Delhi Blast: ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?
ಮೈಸೂರು , ನವೆಂಬರ್ 11: ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್ ಗಳು ಆಗುತ್ತಿವೆ ? ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ ಎಂದು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನ ತಪ್ಪ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಬಾಂಬ್ ಬ್ಲಾಸ್ಟ್ ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ ಎಂದು ಹೇಳಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.
DC, AC, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7540 ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ದಿಡೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಬೇಕು ಎನ್ನುವ ಸೂಚನೆ ನೀಡಲಾಗಿದೆ ಎಂದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ











Click it and Unblock the Notifications