ಬಜೆಟ್ ನಲ್ಲಿ ಐಟಿ ಬಿಟಿ ಕ್ಷೇತ್ರಕ್ಕೆ ಭರಪೂರ ಕೊಡುಗೆ
ಬೆಂಗಳೂರು, ಮಾ. 14: ಸತತ ಎರಡು ತಿಂಗಳ ಕಾಲ ಮುಂಗಡ ಪತ್ರದ ಸಿದ್ಧತೆ ನಡೆಸಿ 10ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.13ರಂದು ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಗೆ ಐಟಿ ಬಿಟಿ ಕ್ಷೇತ್ರದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಹಣಕಾಸು ಸಚಿವರಾಗಿ 7 ಬಾರಿ ಹಾಗೂ ಮುಖ್ಯಮಂತ್ರಿಯಾಗಿ 3 ಬಾರಿ ಸೇರಿದಂತೆ ಒಟ್ಟು 10ನೇ ಬಾರಿಗೆ ಮುಂಗಡಪತ್ರ ಮಂಡಿಸಿದ್ದಾರೆ. ಒಟ್ಟಾರೆ ಐಟಿ -ಬಿಟಿ ಹಾಗೂ ವಿಜ್ಞಾನ ಕ್ಷೇತ್ರಕ್ಕೆ 202 ಕೋಟಿ ಮೀಸಲಿರಿಸಲಾಗಿದೆ.
ಐಟಿ ಬಿಟಿ ಸಚಿವ ಎಸ್ ಆರ್ ಪಾಟೀಲ್ ಅವರ ಊರಾದ ಬಾಗಲಕೋಟೆಗೆ ಐಟಿ ಪಾರ್ಕ್ ಮಂಜೂರಾಗಿದೆ. ನೂತನ ಬಯೋ ಟೆಕ್ನಾಲಜಿ ನೀತಿ ರೂಪಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಈ ಬಜೆಟ್ ನ ವಿಶೇಷ.

ಐಟಿ ಬಿಟಿ ಕ್ಷೇತ್ರದ ಅಭಿವುದ್ಧಿಗಾಗಿ 202 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವ ಎಸ್ಆರ್ ಪಾಟೀಲ್ ತವರು ಪ್ರೇಮ ಮೆರೆದಿದ್ದು ಬಜೆಟ್ನಲ್ಲಿ ಸ್ಪಷ್ಟವಾಗಿದ್ದು, ಬಾಗಲಕೋಟೆ ಜಿಲ್ಲೆಗೆ ಮೂರು ಹೊಸ ಯೋಜನೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
Glad to see the Govt. of Karnataka make an allocation of Rs. 202 crores for IT, BT & Science and Tech. #KarnatakaBudget
— Kiran Mazumdar Shaw (@kiranshaw) March 13, 2015 ಐಟಿ-ಬಿಟಿ ಕಂಪನಿಗಳನ್ನು ರಾಜಧಾನಿ ಬೆಂಗಳೂರು ಬಿಟ್ಟು ರಾಜ್ಯದ ಇತರೆಡೆಗೂ ವಿಸ್ತರಿಸುವ ಪ್ರಯತ್ನ ಈ ಬಾರಿಯ ಬಜೆಟ್ನಲ್ಲಾಗಿದ್ದರೂ ಎರಡು ಹಾಗೂ ಮೂರನೇ ಸ್ತರದ ನಗರಗಳಿಗೆ ಐಟಿ ಕಂಪನಿಗಳನ್ನು ಕರೆದೊಯ್ಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
Kudos to the govt. for ensuring that the new #Biotech policy & the BioVenture fund will be evolved. #KarnatakaBudget
— Kiran Mazumdar Shaw (@kiranshaw) March 13, 2015 ಐಟಿ ಬಿಟಿ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ಸಿಕ್ಕಿದ್ದೇನು.. ಮುಂದೆ ಓದಿ:
* ಬಾಗಲಕೋಟೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ
* ರಾಜ್ಯದಲ್ಲಿ ಸ್ಟಾರ್ಟ್ಅಪ್ ನಿಧಿ ಮತ್ತು ಹ್ಯಾಕ್ ಸೆಲೆರೇಟರ್ ಸ್ಥಾಪನೆ
* ಬಯೋ ವೆಂಚರ್ ಫಂಡ್ ಒಳಗೊಂಡಂತೆ ಹೊಸ ಜೈವಿಕ ತಂತ್ರಜ್ಞಾನ ನೀತಿ ರೂಪಿಸಲಾಗುವುದು.
* ವಿಜಯಪುರ, ದಾವಣಗೆರೆ,ತುಮಕೂರು, ಉಡುಪಿ, ಚಿತ್ತಾಪುರ,ಚಿಕ್ಕೋಡಿ ಮತ್ತು ಚಿಕ್ಕಮಗಳೂರಿನಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿಗೆ ಮಂಜೂರಾತಿ. - 4 ಕೋಟಿ ಮೀಸಲು.
* ಪ್ರತಿ ಕಂದಾಯ ವಿಭಾಗಕ್ಕೆ ಸಂಚಾರಿ ತಾರಾಲಯ- 5 ಕೋಟಿ ಮೀಸಲು
* ಬಾಗಲಕೋಟೆಯಲ್ಲಿ ಮಿನಿ ತಾರಾಲಯ ಸ್ಥಾಪನೆ.
* ವಿಜಯಪುರದ ಮಹಿಳಾ ವಿವಿಯಲ್ಲಿ ಭಾಸ್ಕರಾಚಾರ್ಯ ಹೆಸರಿನಲ್ಲಿ ಅಧ್ಯಯನ ಪೀಠ- 1 ಕೋಟಿ
*ಉಚಿತ ವೈ-ಫೈ ಸೇವೆಯನ್ನ ಹಂತ ಹಂತವಾಗಿ ಬೆಂಗಳೂರು ನಗರಾದ್ಯಂತ ಹಾಗೂ ಜಿಲ್ಲಾ ಕೇಂದ್ರಗಳಿಗೆ ವಿಸ್ತರಣೆ.
* ಕರ್ನಾಟಕ- ಭೌಗೋಳಿಕ ಮಾಹಿತಿ(ಕೆ-ಜಿಐಎಸ್) ವ್ಯವಸ್ಥೆಗೆ 150 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಅನುಷ್ಠಾನ.
* ಸಾರ್ವಜನಿಕ ಕುಂದುಕೊರತೆ ನಿವಾರಿಸಲು ಕಿಯೋನಿಕ್ಸ್ ಸಂಸ್ಥೆಯ ವತಿಯಿಂದ ಬಾಗಲಕೋಟೆಯಲ್ಲಿ ಪ್ರಾಯೋಗಿಕ ಸಹಾಯವಾಣಿ ತೆರೆಯುವ ಉದ್ದೇಶ.
* ಹುಬ್ಬಳ್ಳಿ- ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದಿಂದ 12 ಕೋಟಿ ರೂ. ಅನುದಾನ.
ಒನ್ ಇಂಡಿಯಾ ಸುದ್ದಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications