ವಿಧಾನಸಭೆ ಕಲಾಪ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ!
ಬೆಂಗಳೂರು, ಡಿ. 08: ರೈತ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಆಗ್ರಹಿಸಿ ಭಾರತ್ ಬಂದ್ಗೆ ರೈತ ಸಮೂಹ ಕರೆ ಕೊಟ್ಟಿದೆ. ರಾಜ್ಯದಲ್ಲಿಯೂ ಭಾರತ್ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯ ವಿಧಾನ ಮಂಡಲ ಅಧಿವೇನದಲ್ಲಿಯೂ ರೈತರ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಎದುರು ವಿಪಕ್ಷಗಳ ಸದಸ್ಯರು ಬಿಚ್ಚಿಡುತ್ತಿದ್ದಾರೆ.
ರೈತರ ಬೆಳೆ ಹಾನಿ ಹಾಗೂ ಬೆಂಬಲ ಬೆಲೆ ವಿಚಾರ ಪ್ರಸ್ತಾಪಿಸಿ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮತ್ತ ಮಾತನಾಡುತ್ತಿದ್ದಾರೆ. ನಿಲುವಳಿ ಸೂಚನೆಯಡಿ ಚರ್ಚೆ ಆರಂಭಿಸಿರುವ ಸಿದ್ದರಾಮಯ್ಯ ಅವರು, ಆರಂಭದಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆ ವಿಷಯವನ್ನು ಪ್ರಸ್ತಾಪಿಸಿದರು.
ಕೇಂದ್ರ ಸರ್ಕಾರ ರೈತರ 17 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡಿದೆ. ಪ್ರವಾಹದ ನಡುವೆಯೂ ರಾಜ್ಯದಲ್ಲಿ 10.5 ಲಕ್ಷ ಟನ್ ಭತ್ತ ಬೆಳೆಯಲಾಗಿದೆ. ಆದರೆ ಭತ್ತವನ್ನು ಬೆಂಬಲ ಬೆಲೆಗೆ ಖರೀದಿಸುತ್ತಿಲ್ಲ. ಕರಾವಳಿ, ಉತ್ತರ ಕನ್ನಡ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭತ್ತ ಬೆಳೆಯಲಾಗಿದೆ. ರಾಜ್ಯದಲ್ಲಿ ಒಟ್ಟಾರೆ ಅಂದಾಜು 29 ಲಕ್ಷ ಟನ್ ಭತ್ತ ಬೆಳೆಯಲಾಗಿದೆ. ಅದರಲ್ಲಿ ಕನಿಷ್ಟ ಶೇಕಡಾ 70ರಷ್ಟನ್ನಾದರೂ ಕೊಂಡುಕೊಳ್ಳಬೇಕು. ಆದರೆ ಸರ್ಕಾರ ಕೇವಲ 2 ಲಕ್ಷ ಟನ್ ಮಾತ್ರ ಕೊಳ್ಳುತ್ತೇವೆ ಅಂದರೆ ಹೇಗೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಜೊತೆಗೆ ಬೆಂಬಲ ಬೆಲೆಯನ್ನು ವೈಜ್ಞಾನಿಕವಾಗಿ ಘೋಷಣೆ ಮಾಡುತ್ತಿಲ್ಲ. ಡಾ. ಸ್ವಾಮಿನಾಥನ್ ವರದಿಯಂತೆ ಅನುಷ್ಠಾನವನ್ನೂ ಮಾಡುತ್ತಿಲ್ಲ. ಎ2, ಎಫ್ 1, ಸಿ2 ನಂತೆ ಬೆಲೆ ನಿಗದಿ ಮಾಡಬೇಕಾಗಿತ್ತು. ಜೋಳ, ರಾಗಿ, ಮೆಕ್ಕೆಜೋಳ, ತೊಗರಿ, ಹೆಸರಿಗೆ ಬೆಲೆ ನಿಗದಿ ಮಾಡಿದೆ. ಕೇವಲ 15 ಉತ್ಪನ್ನಗಳಿಗೆ ಮಾತ್ರ ಬೆಲೆ ನಿಗದಿ ಮಾಡಲಾಗಿದೆ. ಅದೂ ಅವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿದ್ದಾರೆ. ಈ ಬಗ್ಗೆ ನಾನು ಪ್ರಧಾನಿ ಮೋದಿ ಅವರಿಗೆ ಪತ್ರವನ್ನೂ ಬರೆದಿದ್ದೆ.

ಅಲ್ಲಿಂದ ಯಾವುದೇ ಉತ್ತರ ಬಂದಿಲ್ಲ. ನೀವೇ ಉತ್ತರ ಕೊಡಲ್ಲ, ಇನ್ನು ಅವರೆಲ್ಲಿ ಕೊಡುತ್ತಾರೆ? ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮೂರು ಪತ್ರಗಳನ್ನು ಬರೆದಿದ್ದೇನೆ. ಯಾವಾಗಲಾದರೂ ಉತ್ತರ ಕೊಡಬಹುದು ಎಂದು ಕಾಯುತ್ತಿದ್ದೇನೆ. ಆದರೆ ಒಂದೂ ಪತ್ರಕ್ಕೂ ಸಿಎಂ ಯಡಿಯೂರಪ್ಪ ಉತ್ತರ ಕೊಟ್ಟಿಲ್ಲ. ನಿಮ್ಮ ಕೇಂದ್ರ ಕೃಷಿ ಸಚಿವ ತೋಮರ್ ಉತ್ತರಿಸಿದ್ದಾರೆ. ಆದರೆ ನೀವು ಉತ್ತರ ಕೊಡಲ್ವಲ್ಲಪ್ಪಾ ಮಾಧುಸ್ವಾಮಿ? ಎಂದು ಸದನದಲ್ಲಿದ್ದ ಸಚಿವ ಮಾಧುಸ್ವಾಮಿ ಅವರನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications