BPL Card: ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ
ಬೆಂಗಳೂರು, ನವೆಂಬರ್ 21: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.

ಇನ್ನೂ ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ. ಇವುಗಳಿಂದಾಗಿ 1.73 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.
ಕೈಗಾರಿಕಾ ಅಭಿವೃದ್ಧಿಯ ಜತೆಯಲ್ಲೇ ಪರಿಸರ ಸಂರಕ್ಷಣೆ ಮತ್ತು ಎಲ್ಲರನ್ನೂ ಒಳಗೊಂಡಿರುವ ಬೆಳವಣಿಗೆಗಳ ಜತೆಗೆ ಸಮತೋಲನ ಸಾಧಿಸುವ ಸವಾಲು ನಮ್ಮ ಮುಂದಿದೆ. ಮೆಟಲ್ಸ್ (ಲೋಹಗಳು) ಮತ್ತು ಮೆಟಿರೀಯಲ್ಸ್ ವಲಯಗಳಲ್ಲಿ ಇವೆಲ್ಲವನ್ನೂ ಸಾಧ್ಯವಾಗಿಸುವಂತಹ ಸಂಶೋಧನೆ ಮತ್ತು ನಾವೀನ್ಯತಾ ಉಪಕ್ರಮಗಳಿಗೆ ಸರಕಾರವು ಒತ್ತು ನೀಡುತ್ತಿದೆ ಎಂದು ಅವರು ನುಡಿದಿದ್ದಾರೆ.
ಮೆಟಲ್ಸ್ ಮತ್ತು ಮೆಟೀರಿಯಲ್ಸ್ ಕ್ಷೇತ್ರವೂ ಸೇರಿದಂತೆ ಎಲ್ಲ ವಲಯಗಳಲ್ಲೂ ಕರ್ನಾಟಕವು ಪರಿಸರಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಲೋಹ ಮತ್ತು ಅದಕ್ಕೆ ಪೂರಕವಾದ ವಲಯಗಳು ಆರ್ಥಿಕ ಅಭಿವೃದ್ಧಿಯ ಆಚೆಗೂ ತಮ್ಮ ಪ್ರಭಾವ ಬೀರುತ್ತವೆ. ಕ್ಷಿಪ್ರವಾಗಿ ಬೆಳವಣಿಗೆ ಕಾಣುತ್ತಿರುವ ಜಗತ್ತಿನಲ್ಲಿ ಉದ್ಭವಿಸುತ್ತಿರುವ ಸಂಕೀರ್ಣ ಸಮಸ್ಯೆಗಳಿಗೆ ಉದ್ಯಮಿಗಳು ಸರಿಯಾದ ಪರಿಹಾರವನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ರಾಜ್ಯ ಸರಕಾರವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾತ್ರವಲ್ಲದೆ ಸೆಮಿಕಂಡಕ್ಟರ್, ವಿದ್ಯುನ್ಮಾನ, ಚಿಪ್ ವಿನ್ಯಾಸ, ನವೋದ್ಯಮ, ವಿದ್ಯುಚ್ಚಾಲಿತ ವಾಹನ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಸಮರ್ಥ ನೀತಿಗಳನ್ನು ಹೊಂದಿದೆ. ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಕೌಶಲಪೂರ್ಣವನ್ನಾಗಿಸಿ, ಅವರೆಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಸಜ್ಜುಗೊಳಿಸಲಾಗುವುದು' ಎಂದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಈಗ ಡಿಜಿಟಲ್ ಉತ್ಪಾದನೆ, ಕೃತಕ ಬುದ್ಧಿಮತ್ತೆ ಮತ್ತು ಆಟೋಮೇಶನ್ ನಿರ್ಣಾಯಕವಾಗಿದ್ದು ಹೊಸ ಬಗೆಯ ಶಕ್ತಿಸಾಮರ್ಥ್ಯಗಳನ್ನು ತಂದುಕೊಟ್ಟಿವೆ. ಸುಧಾರಿತ ಅಲಾಯ್ಸ್, ಅತ್ಯಧಿಕ ಸಾಮರ್ಥ್ಯದ ಉಕ್ಕು ಮತ್ತು ಸುಸ್ಥಿರ ಮೆಟೀರಿಯಲ್ ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಈ ವಲಯದಲ್ಲಿ ರಾಜ್ಯದ ಹಲವು ನವೋದ್ಯಮಗಳು ಆಟೋಮೋಟೀವ್, ವೈಮಾಂತರಿಕ್ಷ, ಹಗುರ ಅಲಾಯ್ ಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿವೆ ಎಂದರು.
ರಾಜ್ಯವು ಹೆವಿ ಎಂಜಿನಿಯರಿಂಗ್, ವಿದ್ಯುತ್ ಉತ್ಪಾದನೆ ಮತ್ತು ಸ್ಪೆಷಲ್ ಪರ್ಪಸ್ ಮಷಿನರಿ ಕ್ಷೇತ್ರಗಳ ತಾಣವಾಗಿದೆ. ಮಶೀನ್ ಟೂಲ್ ತಯಾರಿಕೆಯಲ್ಲಿ ದೇಶದ ಒಟ್ಟು ಉತ್ಪಾದನೆಯಲ್ಲಿ ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಈ ಮೂಲಕ ಸ್ಥಳೀಯ ಮತ್ತು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಏಕಕಾಲಕ್ಕೆ ಪೂರೈಸಲಾಗುತ್ತಿದೆ. ಲೋಹ ಮತ್ತು ಮೆಟೀರಿಯಲ್ಸ್ ವಲಯಗಳ ಬೇಡಿಕೆಗಳನ್ನು ಸರಕಾರವು ಸಕಾರಾತ್ಮಕವಾಗಿ ಪರಿಗಣಿಸಿ, ಎಲ್ಲ ಬಗೆಯ ಪ್ರೋತ್ಸಾಹಗಳನ್ನೂ ಕೊಡಲಿದೆ ಎಂದು ಅವರು ಭರವಸೆ ನೀಡಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications