Get Updates
Get notified of breaking news, exclusive insights, and must-see stories!

ಎಲ್ಲಾ ಗೊಂದಲಕ್ಕೂ ತೆರೆ: ಸಿದ್ದರಾಮಯ್ಯರೇ ಐದು ವರ್ಷ ಸಿಎಂ!

ಬೆಂಗಳೂರು, ನವೆಂಬರ್‌ 29: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕಿಚ್ಚು ಜೋರಾಗಿದೆ. ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ತಾರಕಕ್ಕೇರಿದೆ. ಸದ್ಯ ಪಟ್ಟದ ಕಾದಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಕೊನೆಗೂ ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ಪವರ್ ಶೇರಿಂಗ್ ಫೈಟ್ಗೆ ಬ್ರೇಕ್ ಹಾಕಿದೆ. ಇಬ್ಬರು ಒಟ್ಟಿಗೆ ಕೂತು ಗೊಂದಲಗಳಿಗೆ ತೆರೆ ಎಳೆಯುವಂತೆ ಸೂಚನೆ ನೀಡಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಲವು ವಿಚಾರಗಳು ಚರ್ಚೆಯಾಗಿದ್ದು, ಹೈಕಮಾಂಡ್‌ ಸೂಚನೆಯಂತೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇಷ್ಟು ದಿನಗಳ ವಿಭಿನ್ನ ಪೋಸ್ಟ್‌ ಮೂಲಕ ತೀವ್ರ ಗೊಂದಲ ಸೃಷ್ಟಿಸಿದ್ದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಒಗ್ಗಟ್ಟಿನ ಮಂತ್ರ ಶುರುವಾಗಿದೆ.

Siddaramaiah is likely to continue as CM for five years

2028 ರ ವಿಧಾನಸಭಾ ದೃಷ್ಟಿಯಿಂದ ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆಂದು ಸಾರಿ ಸಾರಿ ಹೇಳಿದ ಉಭಯ ನಾಯಕರು ಇದನ್ನು ಒತ್ತಿ ಹೇಳಿದ್ದಾರೆ. ಸಿಎಂ ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾತುಕತೆಯನ್ನ ಹೈಕಮಾಂಡ್‌ಗೆ ತಿಳಿಸಲಿದ್ದಾರೆ. ನಮ್ಮಿಬ್ಬರ ನಡುಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೇವೆ. ಯಾವ ಶಾಸಕರು ಸರ್ಕಾರದ ವಿರುದ್ಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದು, ಪರೋಕ್ಷವಾಗಿ ಐದು ವರ್ಷವೂ ನಾನೇ ಸಿಎಂ ಎಂಬ ಸಂದೇಶವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಸಿಎಂ ಪಟ್ಟದಿಂದ ಕೆಳಗಿಳಿಸಿದ್ರೆ ಕೈ ಪಾಳಯದಲ್ಲಿ ಹಲವು ಗೊಂದಲಗಳು ಸೃಷ್ಟಿಯಾಗಲಿದ್ದು, ಪಕ್ಷವೂ ಇಬ್ಬಾಗ ಆಗಲಿದೆ ಎಂಬ ಲೆಕ್ಕಾಚಾರವನ್ನ ಹೈಕಮಾಂಡ್‌ ಹಾಕಿಕೊಂಡಿದೆ. ಅಲ್ಲದೇ ಮುಂದಿನ ಚುನಾವಣೆಗೆ ಕಾಂಗ್ರೆಸ್‌ ಅಸ್ತಿತ್ವವೇ ಇಲ್ಲದಂತಾಗಬಹುದು ಎಂಬ ಚಿಂತನೆಯನ್ನ ಹೈಕಮಾಂಡ್‌ ನಡೆಸಿದೆ. ಅಲ್ಲದೇ ಸಿದ್ದರಾಮಯ್ಯ ಅವರಿಗೆ ಬಹುತೇಕ ಕಾಂಗ್ರೆಸ್‌ ಶಾಸಕರ ಬೆಂಬಲವಿದೆ. ಇನ್ನೂ ಡಿ ಕೆ ಶಿವಕುಮಾರ್‌ ಅವರಿಗೆ ಕೇವಲ 20 ರಿಂದ 30 ಜನ ಶಾಸಕರ ಬೆಂಬಲ ಮಾತ್ರವಿದೆ. ಹೀಗಾಗಿ ಈ ಎಲ್ಲಾ ಲೆಕ್ಕಾಚಾರವನ್ನ ಚರ್ಚೆ ನಡೆಸಿರುವ ಹೈಕಮಾಂಡ್‌ ನಾಯಕರು, ಸದ್ಯಕ್ಕೆ ಅಧಿಕಾರ ಹಂಚಿಕೆಯ ಚರ್ಚೆಗೆ ಬ್ರೇಕ್‌ ಹಾಕಿದೆ ಎನ್ನಲಾಗಿದೆ.

ಮುಂದಿನ ಚುನಾವಣೆ ತನ್ನ ನಾಯಕತ್ವದಲ್ಲೇ ನಡೆಯುವುದಾಗಿ ಡಿ ಕೆ ಶಿವಕುಮಾರ್‌ ಈ ಹಿಂದೆ ಬಹಿರಂಗವಾಗೇ ಹೇಳಿರುವುದು ಕಾಂಗ್ರೆಸ್ ನಲ್ಲಿ ಹಲವು ತಲ್ಲಣಗಳಿಗೆ ಕಾರಣವಾಗಿತ್ತು. ಡಿ ಕೆ ಶಿವಕುಮಾರ್‌ ಬಣದ ಕೆಲ ಶಾಸಕರು ಡಿ ಕೆ ಶಿವಕುಮಾರ್‌ ಸಿಎಂ ಆಗಬೇಕು ಎಂಬ ಮಾತನ್ನ ಬಹಿರಂಗವಾಗಿ ಹೇಳುತ್ತಿದ್ದಂತೆ ಇತ್ತ ಸಿದ್ದರಾಮಯ್ಯ ಅವರ ಆಪ್ತ ಶಾಸಕರು ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುರೆಯುತ್ತಾರೆ ಎಂದು ಹೇಳುವ ಮೂಲಕ ಡಿಕೆಶಿ ಬಣಕ್ಕೆ ಟಾಂಗ್‌ ಕೊಟ್ಟಿದ್ದರು. ಇತ್ತ ಹೈಕಮಾಂಡ್‌ ಮಾತಿಗೆ ಕಟ್ಟುಬಿದ್ದು ಡಿ ಕೆ ಶಿವಕುಮಾರ್‌ ಸಿಎಂ ಆಗಲಿ ಎಂದು ಸಿದ್ದರಾಮಯ್ಯ ಅವರು ಒಪ್ಪಿದರೂ ಸಹ ಬಹುತೇಕ ಶಾಸಕರು ತೀವ್ರ ವಿರೋಧವನ್ನ ವ್ಯಕ್ತಪಡಿಸಲಿದ್ದಾರೆ ಎನ್ನಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+