'ನನ್ನ ಆಸ್ತಿಯನ್ನು ಕುಮಾರಸ್ವಾಮಿಗೆ ಬರೆದುಕೊಡುತ್ತೇನೆ'
ಬೆಂಗಳೂರು, ಜೂ. 01 : 'ಕೆಂಗೇರಿಯಲ್ಲಿ ನಾನು ನೋಂದಣಿ ಮಾಡಿಸಿಕೊಂಡಿರುವ ಆಸ್ತಿಯನ್ನು ಪತ್ತೆ ಹಚ್ಚಿ ಕೊಟ್ಟರೆ ಅದನ್ನು ಕುಮಾರಸ್ವಾಮಿ ಅವರ ಹೆಸರಿಗೆ ಬರೆದುಕೊಡುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗೆ ಸವಾಲು ಹಾಕಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು ನೀಡಿದರು. 'ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಸುಮ್ಮನೆ ಆರೋಪ ಮಾಡಬಾರದು, ಜವಾಬ್ದಾರಿಯುತವಾಗಿ ಮಾತನಾಡಬೇಕು' ಎಂದು ಸಲಹೆ ನೀಡಿದರು. [ಸಿದ್ದರಾಮಯ್ಯ ಕೆಂಗೇರಿಯಲ್ಲಿ ಆಸ್ತಿ ಮಾಡಿದ್ದಾರೆ]

'ಕೆಂಗೇರಿಯಲ್ಲಿ ನಾನು ಯಾವುದೇ ಆಸ್ತಿಯನ್ನು ನೋಂದಣಿ ಮಾಡಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಅವರು, ಆಸ್ತಿಯನ್ನು ಪತ್ತೆ ಹಚ್ಚಿಕೊಟ್ಟರೆ, ಅದನ್ನು ಕುಮಾರಸ್ವಾಮಿ ಅವರ ಹೆಸರಿಗೆ ಬರೆದುಕೊಡುತ್ತೇನೆ ಎಂದು ಸಿದ್ದರಾಮಯ್ಯ' ಘೋಷಿಸಿದರು. [ಬಹಿರಂಗ ಚರ್ಚೆಗೆ ಬನ್ನಿ, ಸಿದ್ದುಗೆ ಎಚ್ಡಿಕೆ ಆಹ್ವಾನ]
ಕುಮಾರಸ್ವಾಮಿ ಹೇಳಿದ್ದೇನು : ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದ ಕುಮಾರಸ್ವಾಮಿ ಅವರು, 'ಬೆಂಗಳೂರಿನ ಕೆಂಗೇರಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಸುಳ್ಳು ಮಾಹಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ತಿ ನೋಂದಾಯಿಸಿಕೊಂಡಿದ್ದಾರೆ. 2003ರ ಮೇ 8ರಂದು ಈ ಆಸ್ತಿಯನ್ನು ನೋಂದಾಯಿಸಿಕೊಳ್ಳಲಾಗಿದೆ' ಎಂದು ಹೇಳಿದ್ದರು.
ನೀರಿನಿಂದ ತೆಗೆದ ಮೀನಾಗಿದ್ದಾರೆ : 'ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೇ ನೀರಿನಿಂದ ತೆಗೆದ ಮೀನಿನಂತಾಗಿದ್ದಾರೆ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ವಿಧಾನಸೌಧಲ್ಲಿ ಮಾತನಾಡಿದ ಅವರು, 'ಲಾಟರಿ ದಂಧೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದಂತೆ 35 ಅಧಿಕಾರಿಗಳ ಹೆಸರಿಲ್ಲ, ಹೆಸರಿರುವ ಒಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ತಗೆದುಕೊಳ್ಳಲಾಗಿದೆ' ಎಂದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications