ಬಜೆಟ್ ನಲ್ಲಿ ಐಟಿ ಬಿಟಿ ಕ್ಷೇತ್ರಕ್ಕೆ ಭರಪೂರ ಕೊಡುಗೆ
ಬೆಂಗಳೂರು, ಮಾ. 14: ಸತತ ಎರಡು ತಿಂಗಳ ಕಾಲ ಮುಂಗಡ ಪತ್ರದ ಸಿದ್ಧತೆ ನಡೆಸಿ 10ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.13ರಂದು ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಗೆ ಐಟಿ ಬಿಟಿ ಕ್ಷೇತ್ರದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಹಣಕಾಸು ಸಚಿವರಾಗಿ 7 ಬಾರಿ ಹಾಗೂ ಮುಖ್ಯಮಂತ್ರಿಯಾಗಿ 3 ಬಾರಿ ಸೇರಿದಂತೆ ಒಟ್ಟು 10ನೇ ಬಾರಿಗೆ ಮುಂಗಡಪತ್ರ ಮಂಡಿಸಿದ್ದಾರೆ. ಒಟ್ಟಾರೆ ಐಟಿ -ಬಿಟಿ ಹಾಗೂ ವಿಜ್ಞಾನ ಕ್ಷೇತ್ರಕ್ಕೆ 202 ಕೋಟಿ ಮೀಸಲಿರಿಸಲಾಗಿದೆ.
ಐಟಿ ಬಿಟಿ ಸಚಿವ ಎಸ್ ಆರ್ ಪಾಟೀಲ್ ಅವರ ಊರಾದ ಬಾಗಲಕೋಟೆಗೆ ಐಟಿ ಪಾರ್ಕ್ ಮಂಜೂರಾಗಿದೆ. ನೂತನ ಬಯೋ ಟೆಕ್ನಾಲಜಿ ನೀತಿ ರೂಪಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಈ ಬಜೆಟ್ ನ ವಿಶೇಷ.

ಐಟಿ ಬಿಟಿ ಕ್ಷೇತ್ರದ ಅಭಿವುದ್ಧಿಗಾಗಿ 202 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವ ಎಸ್ಆರ್ ಪಾಟೀಲ್ ತವರು ಪ್ರೇಮ ಮೆರೆದಿದ್ದು ಬಜೆಟ್ನಲ್ಲಿ ಸ್ಪಷ್ಟವಾಗಿದ್ದು, ಬಾಗಲಕೋಟೆ ಜಿಲ್ಲೆಗೆ ಮೂರು ಹೊಸ ಯೋಜನೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
Glad to see the Govt. of Karnataka make an allocation of Rs. 202 crores for IT, BT & Science and Tech. #KarnatakaBudget
— Kiran Mazumdar Shaw (@kiranshaw) March 13, 2015 ಐಟಿ-ಬಿಟಿ ಕಂಪನಿಗಳನ್ನು ರಾಜಧಾನಿ ಬೆಂಗಳೂರು ಬಿಟ್ಟು ರಾಜ್ಯದ ಇತರೆಡೆಗೂ ವಿಸ್ತರಿಸುವ ಪ್ರಯತ್ನ ಈ ಬಾರಿಯ ಬಜೆಟ್ನಲ್ಲಾಗಿದ್ದರೂ ಎರಡು ಹಾಗೂ ಮೂರನೇ ಸ್ತರದ ನಗರಗಳಿಗೆ ಐಟಿ ಕಂಪನಿಗಳನ್ನು ಕರೆದೊಯ್ಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
Kudos to the govt. for ensuring that the new #Biotech policy & the BioVenture fund will be evolved. #KarnatakaBudget
— Kiran Mazumdar Shaw (@kiranshaw) March 13, 2015 ಐಟಿ ಬಿಟಿ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ಸಿಕ್ಕಿದ್ದೇನು.. ಮುಂದೆ ಓದಿ:
* ಬಾಗಲಕೋಟೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ
* ರಾಜ್ಯದಲ್ಲಿ ಸ್ಟಾರ್ಟ್ಅಪ್ ನಿಧಿ ಮತ್ತು ಹ್ಯಾಕ್ ಸೆಲೆರೇಟರ್ ಸ್ಥಾಪನೆ
* ಬಯೋ ವೆಂಚರ್ ಫಂಡ್ ಒಳಗೊಂಡಂತೆ ಹೊಸ ಜೈವಿಕ ತಂತ್ರಜ್ಞಾನ ನೀತಿ ರೂಪಿಸಲಾಗುವುದು.
* ವಿಜಯಪುರ, ದಾವಣಗೆರೆ,ತುಮಕೂರು, ಉಡುಪಿ, ಚಿತ್ತಾಪುರ,ಚಿಕ್ಕೋಡಿ ಮತ್ತು ಚಿಕ್ಕಮಗಳೂರಿನಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿಗೆ ಮಂಜೂರಾತಿ. - 4 ಕೋಟಿ ಮೀಸಲು.
* ಪ್ರತಿ ಕಂದಾಯ ವಿಭಾಗಕ್ಕೆ ಸಂಚಾರಿ ತಾರಾಲಯ- 5 ಕೋಟಿ ಮೀಸಲು
* ಬಾಗಲಕೋಟೆಯಲ್ಲಿ ಮಿನಿ ತಾರಾಲಯ ಸ್ಥಾಪನೆ.
* ವಿಜಯಪುರದ ಮಹಿಳಾ ವಿವಿಯಲ್ಲಿ ಭಾಸ್ಕರಾಚಾರ್ಯ ಹೆಸರಿನಲ್ಲಿ ಅಧ್ಯಯನ ಪೀಠ- 1 ಕೋಟಿ
*ಉಚಿತ ವೈ-ಫೈ ಸೇವೆಯನ್ನ ಹಂತ ಹಂತವಾಗಿ ಬೆಂಗಳೂರು ನಗರಾದ್ಯಂತ ಹಾಗೂ ಜಿಲ್ಲಾ ಕೇಂದ್ರಗಳಿಗೆ ವಿಸ್ತರಣೆ.
* ಕರ್ನಾಟಕ- ಭೌಗೋಳಿಕ ಮಾಹಿತಿ(ಕೆ-ಜಿಐಎಸ್) ವ್ಯವಸ್ಥೆಗೆ 150 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಅನುಷ್ಠಾನ.
* ಸಾರ್ವಜನಿಕ ಕುಂದುಕೊರತೆ ನಿವಾರಿಸಲು ಕಿಯೋನಿಕ್ಸ್ ಸಂಸ್ಥೆಯ ವತಿಯಿಂದ ಬಾಗಲಕೋಟೆಯಲ್ಲಿ ಪ್ರಾಯೋಗಿಕ ಸಹಾಯವಾಣಿ ತೆರೆಯುವ ಉದ್ದೇಶ.
* ಹುಬ್ಬಳ್ಳಿ- ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದಿಂದ 12 ಕೋಟಿ ರೂ. ಅನುದಾನ.
ಒನ್ ಇಂಡಿಯಾ ಸುದ್ದಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications