ಎಲ್ಲಾ ಗೊಂದಲಕ್ಕೂ ತೆರೆ: ಸಿದ್ದರಾಮಯ್ಯರೇ ಐದು ವರ್ಷ ಸಿಎಂ!
ಬೆಂಗಳೂರು, ನವೆಂಬರ್ 29: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕಿಚ್ಚು ಜೋರಾಗಿದೆ. ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ತಾರಕಕ್ಕೇರಿದೆ. ಸದ್ಯ ಪಟ್ಟದ ಕಾದಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಕೊನೆಗೂ ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ಪವರ್ ಶೇರಿಂಗ್ ಫೈಟ್ಗೆ ಬ್ರೇಕ್ ಹಾಕಿದೆ. ಇಬ್ಬರು ಒಟ್ಟಿಗೆ ಕೂತು ಗೊಂದಲಗಳಿಗೆ ತೆರೆ ಎಳೆಯುವಂತೆ ಸೂಚನೆ ನೀಡಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಲವು ವಿಚಾರಗಳು ಚರ್ಚೆಯಾಗಿದ್ದು, ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇಷ್ಟು ದಿನಗಳ ವಿಭಿನ್ನ ಪೋಸ್ಟ್ ಮೂಲಕ ತೀವ್ರ ಗೊಂದಲ ಸೃಷ್ಟಿಸಿದ್ದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು, ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಒಗ್ಗಟ್ಟಿನ ಮಂತ್ರ ಶುರುವಾಗಿದೆ.

2028 ರ ವಿಧಾನಸಭಾ ದೃಷ್ಟಿಯಿಂದ ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆಂದು ಸಾರಿ ಸಾರಿ ಹೇಳಿದ ಉಭಯ ನಾಯಕರು ಇದನ್ನು ಒತ್ತಿ ಹೇಳಿದ್ದಾರೆ. ಸಿಎಂ ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಮಾತುಕತೆಯನ್ನ ಹೈಕಮಾಂಡ್ಗೆ ತಿಳಿಸಲಿದ್ದಾರೆ. ನಮ್ಮಿಬ್ಬರ ನಡುಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೇವೆ. ಯಾವ ಶಾಸಕರು ಸರ್ಕಾರದ ವಿರುದ್ಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದು, ಪರೋಕ್ಷವಾಗಿ ಐದು ವರ್ಷವೂ ನಾನೇ ಸಿಎಂ ಎಂಬ ಸಂದೇಶವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಸಿಎಂ ಪಟ್ಟದಿಂದ ಕೆಳಗಿಳಿಸಿದ್ರೆ ಕೈ ಪಾಳಯದಲ್ಲಿ ಹಲವು ಗೊಂದಲಗಳು ಸೃಷ್ಟಿಯಾಗಲಿದ್ದು, ಪಕ್ಷವೂ ಇಬ್ಬಾಗ ಆಗಲಿದೆ ಎಂಬ ಲೆಕ್ಕಾಚಾರವನ್ನ ಹೈಕಮಾಂಡ್ ಹಾಕಿಕೊಂಡಿದೆ. ಅಲ್ಲದೇ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಸ್ತಿತ್ವವೇ ಇಲ್ಲದಂತಾಗಬಹುದು ಎಂಬ ಚಿಂತನೆಯನ್ನ ಹೈಕಮಾಂಡ್ ನಡೆಸಿದೆ. ಅಲ್ಲದೇ ಸಿದ್ದರಾಮಯ್ಯ ಅವರಿಗೆ ಬಹುತೇಕ ಕಾಂಗ್ರೆಸ್ ಶಾಸಕರ ಬೆಂಬಲವಿದೆ. ಇನ್ನೂ ಡಿ ಕೆ ಶಿವಕುಮಾರ್ ಅವರಿಗೆ ಕೇವಲ 20 ರಿಂದ 30 ಜನ ಶಾಸಕರ ಬೆಂಬಲ ಮಾತ್ರವಿದೆ. ಹೀಗಾಗಿ ಈ ಎಲ್ಲಾ ಲೆಕ್ಕಾಚಾರವನ್ನ ಚರ್ಚೆ ನಡೆಸಿರುವ ಹೈಕಮಾಂಡ್ ನಾಯಕರು, ಸದ್ಯಕ್ಕೆ ಅಧಿಕಾರ ಹಂಚಿಕೆಯ ಚರ್ಚೆಗೆ ಬ್ರೇಕ್ ಹಾಕಿದೆ ಎನ್ನಲಾಗಿದೆ.
ಮುಂದಿನ ಚುನಾವಣೆ ತನ್ನ ನಾಯಕತ್ವದಲ್ಲೇ ನಡೆಯುವುದಾಗಿ ಡಿ ಕೆ ಶಿವಕುಮಾರ್ ಈ ಹಿಂದೆ ಬಹಿರಂಗವಾಗೇ ಹೇಳಿರುವುದು ಕಾಂಗ್ರೆಸ್ ನಲ್ಲಿ ಹಲವು ತಲ್ಲಣಗಳಿಗೆ ಕಾರಣವಾಗಿತ್ತು. ಡಿ ಕೆ ಶಿವಕುಮಾರ್ ಬಣದ ಕೆಲ ಶಾಸಕರು ಡಿ ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಮಾತನ್ನ ಬಹಿರಂಗವಾಗಿ ಹೇಳುತ್ತಿದ್ದಂತೆ ಇತ್ತ ಸಿದ್ದರಾಮಯ್ಯ ಅವರ ಆಪ್ತ ಶಾಸಕರು ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುರೆಯುತ್ತಾರೆ ಎಂದು ಹೇಳುವ ಮೂಲಕ ಡಿಕೆಶಿ ಬಣಕ್ಕೆ ಟಾಂಗ್ ಕೊಟ್ಟಿದ್ದರು. ಇತ್ತ ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ಡಿ ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಸಿದ್ದರಾಮಯ್ಯ ಅವರು ಒಪ್ಪಿದರೂ ಸಹ ಬಹುತೇಕ ಶಾಸಕರು ತೀವ್ರ ವಿರೋಧವನ್ನ ವ್ಯಕ್ತಪಡಿಸಲಿದ್ದಾರೆ ಎನ್ನಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications