗಳಲ್ಲಿ ಹಾನಿಉಂಟಾಗಿದ್ದರೂ ರಾಜ್ಯದಲ್ಲಿ 125 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳು ಎಂದು ಘೋಷಿಸಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ ಜಿಲ್ಲೆಗಳಲ್ಲಿ ಬರಗಾಲವಿದೆ ಎಂದು ಸಿಎಂ ತಿಳಿಸಿದರು.

ಪರಿಹಾರಕ್ಕೆ ಹಣದ ಕೊರತೆ ಇಲ್ಲ
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಹಣದ ಕೊರತೆ ಇಲ್ಲ ಎಂದು ಸಿಎಂ ತಿಳಿಸಿದರು. ಪ್ರಕೃತಿವಿಕೋಪ ಪರಿಹಾರ ನಿಧಿ ಅಡಿ 195 ಕೋಟಿ ರೂ. ಅನುದಾನವಿದೆ. ಈಗಾಗಲೇ 97 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ಬರ ಹಾಗೂ ನೆರೆ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ ಎಂದರು.

ಎಲ್ಲಿ ಎಷ್ಟು ಹಾನಿಯಾಗಿದೆ
ರಾಜ್ಯದಲ್ಲಿ ಮಳೆ ಹೆಚ್ಚಾಗಿ 8 ಜಿಲ್ಲೆಗಳು, ಅದರಲ್ಲೂ ಗುಲ್ಬರ್ಗ, ರಾಯಚೂರು ಮತ್ತು ಗದಗದಲ್ಲಿ ಹೆಚ್ಚಿನ ಹಾನಿಯಾಗಿದೆ. 22 ಜನರು ಮೃತಪಟ್ಟಿದ್ದು, 54 ಜಾನುವಾರುಗಳು, 8200 ಮನೆಗಳು ಹಾನಿಗೀಡಾಗಿವೆ. ಒಟ್ಟಾರೆ 350- 400 ಕೋಟಿ ರೂ.ಗಳ ಹಾನಿಯಾಗಿದೆ. ಆಲಿಕಲ್ಲು ಮಳೆಯಿಂದ ಬೆಳೆ ನಷ್ಟವಾಗಿರುವುದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ 242 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿದೆ
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣ ಬೇಕೆಂದು ಜಿಲ್ಲಾಧಿಕಾರಿಗಳು ಪತ್ರ ಬರೆದ ಮರುದಿನವೇ ಹಣ ಬಿಡುಗಡೆ ಮಾಡಲಾಗುವುದು. ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿದೆ. ಈ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ತೆರಿಗೆ ಸಂಗ್ರಹ ಹೆಚ್ಚಾಗಿದೆ. ಬರ ಮತ್ತು ನೆರೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಕ್ತಾಯ ಹಂತದಲ್ಲಿದ್ದು, ವಾರದೊಳಗೆ ಕೇಂದ್ರಕ್ಕೆ ಪತ್ರ ಬರೆದು ಪರಿಹಾರ ಧನ ಕೋರಲಾಗುವುದು ಎಂದು ತಿಳಿಸಿದರು.

ಸಿಎಂ ಗದಗ ಭೇಟಿ ರದ್ದು
ಮಳೆ ಮತ್ತು ಹವಾಮಾನ ವೈಪರೀತ್ಯದಿಂದ ಸಿದ್ದರಾಮಯ್ಯ ಅವರ ಗದಗ ಜಿಲ್ಲೆ ಭೇಟಿ ಕೊನೆ ಕ್ಷಣದಲ್ಲಿ ರದ್ದಾಯಿತು. ಪೂರ್ವ ನಿಗದಿಯಂತೆ ಮುಖ್ಯಮಂತ್ರಿ ಶನಿವಾರ ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದಾಗಿರುವ ಮನೆ, ಬೆಳೆ ಹಾನಿ ವೀಕ್ಷಿಸಿದ ನಂತರ ಸಂಜೆ 5ಕ್ಕೆ ಗದಗ ಜಿಲ್ಲೆಗೆ ತೆರಳಬೇಕಾಗಿತ್ತು. ಆದರೆ, ಮಧ್ಯಾಹ್ನದಿಂದಲೇ ಗದಗ ಜಿಲ್ಲೆಯಲ್ಲಿ ಮಳೆ ಸುರಿದಿದ್ದರಿಂದ ಭೇಟಿ ರದ್ದಾಯಿತು.
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications