ಶಿರಾ ಉಪ ಚುನಾವಣೆಯಲ್ಲಿ ಸ್ನೇಹಿತ ಡಾ. ರಾಜೇಶ್ಗೌಡಗೆ ಬೆಂಬಲ: ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ!
ಬೆಂಗಳೂರು, ಅ. 19: ರಾಜಕೀಯವೇ ಹಾಗೆ. ಅಲ್ಲಿ ಸ್ನೇಹ, ಸಂಬಂಧ ಎಲ್ಲವೂ ವೈಯಕ್ತಿಕವಾಗಿ ಮಾತ್ರ ಇರುತ್ತವೆ. ಇದೀಗ ಶಿರಾ ಉಪ ಚುನಾವಣೆಯಲ್ಲಿಯೂ ಅಂತಹ ಪ್ರಸಂಗ ಎದುರಾಗಿದೆ. ತಮ್ಮ ಆಪ್ತ ಸ್ನೇಹಿತನ ವಿರುದ್ದವೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪ್ರಚಾರಕ್ಕಿಳಿದಿದ್ದಾರೆ. ಶಿರಾ ಉಪಸಮರದ ಪ್ರಚಾರ ಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ. ಶಿರಾ ನಗರ ಹಾಗೂ ಗೌಡಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.
ಸದ್ಯ ಬಿಜೆಪಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ರಾಜೇಶ್ ಗೌಡ ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಆಪ್ತಸ್ನೇಹಿತರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ, ಆದರೆ, ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಪರೋಕ್ಷ ವಾಗ್ದಾಳಿ ನಡೆಸಿದ್ದರು.
ಹೀಗಾಗಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಪ್ರಚಾರ ಕುತೂಹಲ ಮೂಡಿಸಿದೆ. ಡಾ. ಯತೀಂದ್ರ ಅವರು ಚುನಾವಣಾ ಪ್ರಚಾರದಲ್ಲಿ ಸ್ನೇಹಿತನ ಕುರಿತು ಏನಂದರು? ಮುಂದೆ ಓದಿ.

ಸ್ನೇಹಿತ ನಿಜ ಎಂದು ಡಾ. ಯತೀಂದ್ರ!
ಪ್ರಚಾರ ಸಭೆಯಲ್ಲಿ ಮಾತನಾಡಿರುವ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಡಾ. ರಾಜೇಶ್ ಗೌಡ ಅವರು ನನ್ನ ಸ್ನೇಹಿತರೇ. ಆದರೆ ವೈಯಕ್ತಿಕ ಸಂಬಂಧವೇ ಬೇರೆ ರಾಜಕೀಯವೇ ಬೇರೆ. ಅವರು ಸ್ನೇಹಿತರಾಗಿದ್ದಾಗ ಅವರ ತಂದೆ ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿದ್ದರು ಎಂದು ಶಾಸಕ ಯತೀಂದ್ರ ಹೇಳಿದ್ದಾರೆ.

ಈಗ ಅವರೊಂದಿಗೆ ಪಾಲುದಾರಿಕೆ ಇಲ್ಲ
ನಾನು ಹಾಗೂ ಡಾ. ರಾಜೇಶ್ ಗೌಡ ಅವರು ಪಾಲುದಾರಕೆಯಲ್ಲಿ ಲ್ಯಾಬ್ ಕೂಡ ಮಾಡಿದ್ದೇವು. ಆಮೇಲೆ ಅದರಿಂದ ಹೊರಗೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೊಡಿಸಿ ಅಂತಾ ಕೇಳಿಕೊಂಡಿದ್ದರು ಎಂಬುದನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಅವರಿಗೆ ಟಿಕೆಟ್ ಕುರಿತು ಭರವಸೆ
ಆದರೆ ಡಾ. ರಾಜೇಶ್ ಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡುವ ಬಗ್ಗೆ ಭರವಸೆ ಕೊಟ್ಟಿರಲಿಲ್ಲ. ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ನಮ್ಮ ಹಿರಿಯರು, ಅದರೇ ಅಭ್ಯರ್ಥಿ ಅಂತಾ ಹೇಳಿದ್ದೇವು. ಟಿಕೆಟ್ ಕೊಡೊಕೆ ಆಗುವುದಿಲ್ಲ. ಪಕ್ಷಕ್ಕೆ ಸೇರಿ ಕೆಲಸ ಮಾಡಿ ಅಂತಾ ಹೇಳಿದ್ದೇವು ಎಂದು ಶಾಸಕ ಡಾ. ಯತೀಂದ್ರ ನೆನಪಿಸಿಕೊಂಡರು.
Recommended Video

ರಾಜೇಶ್ ಗೌಡರಿಗೆ ನನ್ನ ಬೆಂಬಲವಿಲ್ಲ
ಆದರೆ ಅವರಿಗೆ ಅವಸರಕ್ಕೆ ಟಿಕೆಟ್ ಬೇಕಾಗಿತ್ತು, ಹಾಗಾಗಿ ಬಿಜೆಪಿ ಸೇರಿದ್ದಾರೆ. ರಾಜೇಶ್ ಗೌಡ ಸ್ನೇಹಿತರು ಅನ್ನೋ ಕಾರಣಕ್ಕೆ ಪಕ್ಷ ನಿಷ್ಠೆ ಬಿಡುವುದಕ್ಕೆ ಆಗುವುದಿಲ್ಲ. ನಾನು ಅವರಿಗೆ ಬೆಂಬಲ ಕೊಟ್ಟಿದ್ದೇವೆ ಎಂಬುದು ಬಿಜೆಪಿಯ ಅಪಪ್ರಚಾರ ಅಷ್ಟೆ, ಹಾಗೆಲ್ಲಾ ಏನು ಇಲ್ಲಾ ಎಂದು ಶಿರಾದಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications