ಜಾರ್ಜ್ ಫರ್ನಾಂಡಿಸ್ಗೆ ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ
ನವದೆಹಲಿ, ಜನವರಿ 30 : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಜಾರ್ಜ್ ಫರ್ನಾಂಡಿಸ್ ಅಂತ್ಯಕ್ರಿಯೆ ಗುರುವಾರ ದೆಹಲಿಯಲ್ಲಿ ನಡೆಯಲಿದೆ.
ಬುಧವಾರ ಸಿದ್ದರಾಮಯ್ಯ ಅವರು ದೆಹಲಿಯ ಜಾರ್ಜ್ ಫರ್ನಾಂಡಿಸ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸಚಿವ ಜಮೀರ್ ಅಹಮದ್ ಖಾನ್ ಈ ಸಂದರ್ಭದಲ್ಲಿ ಜೊತೆಗಿದ್ದರು.

ಜನವರಿ 29ರ ಮಂಗಳವಾರ ಬೆಳಗ್ಗೆ ಜಾರ್ಜ್ ಫರ್ನಾಂಡಿಸ್ ಅವರು ನಿಧನ ಹೊಂದಿದ್ದರು. ಪಾರ್ಥಿವ ಶರೀರವನ್ನು ದೆಹಲಿಯ ನಿವಾಸದಲ್ಲಿ ಇಡಲಾಗಿದ್ದು, ಅಮೆರಿಕದಿಂದ ಪುತ್ರ ಬಂದ ಬಳಿಕ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ.
ಜೂನ್ 3, 1930ರಲ್ಲಿ ಕರ್ನಾಟಕದ ಮಂಗಳೂರಿನಲ್ಲಿ ಜನಿಸಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆ, ಅಲ್ಜೀಮರ್ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಹಲವು ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದರು.

ರಾಮಮನೋಹರ ಲೋಹಿಯಾ, ಜಯ ಪ್ರಕಾಶ್ ನಾರಾಯಣ್ ಅವರಿಂದ ಪ್ರಭಾವಿತರಾಗಿದ್ದ ಜಾರ್ಜ್ ಫರ್ನಾಂಡಿಸ್ ಅವರು ಬಹುಕಾಲವನ್ನು ಹೋರಾಟದ ಹಾದಿಯಲ್ಲಿಯೇ ಕಳೆದಿದ್ದರು. ರಕ್ಷಣಾ, ರೈಲ್ವೆ ಸಚಿವರಾಗಿ ಕೆಲಸ ಮಾಡಿದರೂ ಸರಳ ಜೀವನ ಶೈಲಿ ಅಳವಡಿಸಿಕೊಂಡಿದ್ದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications