ಬ್ರಾಹ್ಮಣ, ವೈಶ್ಯರೂ ಸೇರಿ ಎಲ್ಲ ಜಾತಿಗೂ ಸಿದ್ದು ಮೀಸಲಾತಿ ಭಾಗ್ಯ
ಬೆಂಗಳೂರು, ಜೂನ್ 6: ಬ್ರಾಹ್ಮಣ, ವೈಶ್ಯರು ಸೇರಿದ ಹಾಗೆ ಎಲ್ಲ ಜಾತಿಯ ಬಡವರಿಗೆ ಹಾಗೂ ಶೋಷಿತರಿಗೆ ಮೀಸಲಾತಿ ಭಾಗ್ಯ ದಯಪಾಲಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಇರುವಾಗ ಕಾಂಗ್ರೆಸ್ ಪಕ್ಷವು ಎಲ್ಲ ಜಾತಿಗೂ ಮೀಸಲಾತಿ ವಿಸ್ತರಿಸಲು ಮುಂದಾಗಿರುವುದು ಸ್ವಲ್ಪ ಮಟ್ಟಿಗೆ ಅಚ್ಚರಿಗೂ ಕಾರಣವಾಗಿದೆ. ಎಲ್ಲ ಸಮುದಾಯಕ್ಕೂ ಮೀಸಲಾತಿ ನೀಡುವ ಆಲೋಚನೆಯೇ ಕ್ರಾಂತಿಕಾರಿಯಾದದ್ದು.[ತಡರಾತ್ರಿ ಉಸ್ತುವಾರಿ ಭೇಟಿ ಮಾಡಿದ ಸಿದ್ದು: ಕಾಂಗ್ರೆಸ್ ನಲ್ಲಿ ಬದಲಾವಣೆಯ ಗಾಳಿ!]

ಆದರೆ, ಈ ನಿರ್ಣಯದ ಹಿಂದೆ ಬಿಜೆಪಿಗೆ ಹೊಡೆತ ಕೊಡುವ ಇರಾದೆಯಂತೂ ಎದ್ದು ಕಾಣುತ್ತಿದೆ. ಇದು ಕಾಂಗ್ರೆಸ್ ನ ಬುದ್ಧಿವಂತ ತಲೆಗಳ ಸಕತ್ ಐಡಿಯಾದಂತಿದೆ. ಆದರೆ ಇದರಿಂದ ಬಲಿಷ್ಠ ಜಾತಿಗಳ ಮೇಲೆ ಸಿಟ್ಟಿರುವ ಸಮುದಾಯಕ್ಕೆ ಕಾಂಗ್ರೆಸ್ ಬಗ್ಗೆ ಕ್ರೋಧವಾಗಿ ಪರಿವರ್ತನೆಯಾದರೆ ಹೇಗೆ ಎಂಬ ಪ್ರಶ್ನೆ ಕೂಡ ಏಳುತ್ತದೆ.[ನಾನು ಸಾಲ ಮನ್ನಾ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ- ಸಿದ್ಧರಾಮಯ್ಯ]

ಇನ್ನು ಸಾಮಾಜಿಕ ನ್ಯಾಯ ಅಂತ ನೋಡುವುದಾದರೆ ಮೀಸಲಾತಿಯ ವಿಸ್ತರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ನಿರ್ಧಾರವನ್ನು ಸಮರ್ಥಿಸಿಕೊಳ್ಳಬಹುದು. ಮೇಲ್ಜಾತಿ ಎಂದು ಪರಿಗಣಿಸಿ ಮೀಸಲಾತಿಯಿಂದ ದೂರ ಇಟ್ಟವರಿಗೆ ಆರ್ಥಿಕ ಸ್ಥಿತಿಯ ಆಧಾರದಲ್ಲಿ ಈಗ ಮೀಸಲಾತಿ ನೀಡಿದರೆ ಕಾಂಗ್ರೆಸ್ ಗೆ ಅನುಕೂಲ ಸ್ಥಿತಿ ಸ್ವಲ್ಪ್ ಮಟ್ಟಿಗೆ ಏರ್ಪಡಬಹುದು ಎಂಬ ಸಲಹೆ ಕೇಳಿಬಂದಿದೆ.

ಮೀಸಲಾತಿಯನ್ನೇ ಮುಂದೆ ಮಾಡಿಕೊಂಡು, ಅದರ ಬಗ್ಗೆ ಆಗಾಗ ರಾಜಕೀಯ ಮಾಡಿ, ಬಿಜೆಪಿ ಲಾಭ ಮಾಡಿಕೊಳ್ಳುತ್ತಿದೆ. ಆದರೆ ಬ್ರಾಹ್ಮಣರೂ ಸೇರಿ ಮೇಲ್ಜಾತಿ ಎನಿಸಿಕೊಂಡ ಬಡವರು, ಶೋಷಿತರಿಗೆ ಮೀಸಲಾತಿ ಕಲ್ಪಿಸುತ್ತಿಲ್ಲ. ಈಗ ಕಾಂಗ್ರೆಸ್ ನಿಂದ ಅಂಥ ಕೆಲಸ ಆದರೆ ಆ ಜಾತಿಗಳೂ ಕಾಂಗ್ರೆಸ್ ಬೆನ್ನಿಗೆ ನಿಲ್ಲುತ್ತವೆ ಎಂಬ ಲೆಕ್ಕಾಚಾರ ಇದರಲ್ಲಿದೆ.[ಮೈಸೂರು: ಕೊಟ್ಟ ಮಾತು ದಿಟ್ಟ ಸಾಧನೆ, ಸಾಧನಾ ಸಮಾವೇಶದ ಹೈಲೈಟ್ಸ್]

ಮೀಸಲಾತಿ ಸೌಲಭ್ಯದ ವ್ಯಾಪ್ತಿಗೆ ಈ ಸಮುದಾಯಗಳನ್ನು ತಂದರೆ ಕಾಂಗ್ರೆಸ್ ಉದ್ದೇಶ ಸ್ಪಷ್ಟವಾಗುತ್ತದೆ. ಅಷ್ಟೇ ಅಲ್ಲ, ಬಿಜೆಪಿ ಕೂಡ ಈ ವಿಷಯದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾದ ಅನಿವಾರ್ಯಕ್ಕೆ ಸಿಲುಕುತ್ತದೆ ಎಂಬ ಸಲಹೆಯನ್ನು ನೀಡಲಾಗಿದೆ.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications