ಹಾಲಿನ ಪ್ರೋತ್ಸಾಹ ಧನ 7 ರೂ. ಹೆಚ್ಚಳ : ಸಿದ್ದರಾಮಯ್ಯ ಘೋಷಣೆ
ಬೆಳಗಾವಿ: ಕರ್ನಾಟಕದ ರೈತರಿಗೆ ಕಾಂಗ್ರೆಸ್ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದು, ಇಷ್ಟು ದಿನ ಪ್ರತಿ ಲೀಟರ್ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ರೈತರ ಹಿತ ದೃಷ್ಟಿಯಿಂದ ರೈತರಿಗೆ ನೀಡುತ್ತಿದ್ದ ಐದು ರೂಪಾಯಿ ಪ್ರೋತ್ಸಾಹ ಧನವನ್ನು 7 ರೂಪಾಯಿಗೆ ಹೆಚ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸ್ದು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.

ನಂಜುಂಡಪ್ಪ ವರದಿ ಜಾರಿಯಾದ ನಂತರದಲ್ಲಿ ಡೈರಿ ಚಟುವಟಿಕೆಗಳು ಹೆಚ್ಚಾಗಿದ್ದು, ಕೆಎಂಎಫ್ ನಲ್ಲಿ ಪ್ರತಿ ದಿನ 1 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಬೀದರ್, ಗುಲ್ಬರ್ಗ ಕಲಬುರ್ಗಿ ಮತ್ತು ಯಾದಗಿರಿ ಹಾಲು ಒಕ್ಕೂಟದಲ್ಲಿ ಪ್ರತಿದಿನಕ್ಕೆ 67 ಸಾವಿರ ಲೀಟರ್ ಉತ್ಪಾದನೆ ಆಗುತ್ತಿದೆ. ಈ ಎರಡರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಹಳೆ ಮೈಸೂರಿನಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ ಉತ್ತರ ಕರ್ನಾಟಕದಲ್ಲಿ 10 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ.
ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ ಒಮ್ಮೆ ಮೂರು ರೂ ಮತ್ತೊಮ್ಮೆ 400 ಗಳ ಸಹಾಯಧನವನ್ನು ಹೆಚ್ಚಳ ಮಾಡಿದೆ. ಈ ಮೊತ್ತ ಸಂಪೂರ್ಣವಾಗಿ ರೈತರಿಗೆ ಹೋಗುತ್ತಿದೆ. ಬಿಜೆಪಿ ಸರ್ಕಾರ ಬಿಟ್ಟು ಹೋಗಿದ್ದ 600 ಕೋಟಿ ಗಳನ್ನು ನಮ್ಮ ಸರ್ಕಾರ ತೀರಿಸಿದೆ. ಮೇವಿನ ವೆಚ್ಚ ಹೆಚ್ಚಳವಾಗಿದೆ ಎಂಬ ಕಾರಣಕ್ಕೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 7 ರೂಗಳ ಪ್ರೋತ್ಸಾಹ ಧನವನ್ನು ಈ ಅವಧಿಯಲ್ಲಿಯೇ ಕೊಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಬೆಳಗಾವಿ ಅಧಿವೇಶನದಲ್ಲಿ ಪ್ರೊ.ಆರ್.ಗೋವಿಂದರಾವ್ ಅವರು ನವೆಂಬರ್ ಕೊನೆಯವರೆಗೂ ಅಧಿಕಾರವಿತ್ತು. ಅವರು ಇನ್ನೂ ಎರಡು ತಿಂಗಳು ಅಗತ್ಯವಿದೆ ಎಂದು ತಿಳಿಸಿದ ಮೇರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಬಹುತೇಕ ಜನವರಿಯಲ್ಲಿ ವರದಿಯನ್ನು ಕೊಡುತ್ತಾರೆ. ಉತ್ತರ ಕರ್ನಾಟಕದ ಅಸಮತೋಲನ ನಿವಾರಣೆಗೆ ವರದಿಯನ್ನು ಜಾರಿ ಮಾಡುತ್ತೇವೆ. ಕಿತ್ತೂರು ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ 500 ಕೋಟಿ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರೊ.ಗೋವಿಂದರಾವ್ ವರದಿ ಬಂದ ನಂತರ ಮಾಡಲಾಗುವುದು ಎಂದು ತಿಳಿಸಲಾಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿಯೇ ಪ್ರೊ.ಗೋವಿಂದರಾವ್ ಸಮಿತಿ ರಚಿಸಲಾಗಿದೆ. ರಾಷ್ಟ್ರೀಯ 14 ನೇ ಹಣಕಾಸು ಸಮಿತಿಯ ಸದಸ್ಯರಾಗಿದ್ದರು. ಬಹುತೇಕ ಜನವರಿ 2026ನಲ್ಲಿ ವರದಿ ಬರಲಿದೆ ಎಂದರು. ಗೋವಿಂದರಾವ್ ಅವರು ಉತ್ತರ ಕರ್ನಾಟಕದ ಆರ್ಥಿಕ ತಜ್ಞರು. ವರದಿ ಪರಿಶೀಲಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು ಎಂದರು.
ಹೈದರಾಬಾದ್ ಕರ್ನಾಟಕವನ್ನು 1991ರಲ್ಲಿ ಹೆಚ್. ಕೆ.ಡಿ. ಬಿ ಪ್ರಾರಂಭವಾಯಿತು. ನಂತರ 6/11/2013 ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ ಸೇರ್ಪಡೆಯಾಯಿತು. . ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಶೇ. 80% ರಷ್ಟು ಹೈದರಾಬಾದ್ ಕರ್ನಾಟಕದಲ್ಲಿ ಮೀಸಲಾತಿ ನೀಡಬೇಕೆಂದು ಹಾಗೂ ರಾಜ್ಯದ ಇತರ ಭಾಗಗಳಲ್ಲಿನ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 8% ಮಾಡಬೇಕೆಂದು ಮಾಡಿದ್ದ ಶಿಫಾರಸ್ಸನ್ನು ಯಥಾವತ್ತು ಜಾರಿಗೆ ತರಲಾಯಿತು ಎಂದರು.
-
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ












Click it and Unblock the Notifications