‘ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ?’
ಬೆಂಗಳೂರು, ಏಪ್ರಿಲ್ 25: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ನಮ್ಮ ವಿದ್ಯಾರ್ಥಿಗಳು ಹಾಗೂ ಯುವಕರ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿಯ ಪಾಲನ್ನು ಮುಸ್ಲಿಂರಿಗೆ ಹಂಚುವ ಜತೆಗೆ ನಗರ- ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳು ಸಂವಿಧಾನದ ಪ್ರಕಾರ ಪಡೆದ ಪಾಲನ್ನೂ ಮಸ್ಲಿಂರ ಜತೆಗೆ ಹಂಚಿಕೊಳ್ಳಬೇಕಾಗುತ್ತದೆ. ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ? ಎಂದು ಪ್ರಶ್ನಿಸಿದ್ದಾರೆ.

ಹಿಂದುಳಿದ ವರ್ಗಗಳ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡು ಅದನ್ನು ಮುಸ್ಲಿಂರಿಗೆ ಹಂಚುವ ಕುತ್ಸಿತ ಹಾಗೂ ತುಷ್ಟೀಕರಣ ರಾಜಕಾರಣದ ಸಂಚು ಇದರಲ್ಲಿ ಅಡಗಿದೆಹಿಂದುಳಿದ ವರ್ಗಗಳ ಹಿತಾಸಕ್ತಿ ರಕ್ಷಣೆಯ ಛಾಂಪಿಯನ್ ತಾನೆಂದು ಸ್ವಯಂ ಘೋಷಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಓಬಿಸಿ ಸಮುದಾಯಕ್ಕಿಂತ ಮುಸ್ಲಿಂ ಓಲೈಕೆಯೇ ಮುಖ್ಯ ಎಂಬುದು ಇದರಿಂದ ಸಾಬೀತಾಗಿದೆ ಎಂದು ತಿಳಿಸಿದ್ದಾರೆ.
ಓಬಿಸಿ ಸಮುದಾಯದ ಪರ ಮಾತೃ ಹೃದಯ ಪ್ರದರ್ಶನ ಮಾಡುವುದನ್ನು ಬಿಟ್ಟು ಮಲತಾಯಿ ಧೋರಣೆಯನ್ನು ಪ್ರಕಟಿಸಿದ್ದಾರೆ.ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಕಾಲದಲ್ಲಿ ಈ ಬಗ್ಗೆ ಆಕ್ಷೇಪ ಎತ್ತದೇ ಹೋಗಿದ್ದರೆ ಭವಿಷ್ಯದಲ್ಲಿ ಹಿಂದುಳಿದ ವರ್ಗ ತೆರಬೇಕಿದ್ದ ಬೆಲೆಯನ್ನು ಊಹಿಸಿಕೊಂಡರೂ ಒಂದು ಕ್ಷಣ ಮೈ ನಡುಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ @siddaramaiah ನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ. (1/7)
— Sunil Kumar Karkala (Modi Ka Parivar) (@karkalasunil) April 24, 2024
ನಮ್ಮ ವಿದ್ಯಾರ್ಥಿಗಳು ಹಾಗೂ ಯುವಕರ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿಯ ಪಾಲನ್ನು ಮುಸ್ಲಿಂರಿಗೆ ಹಂಚುವ ಜತೆಗೆ ನಗರ- ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳು ಸಂವಿಧಾನದ ಪ್ರಕಾರ ಪಡೆದ ಪಾಲನ್ನೂ ಮಸ್ಲಿಂರ ಜತೆಗೆ ಹಂಚಿಕೊಳ್ಳಬೇಕಾಗುತ್ತದೆ. ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ? ಸಮುದಾಯಕ್ಕೆ ಮಾಡುವ ಈ ಚಾರಿತ್ರಿಕ ಅನ್ಯಾಯದಿಂದ ನಿಮಗೆ ಸಿಗುವ ಲಾಭವೇನು ?ಆಯೋಗಕ್ಕೆ ಈ ಶಿಫಾರಸು ಮಾಡುವ ಮುನ್ನ ಯಾರ ಜತೆಗೆ ಚರ್ಚೆ ನಡೆಸಿದ್ದೀರಿ ? ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು ? ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications