ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂತ್ರಿಗಿರಿ ಆಕಾಂಕ್ಷಿಗಳು ಬಂಡಾಯ ಏಳುವುದಿಲ್ಲ: ಸಿದ್ದರಾಮಯ್ಯ

|
Google Oneindia Kannada News

Recommended Video

ಮಂತ್ರಿ ಸ್ಥಾನದ ಆಕಾಂಕ್ಷಿಗಳು ಬಂಡಾಯ ಏಳೋದಿಲ್ಲ ಎಂದು ಭರವಸೆ ಕೊಟ್ಟ ಸಿದ್ದರಾಮಯ್ಯ | Oneindia Kannada

ಬೆಂಗಳೂರು, ಜೂನ್ 2: ತಮ್ಮನ್ನು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವ ಹೈಕಮಾಂಡ್ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ಉಭಯ ಪಕ್ಷಗಳು ಸರ್ಕಾರದಲ್ಲಿ ಹೊಂದಾಣಿಕೆಯಿಂದ ಕೆಲಸ ಮಾಡುವಂತೆ ಮತ್ತು ಪಕ್ಷ ಹಾಗೂ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಬಾರದಂತೆ ನೋಡಿಕೊಳ್ಳಲು ಸಮನ್ವಯ ಸಮಿತಿ ರಚನೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿಎಸ್ - ಕಾಂಗ್ರೆಸ್ ಸಹಿ ಹಾಕಿರುವ ಆರು ಒಪ್ಪಂದಗಳ ಪಟ್ಟಿ ಜೆಡಿಎಸ್ - ಕಾಂಗ್ರೆಸ್ ಸಹಿ ಹಾಕಿರುವ ಆರು ಒಪ್ಪಂದಗಳ ಪಟ್ಟಿ

ಸರ್ಕಾರದಲ್ಲಿ ಕೈಗೊಳ್ಳಬೇಕಾದ ತೀರ್ಮಾನಗಳ ಬಗ್ಗೆ ತಿಂಗಳಲ್ಲಿ ಒಂದು ಅಥವಾ ಎರಡು ಬಾರಿ ಹಾಗೂ ಅಗತ್ಯ ಬಿದ್ದಾಗ ಸಮಿತಿಯು ಸಭೆ ಸೇರಿ ಚರ್ಚೆ ನಡೆಸಲಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನೀಡಿರುವ ಚುನಾವಣಾ ಪ್ರಣಾಳಿಕೆಗಳ ಕುರಿತಾಗಿಯೂ ಸಹ ಸಮಿತಿಯು ಚರ್ಚೆ ನಡೆಸಲಿದೆ. ಈ ಪ್ರಣಾಳಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ಜನರ ಹಿತದೃಷ್ಟಿಯಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದಿದ್ದಾರೆ.

siddaramaiah said ministry aspirants never go rebel against govt

ಸಚಿವ ಸಂಪುಟದಲ್ಲಿ ಖಾತೆಗಳ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಮಹತ್ವದ ಖಾತೆಗಳನ್ನು ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್‌ಗಿಂತ ಮೇಲುಗೈ ಸಾಧಿಸಿದೆ ಎಂಬುದು ಸರಿಯಲ್ಲ. ಎರಡೂ ಪಕ್ಷಗಳ ನಾಯಕರು ಪರಸ್ಪರ ಸಮಾಲೋಚನೆ ನಡೆಸಿಯೇ ಖಾತೆಗಳ ಹಂಚಿಕೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಪುಟ ವಿಸ್ತರಣೆ : ಕುಮಾರಸ್ವಾಮಿ ಸಂಪುಟ ಸೇರುವ 20 ಶಾಸಕರ ಪಟ್ಟಿಸಂಪುಟ ವಿಸ್ತರಣೆ : ಕುಮಾರಸ್ವಾಮಿ ಸಂಪುಟ ಸೇರುವ 20 ಶಾಸಕರ ಪಟ್ಟಿ

ಸಚಿವರ ಸ್ಥಾನ ಸಿಗದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಲಿದ್ದಾರೆ ಎಂಬುದು ಕೇವಲ ಊಹಾಪೋಹವಷ್ಟೇ. ಉಭಯ ಪಕ್ಷಗಳ ನಾಯಕರು ತೆಗೆದುಕೊಂಡ ನಿರ್ಧಾರಗಳಿಗೆ ಶಾಸಕರು ಬದ್ಧರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡುವ ಜತೆಯಲ್ಲಿ, ಉಭಯ ಪಕ್ಷಗಳ ನಡುವೆ ಯಾವುದೇ ಗೊಂದಲಗಳು, ಭಿನ್ನಾಭಿಪ್ರಾಯಗಳು ಮೂಡದಂತೆ ನೋಡಿಕೊಳ್ಳಲು ಹಾಗೂ ಅವುಗಳನ್ನು ಬಗೆಹರಿಸುವ ಸಲುವಾಗಿ ಈ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.

ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿಯ ಮುಖ್ಯಸ್ಥರಾಗಿದ್ದರೆ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಜೆಡಿಎಸ್‌ನ ಡಾನಿಶ್ ಅಲಿ ಸೇರಿದಂತೆ ಕೆಲವು ಮುಖಂಡರು ಸದಸ್ಯರಾಗಿದ್ದಾರೆ.

English summary
Ex chief minister Siddaramaiah who appointed as the head of the coordination committee expressed confidence over the aspirants of ministery will not go rebel against the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X