ಸಿದ್ದರಾಮಯ್ಯ 1.30 ಕೋಟಿ ಲಂಚ ಪಡೆದಿದ್ದಾರೆ: ಏನಿದು ಆರೋಪ?
ಬೆಂಗಳೂರು, ಅಕ್ಟೋಬರ್ 19: ಟರ್ಫ್ ಕ್ಲಬ್ ಮೆಂಬರ್ ಶಿಫ್ ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1.30 ಕೋಟಿ ಲಂಚ ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರವಾಗಿ ಆರೋಪ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಟರ್ಫ್ ಕ್ಲಬ್ ಕೇಸಿನಲ್ಲಿ ಸ್ಟೂವರ್ಡ್ ಮಾಡಲು ಚೆಕ್ನಲ್ಲಿ 1.30 ಕೋಟಿ ಪಡೆದವರು ಸಿದ್ದರಾಮಯ್ಯ. ಸಿದ್ದರಾಮಯ್ಯನವರು ಹೇಗೆ ಭ್ರಷ್ಟಾಚಾರರಹಿತರು? ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮೈಸೂರಿಗೆ ಹೋಗಿ 1997ರ ನಂತರದ ಎಲ್ಲ ಕಡತಗಳನ್ನು ಕಾರಿನಲ್ಲಿ ತುಂಬಿಸಿ ತಂದಿದ್ದಾರೆ. ಅವು ಎಲ್ಲಿ ಹೋಗಿವೆ ಎಂದು ಕೇಳಿದರು. ಅವನ್ನು ಸುಟ್ಟು ಹಾಕಲಾಗಿದೆ ಎಂದು ದೂರಿದರು.

ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ, ಮುಡಾ ಚಯರ್ಮನ್ ಮರಿಗೌಡರ ರಾಜೀನಾಮೆ ಪಡೆದುದು ಯಾಕೆ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು, ಬೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಬೇಕು. ಬೈರತಿ ಸುರೇಶ್ ಬಂಧನವಾದೊಡನೆ ಸತ್ಯ ಹೊರಕ್ಕೆ ಬರಲಿದೆ. ಅವರ ತನಿಖೆ ನಡೆಸಬೇಕಿದೆ. ತಪಾಸಣೆ ಮಾಡಬೇಕಿದೆ. ಅವರು ತಂದ ಕಡತಗಳ ವಿವರ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮುಡಾ ಕಾರ್ಯದರ್ಶಿಯನ್ನು ಅಮಾನತು ಮಾಡಿದ್ದಾರೆ. ಬಳಿಕ ಅಮಾನತು ವಾಪಸ್ ಪಡೆದಿದ್ದಾರೆ. ಸಿದ್ದರಾಮಯ್ಯನವರು 2013ರಲ್ಲಿ ತಮ್ಮ ಕೇಸುಗಳಿಂದ ಹೊರಕ್ಕೆ ಬರಲು ಲೋಕಾಯುಕ್ತವನ್ನು ಮುಚ್ಚಿದ್ದರು. ಸಿಎಂ ಪತ್ನಿಗೆ ನಿವೇಶನ ಕೊಡುವ ಸಂಬಂಧ ಮುಡಾ ನಿರ್ಧಾರವಾದಾಗ ಸಿದ್ದರಾಮಯ್ಯರ ಮಗ ಯತೀಂದ್ರ ಶಾಸಕರಾಗಿದ್ದರು, ಮುಡಾ ಸದಸ್ಯರೂ ಆಗಿದ್ದರು. ಅವರ ಮೂಗಿನ ನೇರಕ್ಕೆ ನಿರ್ಧಾರವಾಗಿದ್ದು, ದಬಾವಣೆಯಿಂದ ನಿವೇಶನಗಳು ಸಿಕ್ಕಿವೆ ಎಂದು ಆರೋಪಿಸಿದರು.
ಇಷ್ಟೆಲ್ಲ ನಡೆದಾಗ ಸಿದ್ದರಾಮಯ್ಯನವರು ಸಾಂವಿಧಾನಿಕ ಹುದ್ದೆಗಳಲ್ಲಿದ್ದರು. ಪ್ರಭಾರ ಬೀರಿ ಅತ್ಯಂತ ಹೆಚ್ಚು ಮೌಲ್ಯಯುತ ಪ್ರದೇಶದಲ್ಲಿ ನಿವೇಶನ ಪಡೆದು ವಾಪಸ್ ಕೊಡಲಾಗಿದೆ. ನಿವೇಶನ ವಾಪಸ್ ಕೊಟ್ಟಿದ್ದೇ ಅಪರಾಧಕ್ಕೆ ಮೊದಲ ಸಾಕ್ಷಿ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದರು.
ಸರಕಾರದ ಬೊಕ್ಕಸದ ಹಣ ಕೂಡ ಇವತ್ತು ಕಾಂಗ್ರೆಸ್ ಪಕ್ಷಕ್ಕೆ ವರ್ಗಾವಣೆ ಆಗುತ್ತಿದೆ. ಸಿದ್ದರಾಮಯ್ಯನವರು ತಾನು ಬಹಳ ಶುದ್ಧ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ, ಅವರ ಪರಿಶುದ್ಧತೆಯ ಒಂದೊಂದೇ ಮುಖವಾಡಗಳು ಕಳಚಿಬೀಳುತ್ತಿವೆ. ಮೈಸೂರಿನಲ್ಲಿ ನಡೆದ ಮುಡಾ ಹಗರಣ ಸಂಬಂಧ ಮೈಸೂರಿನ ಡಿ.ಸಿ. ಮೈಸೂರು ಮುಡಾದಲ್ಲಿ ಒಂದು ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಗರಣ ಆಗಿದ್ದು, ಇದರ ತನಿಖೆ ಮಾಡಿ ವರದಿ ಕೊಟ್ಟಿದ್ದರು. ಮೈಸೂರು ಲೋಕಾಯುಕ್ತವು ಮೊನ್ನೆ ದೇವರಾಜು ಮತ್ತು ಸಿದ್ದರಾಮಯ್ಯನವರ ಭಾಮೈದನನ್ನು ತನಿಖೆ ಮಾಡಿದ್ದರು. ಆದರೆ, ಸಿದ್ದರಾಮಯ್ಯರು ತಪ್ಪಿಸಿಕೊಂಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನಿಮಗೋಸ್ಕರ ನೀವು ಕಾನೂನು ತಿದ್ದುಪಡಿ ಮಾಡಿದ್ದೀರೆಂದು ಹೇಳಿದ ರಾಜ್ಯ ಹೈಕೋರ್ಟ್, ಸಿದ್ದರಾಮಯ್ಯರಿಗೆ, ಕಾಂಗ್ರೆಸ್ ಸರಕಾರಕ್ಕೆ ಛೀಮಾರಿ ಹಾಕಿತ್ತು. ಲೋವರ್ ಕೋರ್ಟಿನ ಮ್ಯಾಜಿಸ್ಟ್ರೇಟ್ ಇದರ ಬಗ್ಗೆ ತನಿಖೆ ಆಗಬೇಕೆಂದಿದ್ದಾರೆ. ಮಾನ್ಯ ಗವರ್ನರ್ ಅವರು ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದು, ಅದನ್ನು ಚಾಲೆಂಜ್ ಮಾಡಿದ್ದರು. ಮೂಡಾ ಹಗರಣ ನಡೆದುದು ಸಾಬೀತಾಗಿದ್ದು, ಇ.ಡಿ. ತನಿಖೆ ನಡೆಯುತ್ತಿದೆ. ಕಾನೂನನ್ನು ಬದಲಿಸಿದ್ದನ್ನು ಇಡಿ ಕೂಡ ಹೇಳಿದೆ ಎಂದರು.
ಸ್ವಾಧೀನವಾಗಿದ್ದ ಕೃಷಿಯೇತರ ಭೂಮಿಯನ್ನು ಕೃಷಿ ಭೂಮಿ ಎಂದು ಹೇಳಿಕೊಂಡರು. ಅದರ ಪರಿವರ್ತನೆ ಮಾಡಿದ್ದು, ಮುಡಾ ತೆಗೆದುಕೊಂಡಿತ್ತು. ವಿಜಯನಗರ 3, 4ನೇ ಹಂತದಲ್ಲಿ ನಿಮ್ಮ ಪತ್ನಿ 2015ರಲ್ಲಿ ಶೇ 50-50 ಅನುಪಾತದಲ್ಲಿ 14 ನಿವೇಶನ ಪಡೆದಿದ್ದರು. ಮುಡಾ ಕಾರ್ಯದರ್ಶಿಗಳಿಗೆ ಒತ್ತಡ ಹೇರಿ ಇದನ್ನು ಮಾಡಿಸಿದ್ದರು ಎಂದು ಟೀಕಿಸಿದರು. ದೇವರಾಜು ನಿಜವಾದ ಮಾಲೀಕರೇ ಅಲ್ಲ. ನಿಮ್ಮ ಭಾಮೈದನಿಗೆ ಅದು ಹೇಗೆ ಬಂತು? ಅದು ದಾನವಾಗಿ ಯಾಕೆ ಬಂತು? ಪಾರ್ವತಿ ಸಿದ್ದರಾಮಯ್ಯರಿಗೆ ಈ ರೀತಿ ಮಾರ್ಗದರ್ಶನ ಮಾಡಿದ ಅಥವಾ ತಪ್ಪಾಗಿ ಮಾರ್ಗದರ್ಶನ ಕೊಟ್ಟವರು ಯಾರು ಎಂದು ಪ್ರಶ್ನೆಗಳನ್ನು ಮುಂದಿಟ್ಟರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications