ಡಿ. ಕೆ. ರವಿ ಆತ್ಮಹತ್ಯೆ; ಸಿದ್ದರಾಮಯ್ಯ ಹೇಳಿದ ಸಂಗತಿಗಳು!
ಬೆಂಗಳೂರು, ಅಕ್ಟೋಬರ್ 03; ಐಎಎಸ್ ಅಧಿಕಾರಿಯಾಗಿದ್ದ ಡಿ. ಕೆ. ರವಿ ಸಾವಿನ ಪ್ರಕರಣದ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಲೇ ಇದೆ. 2015 ಮಾರ್ಚ್ 17ರಂದು ಡಿ. ಕೆ. ರವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಸಹ ವಹಿತ್ತು.
ಐಎಎಸ್ ಅಧಿಕಾರಿ ಡಿ. ಕೆ. ರವಿ ಸಾವಿನ ಕುರಿತು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಬರೆದಿರುವ 'ನಗ್ನ ಸತ್ಯ' ಪುಸ್ತಕವನ್ನು ಶನಿವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಡಿ. ಕೆ. ರವಿ ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಅವರು ಪ್ರಕರಣದ ಬಗ್ಗೆ ಹಲವಾರು ಸಂಗತಿಗಳನ್ನು ತೆರೆದಿಟ್ಟಿದ್ದಾರೆ.
ಡಿ. ಕೆ. ರವಿ ಆತ್ಮಹತ್ಯೆ ಮಾಡಿಕೊಂಡಾಗ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಪಕ್ಷಗಳು, ಜನರು, ಡಿ. ಕೆ. ರವಿ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರಾಗಿದ್ದ ಕೆ. ಜೆ. ಜಾರ್ಜ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಈಗ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿರುವ ಸಿದ್ದರಾಮಯ್ಯ, "ಡಿ. ಕೆ. ರವಿ ಆತ್ಮಹತ್ಯೆಗೆ ಸಂಬಂಧಿಸಿದ ಸಿಬಿಐ ವರದಿಯನ್ನು ಸದನದ ಮುಂದಿಟ್ಟು, ಸತ್ಯಸಂಗತಿಯನ್ನು ಜನರಿಗೆ ತಿಳಿಸಬೇಕಿತ್ತು, ನಾವದನ್ನು ಮಾಡಿಲ್ಲ. ನಾವು ಮಾಡಬೇಕಿದ್ದ ಈ ಕೆಲಸವನ್ನು ರಾಮಕೃಷ್ಣ ಉಪಾಧ್ಯ ಮಾಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು" ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿರುವುದೇನು?
"ರಾಮಕೃಷ್ಣ ಉಪಾಧ್ಯ ಡಿ. ಕೆ. ರವಿ ಅವರ ಸಾವಿನ ಕುರಿತಾಗಿ ಲ್ಯಾಂಡ್, ಲಸ್ಟ್ ಎಂಡ್ ಆಡಿಯೋ ಟೇಪ್ ಎಂಬ ಪುಸ್ತಕವನ್ನು ಆಂಗ್ಲ ಭಾಷೆಯಲ್ಲಿ ಬರೆದಿದ್ದಾರೆ. ಇದನ್ನು ಪ್ರಹ್ಲಾದ್ ರಾವ್ ಅವರು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಈ ಎರಡೂ ಪುಸ್ತಕಗಳು ಇಂದು ಏಕಕಾಲದಲ್ಲಿ ಲೋಕಾರ್ಪಣೆಗೊಂಡಿವೆ. ಡಿ.ಕೆ ರವಿ ಅವರ ಆತ್ಮಹತ್ಯೆಗೆ ಕಾರಣಗಳೇನು ಎಂಬ ಬಗ್ಗೆ ಹಲವಾರು ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ಈ ಪುಸ್ತಕದ ಮೂಲಕ ಜನರಿಗೆ ಸತ್ಯವನ್ನು ತಿಳಿಸುವ ಕೆಲಸ ಲೇಖಕರು ಮಾಡಿದ್ದಾರೆ" ಎಂದರು.

ಪ್ರಚಾರ ಪ್ರಿಯ ಕೂಡ ಆಗಿದ್ದರು
"ಡಿ. ಕೆ. ರವಿ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂಬ ಬಗ್ಗೆ ಎರಡು ಮಾತಿಲ್ಲ. ಇದರ ಜೊತೆಗೆ ಪ್ರಚಾರ ಪ್ರಿಯರು ಕೂಡ ಆಗಿದ್ದರು. ಅವರು ತಮ್ಮ ಕರ್ತವ್ಯದ ದಿನಗಳಲ್ಲಿ ಕ್ರಮ ಕೈಗೊಳ್ಳುವ ಮೊದಲು ಮೀಡಿಯಾಗಳಿಗೆ ತಿಳಿಸಿ, ನಂತರ ಕ್ರಮ ಜರುಗಿಸುತ್ತಿದ್ದರು. ಇದು ನನ್ನ ಅನುಭವಕ್ಕೆ ಬಂದದ್ದಷ್ಟೇ ಅಲ್ಲ ರಾಮಕೃಷ್ಣ ಉಪಾಧ್ಯ ಅವರ ಪುಸ್ತಕದಲ್ಲೂ ಉಲ್ಲೇಖಿಸಲಾಗಿದೆ"
"ರವಿ ಅವರನ್ನು ವರ್ಗಾವಣೆ ಮಾಡುವಂತೆ ನಮ್ಮ ಪಕ್ಷದ ಯಾವುದೇ ಶಾಸಕರು ನನ್ನ ಬಳಿ ಒತ್ತಡ ಹೇರಿರಲಿಲ್ಲ. ಒಮ್ಮೆ ಡಿ.ಕೆ ರವಿ ಅವರ ಮಾವ ಹನುಮಂತರಾಯಪ್ಪ ಅವರು ರಮೇಶ್ ಕುಮಾರ್ ಅವರ ಜೊತೆ ಬಂದು ತಮ್ಮ ಮಗಳು ಬೆಂಗಳೂರಿನಲ್ಲಿ ಇದ್ದಾರೆ, ಹೀಗಾಗಿ ರವಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಎಂದು ಮನವಿ ಮಾಡಿದ್ದರು. ನಂತರ ನಾನು ಅವರನ್ನು ಕಮರ್ಷಿಯಲ್ ಟ್ಯಾಕ್ಸ್ ಅಂಡ್ ಎನ್ಫೋರ್ಸ್ಮೆಂಟ್ ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಹುದ್ದೆಗೆ ವರ್ಗಾವಣೆ ಮಾಡಿದ್ದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಿದರು
"ಕೋಲಾರದಲ್ಲೇ ಡಿಸಿ ಯಾಗಿ ಮುಂದುವರೆಯಬೇಕು ಎಂಬ ಆಸೆ ಇದ್ದುದ್ದರಿಂದ ರವಿ ಅವರಿಗೆ ಈ ವರ್ಗಾವಣೆ ಅಷ್ಟೊಂದು ಸಂತಸದಾಯಕವಾಗಿ ಇರಲಿಲ್ಲವೇನೋ ಎಂಬುದು ನನ್ನ ಭಾವನೆ. ಕಾನೂನು ರೀತ್ಯಾ ಹಣ ಮಾಡಬೇಕೆಂಬ ಆಸೆಯಿಂದ ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಿದರು. ಅವರಿಗೆ ಹರಿಕೃಷ್ಣ ಮತ್ತು ಚಂದ್ರಶೇಖರ ಎಂಬ ಇಬ್ಬರು ಗೆಳೆಯರಿದ್ದರು. ಈ ಗೆಳೆಯರ ಜೊತೆಗೂಡಿ ಆರ್ ಅಂಡ್ ಎಚ್ ಎಂಬ ರಿಯಲ್ ಎಸ್ಟೇಟ್ ಕಂಪನಿ ಶುರು ಮಾಡಿದರು. ಒಂದು 500 ಕೋಟಿ ಹಣ ಸಂಪದಾನೆ ಮಾಡಿ, ನಂತರ ಐ.ಎ.ಎಸ್ ಹುದ್ದೆಗೆ ರಾಜೀನಾಮೆ ನೀಡಿ, ದೊಡ್ಡ ಉದ್ಯಮಿಯಾಗಬೇಕು ಎಂದು ಅವರ ಮಹದಾಸೆಯಾಗಿತ್ತು. ಆದರೆ ಹಣ ಮಾಡುವ ಅವರ ಈ ಆಸೆ ಈಡೇರಲಿಲ್ಲ. ಇದು ಅವರ ಜೀವನದ ವೈಫಲ್ಯ" ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತಿಪಕ್ಷಗಳು ರಾದ್ಧಾಂತ ಮಾಡಿದವು
"ರವಿ ಅವರ ಆತ್ಮಹತ್ಯೆ ವಿಷಯವನ್ನು ಮುಂದಿಟ್ಟಕೊಂಡು ಪ್ರತಿಪಕ್ಷಗಳು ರಾದ್ಧಾಂತ ಮಾಡಿದವು. ಮಾಧ್ಯಮಗಳು ಬೆಂಕಿಗೆ ತುಪ್ಪ ಸುರಿದವು. ಸಾಕ್ಷ್ಯಾಧಾರ ಇಲ್ಲದೆ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿದವು. ತನಿಖೆ ಇಲ್ಲದೆಯೇ ಮಾಧ್ಯಮಗಳು ತೀರ್ಪು ನೀಡಿದವು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಒಂದು ವಾರ ಏನೆಲ್ಲ ನಾಟಕಗಳು ನಡೆದವು. ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಅನಂತ್ ಕುಮಾರ್, ಸದಾನಂದ ಗೌಡ ಈ ಎಲ್ಲರೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿ ಸಿಬಿಐ ತನಿಖೆಗೆ ಆಗ್ರಹಿಸಿದರು. ಈ ಪ್ರಕರಣವನ್ನು ಸಿಬಿಐಗೆ ವಹಿಸಲು ನಮ್ಮ ಸರ್ಕಾರ ಯಾವುದೇ ಹಿಂದೇಟು ಹಾಕಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ 6 ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು. ಬಿಜೆಪಿ ಸರ್ಕಾರ ಯಾವುದಾದರೂ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿದೆಯಾ? ಇದೇ ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ ಎಂದು ಲೇವಡಿ ಮಾಡುತ್ತಿದ್ದವರು. ಅಪ್ರಮಾಣಿಕ ರಾಜಕಾರಣ ಮಾಡುವುದರಲ್ಲಿ ಅವರು ನಿಸ್ಸೀಮರು" ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
Recommended Video

ಏಕಮುಖ ಪ್ರೀತಿ ಅಪಾಯಕಾರಿ
"ಏಕಮುಖ ಪ್ರೀತಿ ಅಪಾಯಕಾರಿ. ಇನ್ನೊಬ್ಬರ ಭಾವನೆಗಳನ್ನು ಅರ್ಥ ಮಾಡಿಕೊಳ್ಳದೆ ಆತ್ಮಹತ್ಯೆ ಮಾಡಿಕೊಳ್ಳುವುದು ಮೂರ್ಖತನದ ಪರಮಾವಧಿ. ಪುಸ್ತಕದಲ್ಲಿ ಹೇಳಿರುವಂತೆ ಭೂಮಿ, ಕಾಮ, ಆಡಿಯೋ ಟೇಪ್ ರವಿ ಆತ್ಮಹತ್ಯೆಗೆ ಕಾರಣವೇ ಹೊರತು ಬೇರೆ ಯಾರೂ ಕಾರಣರಲ್ಲ. ಸತ್ಯ ಎಂದಿದ್ದರೂ ಹೊರಗೆ ಬಂದೇ ಬರುತ್ತದೆ. ಸಿಬಿಐ ತನಿಖಾ ವರದಿಯನ್ನು ನಮ್ಮ ಸರ್ಕಾರ ಇದ್ದಾಗಲೇ ಜನರ ಮುಂದೆ ಇಡಬೇಕಾಗಿತ್ತು. ಆದರೆ, ಸಾವಿನ ಹಿಂದಿನ ಸತ್ಯ ಅದಾಗಲೇ ಬಹಿರಂಗವಾಗಿದ್ದರಿಂದ ಆ ಕೆಲಸ ನಾವು ಮಾಡಲಿಲ್ಲ" ಎಂದರು
"ಜೆಡಿಎಸ್ನವರು ಡಿ.ಕೆ. ರವಿ ಅವರ ತಂದೆ, ತಾಯಿಯನ್ನು ಕರೆತಂದು ವಿಧಾನಸೌಧದ ಮುಂದೆ ಧರಣಿ ಕೂರಿಸಿದರು. ರವಿ ಸಾವಿನ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಹೇಳಿದರೂ ಅವರು ಕೇಳಲಿಲ್ಲ. ಯಾವುದಾದರೂ ಸರ್ಕಾರ ಘಟನೆ ನಡೆದ ವಾರದೊಳಗೆ ಸಿಬಿಐ ತನಿಖೆಗೆ ಒಪ್ಪಿಸಿದ್ದರೆ ಅದು ನಮ್ಮ ಸರ್ಕಾರ. ನಮಗೂ ಘಟನೆಗೂ ಸಂಬಂಧ ಇರಲಿಲ್ಲ. ಉಪ್ಪು ತಿಂದವರು ನೀರು ಕುಡಿಯಲಿ ಎಂಬ ನಿರ್ಧಾರದೊಂದಿಗೆ ಧೈರ್ಯವಾಗಿ ನಮ್ಮ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತು. ಸಿಬಿಐ ವರದಿ ತುಂಬಾ ತಡವಾಗಿ ಬಂದಿತ್ತು. ವಾಸ್ತವದಲ್ಲಿ ಇದು ಸಿಬಿಐಗೆ ವಹಿಸುವ ಪ್ರಕರಣವಾಗಿರಲಿಲ್ಲ. ಈ ಹಿಂದೆ ಸಿಐಡಿ ಇಲಾಖೆ ನಡೆಸಿದ್ದ ತನಿಖೆ ಸರಿಯಾದ ಹಾದಿಯಲ್ಲಿ ಇತ್ತು ಎಂಬುದನ್ನು ಸಿಬಿಐ ವರದಿ ಹೇಳಿತ್ತು. ಒಂದಂಕಿ ಲಾಟರಿಯಲ್ಲಿ ನಾನು ಮತ್ತು ಜಾರ್ಜ್ ಅಪಾರ ಹಣ ಮಾಡಿದ್ದೇವೆ ಎಂದು ಜೆ.ಡಿ.ಎಸ್ ಆರೋಪ ಮಾಡಿತ್ತು. ಮರುದಿನವೇ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಕೊನೆಗೆ ಏನಾಯ್ತು?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications