ಗಡಿ ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ: ಸಿದ್ದರಾಮಯ್ಯ

ಬೆಂಗಳೂರು,ಡಿಸೆಂಬರ್ 7: ಗಡಿ ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Siddaramaiah Says BJPs birthright is to let border disputes grow and use them for politics

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು.

Siddaramaiah Says BJPs birthright is to let border disputes grow and use them for politics

ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಬಿಜೆಪಿ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+