ಹೈಕಮಾಂಡನ್ನು ಸಿದ್ದರಾಮಯ್ಯ ಕಂಟ್ರೋಲ್ ಮಾಡುತ್ತಿದ್ದಾರೆ: ಬಿಜೆಪಿ ನಾಯಕ ಹೀಗೆ ಹೇಳಿದ್ಯಾಕೆ?
ಬೆಂಗಳೂರು, ಜೂನ್ 18: ಸಿದ್ದರಾಮಯ್ಯನವರು ಈಗ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಅವರಿಗೂ ನಿಯಂತ್ರಣ ಇಲ್ಲ. ಹೈಕಮಾಂಡನ್ನು ಸಿದ್ದರಾಮಯ್ಯ ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಮೊಂಡು ಎಮ್ಮೆ, ಮೊಂಡು ಹಸುಗಳು ಯಾರ ಮಾತನ್ನೂ ಕೇಳುವುದಿಲ್ಲ. ಎಲ್ಲಿ ಹುಲ್ಲು ಕಾಣುತ್ತೋ, ಮೇವು ಕಾಣುತ್ತೋ ಅಲ್ಲಿಗೆ ನುಗ್ಗಿಕೊಂಡು ಹೋಗುತ್ತವೆ. ಅಂಥ ಹಸು, ಎಮ್ಮೆಗಳಿಗೆ ಜೋರಾಗಿ ಹೋಗದಂತೆ ಕುತ್ತಿಗೆಗೆ ಒಂದು ದಪ್ಪದ ಕಡ್ಡಿ ಕೆಳಗೆ ಹಾಕುತ್ತಾರೆ. ಇದನ್ನು ಜನರ ಹಿತದೃಷ್ಟಿಯಿಂದ ಕಾಂಗ್ರೆಸ್ ಹೈಕಮಾಂಡ್ ಹಾಕಬೇಕಿತ್ತು. ಆದರೆ, ಅವರಿಗೂ ನಿಯಂತ್ರಣ ಇಲ್ಲ. ಹೈಕಮಾಂಡನ್ನು ಸಿದ್ದರಾಮಯ್ಯ ಕಂಟ್ರೋಲ್ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯನವರ ವಿರುದ್ಧ ಪ್ರತಿಭಟನೆ ಮಾಡದಿರೆ, ತಪ್ಪು ಎತ್ತಿ ತೋರಿಸಿದರೆ, ಅವರನ್ನು ಕೆಟ್ಟ ಕೆಟ್ಟದ್ದಾಗಿ ಬೈಯುತ್ತಾರೆ. ಪೆಟ್ರೋಲ್ ದರ ಏರಿಕೆ ಕುರಿತು ಆರ್.ಅಶೋಕ್ ಅವರು ಮಾತನಾಡಿದ್ದಕ್ಕೆ 'ಅಶೋಕ್ ಒಬ್ಬ ಪೆದ್ದ' ಎಂದಿದ್ದಾರೆ. ಆದರೆ, ಜನರು ನಿಮ್ಮನ್ನು 'ಸಿದ್ದಣ್ಣ ನುಂಗಣ್ಣ' ಎಂದಿದ್ದರು. ಯಾಕೆಂದರೆ ದಲಿತರಿಗಾಗಿ ಮೀಸಲಿಟ್ಟ 25,500 ಕೋಟಿ ಹಣವನ್ನು ನೀವು ನುಂಗಿದ್ದೀರಿ. ಚುನಾವಣೆಗೆ ವೆಚ್ಚ ಮಾಡಲು ಸರಕಾರದ ಖಜಾನೆ ಹಣವನ್ನು ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಕೊಟ್ಟಿದ್ದುದನ್ನು ನೀವು ಬೇರೆ ಬೇರೆ ಖಾತೆ ಮಾಡಿ ಹೈದರಾಬಾದ್ಗೆ ಚುನಾವಣೆಗೆ ಕಳುಹಿಸಿ ಬಿಟ್ಟಿರಿ ಎಂದು ಆಕ್ಷೇಪಿಸಿದರು.
ಇದು ಸಂವಿಧಾನದ ಉಲ್ಲಂಘನೆ. ಸಂವಿಧಾನವನ್ನು ಕಾಪಾಡುವವರಂತೆ ಮಾತಾಡುವ ನೀವು ಇಲ್ಲಿ ಅದನ್ನು ಉಲ್ಲಂಘಿಸಿಲ್ಲವೇ ಎಂದು ಕೇಳಿದರು. ಈ ರೀತಿ ತಪ್ಪು ಮಾಡಿದ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಒಂದು ದಿನವೂ ಮುಂದುವರಿಯಲು ಯೋಗ್ಯವಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಗ್ಯಾರಂಟಿಗಳಲ್ಲೂ ನೀವು ನುಡಿದಂತೆ ನಡೆದಿಲ್ಲ. ನಾವು ಒಂದು ರೂ. ಪೆಟ್ರೋಲ್ ದರ ಏರಿಸಿದ್ದಕ್ಕೆ ಸ್ಕೂಟರನ್ನು ಶವ ಮಾಡಿ ಹೆಗಲ ಮೇಲೆ ಹೊತ್ತು ಶವಯಾತ್ರೆ ಮಾಡಿದ್ದೀರಿ. ಈಗ ನೀವು ಪೆಟ್ರೋಲ್, ಡೀಸೆಲ್ ದರ ತೀವ್ರವಾಗಿ ಏರಿಸಿಲ್ಲವೇ? ಈಗ ಜನರು ಯಾವ ಶವಯಾತ್ರೆ ಮಾಡಬೇಕು? ನಾನು ಅಧಿಕಾರದಲ್ಲಿದ್ದರೆ 10 ರೂ. ಕಡಿಮೆ ಮಾಡುತ್ತಿದ್ದೆ ಎಂದು ಸಿದ್ದರಾಮಯ್ಯನವರು ಹೇಳಿದ್ದರು. ಅದಾದ ಬಳಿಕ ಬಸವರಾಜ ಬೊಮ್ಮಾಯಿಯವರು 7 ರೂ. ಕಡಿಮೆ ಮಾಡಿದ್ದರು. ಅದು ಒಳ್ಳೆಯ ಕೆಲಸ ಎಂದು ನೀವು ಹೇಳಲಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಕಾರ್ಯಗಳಿಗೆ ಯಾವಾಗ ಕಾಯಕಲ್ಪ ನೀಡಲಿದೆ ಎಂಬುದಾಗಿ ನಾವು ಕಾದು ಕುಳಿತಿದ್ದೇವೆ. ರಾಜ್ಯದ ಕಾಂಗ್ರೆಸ್ ಸರಕಾರವು ಕಳೆದೊಂದು ವರ್ಷದಲ್ಲಿ ನಡೆದುಬಂದ ಕುರಿತು ಮಾಹಿತಿ ನೀಡಿದರು. ರಾಜ್ಯದ ಕಾಂಗ್ರೆಸ್ ಸರಕಾರವು ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಟೇಪ್, ಕತ್ತರಿಯನ್ನು ಅಧಿಕಾರಕ್ಕೆ ಬಂದ ದಿನವೇ ಕೈಯಲ್ಲಿ ಹಿಡಿದುಕೊಂಡರೂ ಅದಕ್ಕಿನ್ನೂ ಕೆಲಸ ಸಿಕ್ಕಿಲ್ಲ ಎಂದು ಆಕ್ಷೇಪಿಸಿದರು. ಅವುಗಳಿಗೆ ಕಾಯಕಲ್ಪಕ್ಕಾಗಿ ನಾವೂ ಕಾದು ನೋಡುತ್ತಿದ್ದೇವೆ.
ಜನರಿಗೆ ಮಂಕುಬೂದಿ ಎರಚುವ ಕೆಲಸ ಮಾಡಿ, ಕೇವಲ ತಮ್ಮ ಮತಬ್ಯಾಂಕಿಗಾಗಿ ನಿರಂತರ ಪ್ರಯತ್ನ ಮಾಡಿದ್ದರು. ಏನಾದರೂ ಸುಳ್ಳು, ಎಷ್ಟಾದರೂ ಸುಳ್ಳು ಹೇಳಿ ಅಧಿಕಾರ ಹಿಡಿಯುವ ಉದ್ದೇಶ ಅವರದಾಗಿತ್ತು. ಅದರಲ್ಲೂ ಸಫಲರೂ ಆದರು. ಅದಕ್ಕಾಗಿಯೇ ಗ್ಯಾರಂಟಿಗಳನ್ನು ಪ್ರಕಟಿಸಿದ್ದರು ಎಂದು ಟೀಕಿಸಿದರು.
ನುಡಿದಂತೆ ನಡೆದಿದ್ದೇವೆ ಎಂದು ಮಾತು ಮಾತಿಗೂ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನುಡಿಗೂ ನಡೆಗೂ ಸಂಬಂಧವೇ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರದು ಡಬಲ್ ಸ್ಟಾಂಡರ್ಡ್ ಅಲ್ಲ. ಅವರದು ತ್ರ್ರಿಬಲ್ ಸ್ಟಾಂಡರ್ಡ್. ನುಡಿಯುವುದು ಒಂದು ನಡೆಯುವುದು ಇನ್ನೊಂದು, ಮಾಡುವುದು ಮತ್ತೊಂದು. ಒಂದಕ್ಕೆ ಒಂದು ಸಂಬಂಧವೇ ಇಲ್ಲ ಎಂದು ಟೀಕಿಸಿದರು.
-
Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Toxic: ಟಾಕ್ಸಿಕ್ ನೀವೆಲ್ಲ ಅಂದುಕೊಂಡಂತೆ ಗ್ಯಾಂಗ್ಸ್ಟರ್ ಸಿನಿಮಾ ಅಲ್ಲ: ಕೊನೆಗೂ ಸೀಕ್ರೇಟ್ ರಿವೀಲ್ ಮಾಡಿದ ನಟ ಯಶ್ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
Pizza 4P's ಬೆಂಗಳೂರಲ್ಲಿ ಶಾಂತಿಗಾಗಿ ಪಿಜ್ಜಾ ಎಂದಾಯ್ತು: ಜಪಾನ್ ಪಿಜ್ಜಾ ಸಂಸ್ಥೆ ಹೇಳಿದ್ದೇನು - ಕನ್ನಡಿಗರು ಏನಂದ್ರು -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ












Click it and Unblock the Notifications