ರಮೇಶ್ ಜಾರಕಿಹೊಳಿ ಪಾಪ ಸುಳ್ಳು ಹೇಳುತ್ತಾರೆ: ಸಿದ್ದರಾಮಯ್ಯ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಎರಡನೆಯ ಅವಧಿಯ ಮೊದಲ ವರ್ಷ ಇವತ್ತು (ಮೇ 30) ಪೂರೈಸಿದೆ. ಇದೇ ಸಂದರ್ಭದಲ್ಲಿ ಜುಲೈ 26ಕ್ಕೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಲಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡು ವರ್ಷವಾಗುವ ಮೊದಲೇ ಬಿಜೆಪಿಯಲ್ಲಿ ಬಂಡಾಯ ಶುರುವಾಗಿದೆ. ಬಿಜೆಪಿ ಹಿರಿಯ ಶಾಸಕರು ಮಾಜಿ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಇನ್ನೂ 5 ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದರು. ರಮೇಶ್ ಜಾರಕಿಹೊಳಿ ಹೇಳಿಕೆಗೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ರಮೇಶ್ ಜಾರಕಿಹೊಳಿ ಪಾಪ ಸುಳ್ಳು ಹೇಳುತ್ತಾರೆ. ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಸುಳ್ಳು ಹೇಳ್ತಿದ್ದಾರೆ. ಅವರೊಂದಿಗೆ ಮಹೇಶ್ ಕುಮಟಳ್ಳಿ ಬಿಟ್ಟು ಬೇರೆಯವರು ಯಾರು ಹೋದರು? ಕುಮಟಳ್ಳಿ ಬಿಟ್ಟು ರಮೇಶ್ ಜೊತೆ ಯಾರೂ ಇಲ್ಲ. ಜೊತೆಗೆ ಈಗಾಗಲೇ ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ಯಡಿಯೂರಪ್ಪ ನಮ್ಮ ಲೀಡರ್ ಅಲ್ಲ ಅಂತ ಬಿಜೆಪಿ ಹಿರಿಯ ಎಂಎಲ್ಎ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ನಮ್ಮ ನಾಯಕರು ಎಂದು ಯತ್ನಾಳ್ ಹೇಳಿದ್ದಾರೆ. ಅವರ ಮಾತಿನಿಂದ ಏನು ಸಂದೇಶ ಹೋಗುತ್ತದೆ?

ಅಲ್ಲಿ ಎಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕ ಅಲ್ಲ. ಇದೊಂದು ಕೆಟ್ಟ ಸರ್ಕಾರ, ದರಿದ್ರ ಸರ್ಕಾರ. ಜೊತೆಗೆ ನನ್ನ ಬಾದಾಮಿ ಕ್ಷೇತ್ರಕ್ಕೆ 600 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ ಎನ್ನುವುದು ಸುಳ್ಳು. ನನ್ನ ಕ್ಷೇತ್ರಕ್ಕೆ ಅನುದಾನ ಸ್ವಲ್ಪ ಪಡೆದುಕೊಂಡಿದ್ದೆ. ಮಾಜಿ ಸಚಿವ ಉಮೇಶ್ ಕತ್ತಿ ನನ್ನ ಸ್ನೇಹಿತ. ಕತ್ತಿ ನಾನು ಜನತಾದಳದಲ್ಲಿ ಇದ್ದವರು. ಇಬ್ಬರೂ ಒಟ್ಟಿಗೆ ಸಚಿವರಾಗಿ ಕೆಲಸ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications