Siddaramaiah: ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟು ನಂದಿನಿ ಬಗ್ಗೆ ಮಾತನಾಡಿ: ನಿರ್ಮಲಾ ಗೆ 14 ಪ್ರಶ್ನೆ ಕೇಳಿದ ಸಿದ್ದು
ಬೆಂಗಳೂರು,ಏಪ್ರಿಲ್25: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ನಾಯಕರ ಅಬ್ಬರದ ಪ್ರಚಾರದ ನಡುವೆ ರೈತರ ಜೀವನಾಡಿ ನಂದಿನಿ ಹಾಗೂ ಅಮುಲ್ ವಿವಾದ ಜೋರಾಗಿ ಸದ್ದು ಮಾಡುತ್ತಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ. ಆ ಸಭೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಿಕೊಂಡು ಹೋಗಿದ್ದರೆ ನಮಗೇನೂ ತಕರಾರುಗಳು ಇರುತ್ತಿರಲಿಲ್ಲ, ಆದರೆ ಕರ್ನಾಟಕಕ್ಕೆ ಚಿನ್ನದ ಕಿರೀಟವನ್ನೆ ತೊಡಿಸಿದ್ದೇವೆಂದು ಆತ್ಮದ್ರೋಹದ ಮಾತನಾಡಿದ್ದಾರೆ. ಕರ್ನಾಟಕಕ್ಕೆ ಅಮುಲ್ ಬಂದಿದ್ದು ರಾಜ್ಯದ ರೈತರ ನೆರವಿಗೆ ಎಂಬಂತೆ ಮಾತನಾಡಿದ್ದಾರೆ.

ಈಗಾಗಲೇ ನಿರ್ಮಲಾ ಸೀತಾರಾಮನ್ ಅವರಿಗೆ ಹತ್ತಾರು ಬಾರಿ ಪ್ರಶ್ನೆಗಳನ್ನು ಕೇಳಿದ್ದೇನೆ ಆದರೂ ಅವರು ಹೇಳಿದ ಸುಳ್ಳುಗಳನ್ನೆ ಹೇಳಿಕೊಂಡು ಓಡಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, ರಾಜ್ಯಕ್ಕೆ ಕೇಂದ್ರದ ಕೊಡುಗೆಗಳೇನು? ಆರ್ಥಿಕತೆ, ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕದ ಬೆನ್ನಿಗೆ ಎಷ್ಟು ಸಾರಿ ಮೋದಿ ಅಮಿತ್ ಶಾ ಸರ್ಕಾರ ಇರಿದಿದೆ ಎಂಬುದರ ಗಾಯದ ಗುರುತುಗಳು ಹೇಳುತ್ತಿವೆ ಎಂದು ಹೇಳಿದ್ದಾರೆ. ಅಲ್ಲದೇ ಮೊದಲು ಈ ಪ್ರಶ್ನೆಗಳಿಗೆ ಉತ್ತರ ಕೊಟ್ಟು ನಂತರ ನಮ್ಮ ನಂದಿನಿಯ ಬಗ್ಗೆ ಮಾತನಾಡಲಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ನಿರ್ಮಲಾ ಸೀತಾರಾಮನ್ ಗೆ ಸಿದ್ದರಾಮಯ್ಯ ಕೇಳಿದ 14 ಪ್ರಶ್ನೆಗಳೇನು?
1. ಜಾನುವಾರುಗಳ ಬಗ್ಗೆ ಮಾತನಾಡುವ ಬಿಜೆಪಿಯು ಕರ್ನಾಟಕದ ಜಾನುವಾರುಗಳ ಅಭಿವೃದ್ಧಿಗೆ ಏನು ಮಾಡಿದೆ? ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಜಾನುವಾರುಗಳಿಗೆ ಸಂಬಂಧ ಪಟ್ಟಂತೆ ಎರಡು ಮುಖ್ಯ ಕಾರ್ಯಕ್ರಮಗಳಿವೆ. ರಾಷ್ಟ್ರೀಯ ಜಾನುವಾರು ಮಿಷನ್ ಮತ್ತು ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಯೋಜನೆ. ಇವುಗಳಿಗೆ ನಿರ್ಮಲಾ ಸೀತಾರಾಮನ್ ಅವರ ಸರ್ಕಾರ ಎಷ್ಟು ಹಣ ಕೊಡುತ್ತೇನೆ ಎಂದು ಹೇಳಿತ್ತು? ಮಾರ್ಚ್-2023 ರ ಅಂತ್ಯಕ್ಕೆ ರಾಜ್ಯಕ್ಕೆ ಬಿಡುಗಡೆ ಮಾಡಿದ ಅನುದಾನ ಎಷ್ಟು?
2. ರಾಷ್ಟ್ರೀಯ ಜಾನುವಾರು ಮಿಷನ್ಗೆ ಮೋದಿ ಸರ್ಕಾರ ಕರ್ನಾಟಕಕ್ಕೆ 9.7 ಕೋಟಿ ರೂ ಕೊಡುತ್ತೇನೆ ಎಂದು ಹೇಳಿತ್ತು, ಆದರೆ ನಯಾಪೈಸೆಯನ್ನೂ ಕೊಡಲಿಲ್ಲ ಯಾಕೆ?
3. ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಯೋಜನೆಗೆ 25.44 ಕೋಟಿ ರೂಪಾಯಿಗಳನ್ನು ಒದಗಿಸುವುದಾಗಿ ಮೋದಿ ಸರ್ಕಾರ ಹೇಳಿತ್ತು, ಆದರೆ ಬಿಡುಗಡೆ ಮಾಡಿದ್ದು 4.66 ಕೋಟಿ ರೂಗಳೆಂದು ಬೊಮ್ಮಾಯಿ ಸರ್ಕಾರದ ದಾಖಲೆಗಳು ಹೇಳುತ್ತಿವೆ. ರಾಜ್ಯದ ಜಾನುವಾರುಗಳಿಗೆ ಅತ್ಯಂತ ಗಂಭೀರವಾದ ಚರ್ಮಗಂಟು ರೋಗ ಬಂದಿತ್ತು, ಆದರೂ ನಿರ್ಮಲಾ ಸೀತಾರಾಮನ್ ಅವರು ಹಣ ಬಿಡುಗಡೆ ಮಾಡಲಿಲ್ಲ. ಇದನ್ನು ಕರ್ನಾಟಕಕ್ಕೆ ಮಾಡಿದ ದ್ರೋಹ ಎಂದು ಕರೆಯದೆ ಇನ್ನೇನು ಹೇಳಬೇಕು?
4.ಚರ್ಮಗಂಟು ಕಾಯಿಲೆ, ಪಶು ಆಹಾರಗಳ ಬೆಲೆ ಏರಿಕೆ, ಹಸು-ಎಮ್ಮೆಗಳನ್ನು ಸಾಕಲು ಸರ್ಕಾರಗಳು ಕೊಡುತ್ತಿರುವ ಕಿರುಕುಳಗಳಿಂದ ರೈತರು ಜಾನುವಾರು ಸಾಕಣೆಯ ಕುರಿತು ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಪ್ರತಿ ದಿನ ಸುಮಾರು 25-30 ಲಕ್ಷ ಲೀಟರುಗಳಷ್ಟು ಹಾಲಿನ ಉತ್ಪಾದನೆ ಕಡಿಮೆಯಾಗಿದೆ. ರೈತರಿಗೆ ಪ್ರತಿದಿನ 8-10 ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸುತ್ತಿದೆ. ಆದರೂ ಮೋದಿ ಸರ್ಕಾರವಾಗಲಿ, ಬೊಮ್ಮಾಯಿ ಸರ್ಕಾರವಾಗಲಿ ರೈತರಿಗೆ ನಯಾಪೈಸೆಯಷ್ಟೂ ಪರಿಹಾರ ಕೊಡಲಿಲ್ಲ ಯಾಕೆ?

5.ಹಿಂಡಿ ಸೇರಿದಂತೆ ಜಾನುವಾರು ಆಹಾರ, ಪಶು ಚಿಕಿತ್ಸೆಗೆ ಬಳಸುವ ಔಷಧಗಳಿಗೆ ವಿಪರೀತ ಜಿಎಸ್ಟಿ ವಿಧಿಸಲಾಗುತ್ತಿದೆ. ಅದನ್ನು ನಿಲ್ಲಿಸಿ ಎಂದು ನಾನು ಅನೇಕ ತಿಂಗಳುಗಳಿಂದ ಒತ್ತಾಯಿಸುತ್ತಿದ್ದೇನೆ, ಆದರೂ ನಿರ್ಮಲಾ ಸೀತಾರಾಮನ್ ಅವರು ಯಾವುದೆ ಕ್ರಮ ತೆಗೆದುಕೊಂಡಿಲ್ಲ ಯಾಕೆ?
6.ಕರ್ನಾಟಕದಲ್ಲಿ ನಿರಂತರ ಪ್ರವಾಹ ಬಂದು ಜಾನುವಾರು ಮರಣ ಹೊಂದಿದವು. ರೈತರಿಗೆ ವಿಪರೀತ ನಷ್ಟವಾಯಿತು. ಆದರೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿ ಎಂದು ಮೆಮೊರಾಂಡಮ್ ಕೊಟ್ಟರೆ ಕೇಳಿದ ಅರ್ಧದಷ್ಟು ಹಣವನ್ನೂ ಯಾಕೆ ಬಿಡುಗಡೆ ಮಾಡಲಿಲ್ಲ?
7.ಚಿಕ್ಕಭಳ್ಳಾಪುರದ ಗೋಶಾಲೆಯೊಂದಕ್ಕೆ ಮೇವು ಸರಬರಾಜು ಮಾಡಿದ್ದಕ್ಕೆ ಹಣ ಬಿಡುಗಡೆ ಮಾಡಲು 40% ಗೂ ಹೆಚ್ಚು ಲಂಚ ಕೇಳಿದರೆಂದು ಪತ್ರಿಕೆಗಳಲ್ಲಿ ವರದಿಯಾಯಿತು, ಆದರೂ ಬಿಜೆಪಿ ಸರ್ಕಾರಗಳು ಯಾವುದೆ ಕ್ರಮ ತೆಗೆದುಕೊಳ್ಳಲಿಲ್ಲ ಏಕೆ?
8. ನಾನು ಮುಖ್ಯಮಂತ್ರಿಯಾಗಿದ್ದಾಗ ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಪ್ರತಿ ಲೀಟರಿಗೆ 5 ರೂಗೆ ಹೆಚ್ಚಿಸಿದ್ದೆ ಆದರೆ ಬಿಜೆಪಿ ಸರ್ಕಾರ ಒಂದೆ ಒಂದು ರೂಪಾಯಿಯನ್ನೂ ಹೆಚ್ಚಿಸಲಿಲ್ಲ ಯಾಕೆ?
9.ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ಗಳ ಜೊತೆ ಹಾಲು ಮತ್ತಿತರ ಹೈನು ಪದಾರ್ಥಗಳ ವ್ಯಾಪಾರ ಮಾಡಲು ಕಾರ್ಪೊರೇಟ್ ಬಂಡವಾಳಿಗರ ಜೊತೆ ಆರ್ಸಿಇಪಿ ಎಂಬ ಒಪ್ಪಂದ ಮಾಡಿಕೊಳ್ಳಲು ಮೋದಿ ಸರ್ಕಾರ ಮಾತುಕತೆ ಮಾಡಿದ್ದು/ ಈಗಲೂ ಕೆಲವು ಕಾರ್ಪೊರೇಟ್ ಹಿತಾಸಕ್ತಿಗಳು ಪ್ರಯತ್ನಿಸುತ್ತಿರುವುದು ಸುಳ್ಳೆ?
10.ಸಹಕಾರ ವ್ಯವಸ್ಥೆಯು ಸಂವಿಧಾನದ ಪ್ರಕಾರ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಒಳಪಟ್ಟಿದ್ದು, ಅದರೆ ಕೇಂದ್ರದಲ್ಲಿ ಸಹಕಾರ ಇಲಾಖೆಯನ್ನು ಸ್ಥಾಪಿಸಿ ಅಮಿತ್ ಶಾ ಅವರನ್ನು ಮಂತ್ರಿ ಮಾಡಿದ್ದರ ಹಿಂದಿನ ಮರ್ಮ ಏನು?
11. ಅಮಿತ್ಶಾ ಅವರು 2022 ರ ಡಿಸೆಂಬರ್ನಲ್ಲಿ ಬಹುರಾಜ್ಯಗಳ ಸಹಕಾರಿಗಳ ನಿರ್ವಹಣೆ ಮತ್ತು ನಿಯಂತ್ರಣಗಳ ಬಗ್ಗೆ ಮಸೂದೆ ತಂದಿದ್ದು ಯಾಕೆ? ನಮ್ಮ ರಾಜ್ಯದ ಹಾಲು ಮುಂತಾದ ಸಹಕಾರಿ ಸಂಘಗಳನ್ನು ನಾಶ ಮಾಡುವುದು ತಾನೆ ಇದರ ಹಿಂದಿನ ಉದ್ದೇಶ?
12. 2022 ರ ಡಿಸೆಂಬರಿನಲ್ಲಿ ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮುಲ್-ನಂದಿನ ವಿಲೀನದ ಪ್ರಸ್ತಾಪವನ್ನು ಅಮಿತ್ ಶಾ ಅವರು ಮಾಡಿದ್ದು ಯಾಕೆ?
13.ನಂದಿನಿ ಮೊಸರಿನ ಮೇಲೆ ದಹಿ ಎಂದು ಹಿಂದಿಯಲ್ಲಿ ಮುದ್ರಿಸಲು ಆದೇಶ ಹೊರಡಿಸಿದ್ದು ಏಕೆ? ಬೆಂಗಳೂರಿನಲ್ಲಿ ಹಾಲು ಮತ್ತು ಹಾಲಿನ ಕೃತಕ ಅಭಾವ ಸೃಷ್ಟಿಯಾಗಲು ಕಾರಣವೇನು?
14. ನಂದಿನಿಯಲ್ಲಿ ನಡೆಸುತ್ತಿರುವ ನೇಮಕಾತಿಗೂ ಗುಜರಾತಿನ ಕಂಪೆನಿಯೆ ಏಕೆ ಬೇಕು?
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications