ಕರ್ನಾಟಕಕ್ಕೆ ಕೇಂದ್ರದಿಂದ ಆದ ಅನ್ಯಾಯ ಎಷ್ಟು ಗೊತ್ತಾ? ಇಲ್ಲಿದೆ ಸಿದ್ಧರಾಮಯ್ಯ ಕೊಟ್ಟ ಲೆಕ್ಕ
ಬೆಂಗಳೂರು, ಮಾರ್ಚ್ 19: ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಂದ್ರದಿಂದಲೂ ಅನುದಾನ ತಂದಿಲ್ಲ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು 15 ನೇ ಹಣಕಾಸು ಆಯೋಗದ ಅಧ್ಯಕ್ಷರು 11,495 ಕೋಟಿ ರೂ. ಶಿಫಾರಸ್ಸು ಮಾಡಿದರು. ನೀವು ಅಧಿಕಾರದಲ್ಲಿದ್ದಾಗ ಈ ಬಗ್ಗೆಯೂ ಕೇಳಲಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ಮೂರು ಸಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿಯಲ್ಲಿ ಒಂದು ರೂಪಾಯಿ ಬರಲಿಲ್ಲ. ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿಲ್ಲ. ನೀವು ಬಿಜೆಪಿಯವರು ಅದರ ಬಗ್ಗೆ ಒಂದೂ ಮಾತೂ ಆಡಲಿಲ್ಲ ಎಂದಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವಾಗ ಧ್ವನಿ ಎತ್ತಲಿಲ್ಲ. ಕೇಂದ್ರ ಸರ್ಕಾರದಲ್ಲಿ ನ್ಯಾಯಯುತವಾಗಿ ಬರಬೇಕಾದ್ದನ್ನು ಕೇಳಲೂ ನಿಮ್ಮಿಂದ ಆಗಲಿಲ್ಲ. ರಾಜ್ಯಕ್ಕೆ ಇದರಿಂದ ಸಾಕಷ್ಟು ನಷ್ಟವಾಗಿದೆ. ವಿರೋಧ ಪಕ್ಷ ಇರುವುದು ಭಾಷಣ ಮಾಡಲು ಮಾತ್ರವೇ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರದಲ್ಲಿ Non performing assets 1635000 ಕೋಟಿ ಸಾಲವಿದ್ದು, ಅದರಲ್ಲಿ 2 ಲಕ್ಷ ಕೋಟಿ ವಸೂಲಾಗಿದೆ. ಇನ್ನೂ ಸುಮಾರು 14 ಲಕ್ಷ ಕೋಟಿ ವಸೂಲಾಗಬೇಕು. ಸರ್ಕಾರ ಮತ್ತು ಆರ್ ಬಿ ಐ ನಿರಂತರ ವ್ಯವಸ್ಥೆ. ಸಾಲ ಕೊಟ್ಟ ಮೇಲೆ ವಸೂಲಿ ಮಾಡಬಾರದೆಂಬುದು ಇದೆಯೇ , ಮೋದಿಯವರು ಪ್ರಧಾನಿಯಾಗಿದ್ದು, ಅವರನ್ನು ಈ ಬಗ್ಗೆ ಪ್ರಶ್ನಿಸಬಹುದು. ಆದರೆ ರಾಜಕೀಯ ಉದ್ದೇಶದಿಂದ ಸೋನಿಯಾ ಗಾಂಧಿಯವರ ಹೆಸರನ್ನು ಎಳೆಯುತ್ತಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ನೀಡಿದ ಉತ್ತರಕ್ಕೆ 12 ಮಂದಿ ಸದಸ್ಯರು ಮತ್ತೊಮ್ಮೆ ಸ್ಪಷ್ಟನೆಯನ್ನು ಕೋರಿದ್ದಾರೆ. ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದೇವೆ.
ಬಜೆಟ್ ಗೆ ಸಂಬಂಧಪಟ್ಟ ಮಾಹಿತಿಗಳನ್ನು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತೇನೆ. ಜಿಎಸ್ ಟಿ ಯಲ್ಲಿ ಕರ್ನಾಟಕ 2 ನೇ ಸ್ಥಾನದಲ್ಲಿದೆ. ನಾವು ನೀಡುವ 5 ಲಕ್ಷ ಕೋಟಿ ತೆರಿಗೆಯಲ್ಲಿ ನಮಗೆ ಕೇವಲ 51 ಸಾವಿರ ಕೋಟಿ ಕೇಂದ್ರದಿಂದ ಬರುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ 5495 ಕೋಟಿ ರೂ. ವಿಶೇಷ ಅನುದಾನದಡಿ ಶಿಫಾರಸ್ಸು ಮಾಡಿದರು ಎಂದರು.
Oxford Universty ಯವರು ಎಲ್ಲಿ ಬರೆಯುತ್ತಾರೆ ಎಂಬುದು ಮುಖ್ಯವಲ್ಲ. Oxford University ಯಲ್ಲಿ ಪ್ರಕಟವಾಗಿರುವುದು ಮುಖ್ಯ. ಅರ್ಹತೆಯಿದ್ದಾಗ ಮಾತ್ರ ಲೇಖನ ಪ್ರಕಟವಾಗಿರುತ್ತದೆ. ಈ ಬಗ್ಗೆ ವಿರೋಧಪಕ್ಷದ ನಾಯಕರ ಹೇಳಿಕೆ ಸರಿಯಿಲ್ಲ. ವಿಧವಾ ವೇತನ, ಶಿಷ್ಯ ವೇತನ ಬಗ್ಗೆ ಸದಸ್ಯರು ಹೇಳಿದ್ದಾರೆ. ಪ್ರಧಾನಿ ಮೋದಿಯವರು ಕಳೆದ 11 ವರ್ಷದಿಂದ ಇಂತಹ ವೇತನಗಳಿಗೆ ಒಂದು ರೂ. ಹೆಚ್ಚು ಮಾಡಿಲ್ಲ. ನಾವು 10 ಸಾವಿರ ಕೋಟಿಗೂ ಹೆಚ್ಚು ಖರ್ಚು ಮಾಡುತ್ತಿದ್ದೇವೆ ಎಂದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರು 17.15% , ಪರಿಶಿಷ್ಟ ಪಂಗಡವರು ಶೇ. 6.95 % ರಷ್ಟು ಒಟ್ಟು ಶೇ.24.1 ಜನರಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಹಣ ಖರ್ಚಾಗಬೇಕು. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಯಡಿ ಎಲ್ಲ ಜಾತಿಯವರೂ ಇರುತ್ತಾರೆ. ಅದರಲ್ಲಿ ಶೇ.24.1 ಪರಿಗಣಿಸುತ್ತೇವೆ. ಗೃಹಲಕ್ಷ್ಮಿ, ಶಕ್ತಿ , ಗೃಹಜ್ಯೋತಿ ಯೋಜನೆಗಳ ಬಗ್ಗೆ evaluation ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಪಟ್ಟ ಸಭೆಯಲ್ಲಿ ಎಲ್ಲ ಶಾಸಕರನ್ನು ಕರೆಯಬಹುದಾಗಿದೆ ಎಂದರು.
ರೈತರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳು, ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದು ಸರ್ಕಾರದ ಆಶಯ. 2013ಕ್ಕೂ ಹಿಂದೆ ನಮ್ಮ ನಡಿಗೆ ಕೃಷ್ಣೆ ಕಡೆಗೆ ಕಾರ್ಯಕ್ರಮ ಮಾಡಲಾಗಿತ್ತು. ಅಂದು ಆ ಯೋಜನೆಗೆ 50 ಸಾವಿರ ಕೋಟಿ ನೀಡಿದರೆ ನೀರಾವರಿ ಯೋಜನೆ ಮುಗಿಯುತ್ತವೆ ಎಂಬ ಮಾಹತಿ ಇತ್ತು. ಆದ್ದರಿಂದ ವರ್ಷಕ್ಕೆ 10 ಸಾವಿರ ಕೋಟಿ ನೀಡುತ್ತೇವೆ ಎಂದು ಹೇಳಿದ್ದೆವು. ನಮ್ಮ ಸರ್ಕಾರ 5 ವರ್ಷದಲ್ಲಿ 56 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದರು.
ನೀರಾವರಿ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಿದ್ದನ್ನು ನಾವು, ಈಡೇರಿಸಲು ಪ್ರಯತ್ನಿಸುತ್ತೇವೆ. ಇದಕ್ಕೆ ಬೇಕಾದ ಭೂಸ್ವಾಧಿನ ಪೂರ್ಣಗೊಳಿಸಲು ಸರ್ಕಾರ ಪ್ರಯತ್ನಿಸುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ಕೆಕೆಆರ್ ಡಿ ಬಿ ಗೆ ನೀಡಿದ್ದೇವೆ. ಬಿಜೆಪಿಯವರು ಈ ಭಾಗಕ್ಕೆ ಎಷ್ಟು ಅನುದಾನವನ್ನು ನೀಡಿದ್ದಾರೆ ಎಂದು ತಿಳಿಸಲಿ. ಈ ವರ್ಷ 3 ಸಾವಿರ ಕೋಟಿ ಗೂ ಹೆಚ್ಚು ಖರ್ಚು ಮಾಡುತ್ತೇವೆ. ಮುಂದಿನ ವರ್ಷ 5000 ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡಲು ಪ್ರಯತ್ನಿಸುತ್ತೇವೆ ಎಂದರು.
ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಸುಳ್ಳು ಆರೋಪ, ಅಪಪ್ರಚಾರ ಮಾಡಿದರು. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ ಈವರೆಗೆ 410 ಕೋಟಿ ಬಾರಿ ಮಹಿಳೆಯರು ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ. ಜನರನ್ನು ಪ್ರತಿ ಬಾರಿ ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications