'ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಒಂದು ದಿನದ ಕಾಫಿ, ಟೀಗೆ 11,000,00 ಖರ್ಚು'
ಬೆಂಗಳೂರು, ಆಗಸ್ಟ್ 06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಒಂದು ದಿನದ ಕಾಫಿ, ಟೀಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಅದೇನು ವಿಶೇಷ ಕಾಫಿಯೇ? ಎಂದ ಸಿ.ಟಿ.ರವಿ ಅವರು ಹೆಲಿಕಾಪ್ಟರ್ ಓಡಾಟ ಕಡಿಮೆ ಆಗಿಲ್ಲ. ಮಂತ್ರಿಗಳಿಗೆ ಹೊಸ ಕಾರು ಬಂದಿದೆ. ಬಡಪಾಯಿ ದುಡಿದು ತಿನ್ನುವ ಕೆಎಸ್ಆರ್ಟಿಸಿ ನೌಕರರಿಗೇಕೆ ಸಂಯಮದ ಪಾಠ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಾಗ್ದಾಳಿ ನಡೆಸಿದರು.
ನಿಮ್ಮ ಮೂತಿ ನೋಡಿ ಜನರು ಬರುವುದಿಲ್ಲ. ಕಾಸು ಕೊಟ್ಟರಷ್ಟೇ ಬರುತ್ತಾರೆಂದು 300- 400 ರೂ. ಕೊಟ್ಟು ಒಂದೊಂದು ಸಮಾವೇಶಕ್ಕೆ ಕೋಟಿ ಕೋಟಿ ದುಡ್ಡು ಖರ್ಚು ಮಾಡಿದ್ದೀರಿ. ನಿಮಗಿಲ್ಲದ ಸಂಯಮದ ಪಾಠ ದುಡಿದು ತಿನ್ನುವಂಥ, ಜೀತದಾಳುಗಳಂತೆ ಕೆಲಸ ಮಾಡುವ ನೌಕರರಿಗೆ ಯಾಕೆ?. ನೀವು ಯಾವ ಖರ್ಚು ಉಳಿಸಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಸಿ ಟಿ ರವಿ ಅವರು ಪ್ರಶ್ನಿಸಿದರು.

ಆಳುವ ಪಕ್ಷ ಕಾಂಗ್ರೆಸ್, ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಅಧಿಕಾರದಲ್ಲಿ ಇಲ್ಲದೆ ಇದ್ದಾಗ ಒತ್ತಡ ತಂತ್ರ, ಈಗ ನಿರ್ಲಕ್ಷ್ಯದ ಮನಸ್ಥಿತಿ- ಈ ಕಾರಣದಿಂದ ಸಾರಿಗೆ ಸಂಸ್ಥೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಅಧಿಕಾರದಲ್ಲಿ ಇಲ್ಲದಾಗ ವೀರಾವೇಶದ ಮಾತು; ಈಗ ದುರಹಂಕಾರದ ಮಾತು ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 26 ನೇ ತಿಂಗಳು ನಡೆಯುತ್ತಿದೆ. ನಿನ್ನೆ ಮೊನ್ನೆ ಅಧಿಕಾರಕ್ಕೆ ಬಂದವರ ಥರ ನೀವು ಮಾತನಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು.
ಹಿಂದಿನ ಬಿಜೆಪಿ ಸರಕಾರದ ವಿರುದ್ಧ ವೃಥಾ ಆರೋಪ ಹೊರಿಸುವ ಷಡ್ಯಂತ್ರ ನಡೆಸುತ್ತಿದ್ದೀರಿ ಎಂದು ಟೀಕಿಸಿದರು. ನಿಮ್ಮದೇನು ಬದ್ಧತೆ? ನಿಮ್ಮ ಜವಾಬ್ದಾರಿ ಏನು? ಎಂದು ಕೇಳಿದರು. 12 ತಿಂಗಳ ಬಾಕಿ ಮಾತ್ರ ಬಿಜೆಪಿ ಸರಕಾರದ್ದು, ಕಳೆದ 26 ತಿಂಗಳ ಬಾಕಿ ನಿಮ್ಮ ಸರಕಾರದ ಅವಧಿಯದು. ವೇತನ ಹಿಂಬಾಕಿ ಪಾವತಿಸಿ ಮುಷ್ಕರ ನಿಲ್ಲಿಸಲು ಸಕಾರಾತ್ಮಕ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ಮಾತೆತ್ತಿದರೆ ಖಜಾನೆ ತುಂಬಿ ತುಳುಕುತ್ತಿದೆ ಎಂದು ಹೇಳುತ್ತಾರೆ. ಹಾಗಿದ್ದ ಮೇಲೆ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ಸಮಸ್ಯೆ ಏನಿದೆ ಎಂದು ಕೇಳಿದರು. ಬೇಡಿಕೆ ಈಡೇರಿಸಿ, ಇಲ್ಲವೇ ಪಾಪರ್ ಆಗಿದ್ದೇವೆ. ನಮ್ಮ ಬಳಿ ಬಿಡಿಗಾಸು ಇಲ್ಲ ಎಂದು ಒಪ್ಪಿಕೊಳ್ಳಿ ಎಂದು ಒತ್ತಾಯಿಸಿದರು.
4 ನಿಗಮಗಳು ನಷ್ಟದಲ್ಲಿವೆ ಎಂದಿದ್ದೀರಿ. ನಷ್ಟಕ್ಕೆ ಕಂಡಕ್ಟರ್- ಡ್ರೈವರ್ ಕಾರಣರೇ? ಖರೀದಿಯಲ್ಲಿ ಲೂಟಿ ಹೊಡೆಯುವವರು ಕಂಡಕ್ಟರ್ ಡ್ರೈವರ್ಗಳೇ? ಯಾರು ಕಾರಣ ಎಂದು ಸಿ.ಟಿ.ರವಿ ಅವರು ಕೇಳಿದರು. ಸಾರಿಗೆ ಸಚಿವ, ಎಂ.ಡಿ., ಕೆಎಸ್ಆರ್ಟಿಸಿ ಡಿಸಿ ಮಟ್ಟದ ಅಧಿಕಾರಿಗಳು, ಉಪಕರಣ ಖರೀದಿ ಮಾಡುವವರು ನಷ್ಟಕ್ಕೆ ಕಾರಣ. ಅವರೇ ಹೊಣೆ ಹೊತ್ತುಕೊಳ್ಳಬೇಕು. ಕಷ್ಟಪಟ್ಟು ದುಡಿಯುವ ಕಂಡಕ್ಟರ್- ಡ್ರೈವರ್ಗಳನ್ನು ನೀವು ಜೀತದಾಳುಗಳ ಥರ ಮಾಡಿದ್ದೀರಿ. ಅವರನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಅವರ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿದರು. ಆಡಳಿತ ನಡೆಸುವ ಯೋಗ್ಯತೆ ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಒತ್ತಾಯಿಸಿದರು. ನಾವು ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದರು.
ಉಳಿದ ಸರಕಾರಿ ನೌಕರರಿಗೆ ವೇತನ ಪರಿಷ್ಕರಿಸಿದ ಮಾದರಿಯಲ್ಲೇ ಇವರಿಗೂ ವೇತನ ಪರಿಷ್ಕರಿಸಿದರೆ ತಪ್ಪೇನಿದೆ ಎಂದು ಕೇಳಿದರು. ಒಬ್ಬರಿಗೊಂದು ನ್ಯಾಯ; ಇನ್ನೊಬ್ಬರಿಗೆ ಇನ್ನೊಂದು ಸರಿಯೇ ಎಂದು ಪ್ರಶ್ನಿಸಿದರು. ನಮಗೆ ಕೋವಿಡ್ ಸಂಕಷ್ಟ ಇತ್ತು. ನಿಮಗ್ಯಾವ ಸಂಕಷ್ಟ ಎಂದು ಪ್ರಶ್ನೆ ಮಾಡಿದರು. ಗಣೇಶೋತ್ಸವದ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದವರ ಪೊಲೀಸ್ ಕೇಸ್ ವಾಪಸ್ ಪಡೆಯುತ್ತೀರಿ; ಡಿಜೆ ಹಳ್ಳಿ, ಕೆಜಿ ಹಳ್ಳಿ ಊರು ಸುಟ್ಟವರ ಕೇಸ್ ವಾಪಸ್ ಪಡೆಯಲು ಶಿಫಾರಸು ಮಾಡುತ್ತೀರಿ. ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಮೊಕದ್ದಮೆ ವಾಪಸ್ ಪಡೆಯುತ್ತೀರಿ. ನ್ಯಾಯಯುತ ಹೋರಾಟ ಮಾಡುತ್ತಿದ್ದ ಈ ನೌಕರರ ಮೇಲಿನ ಕೇಸ್ ಯಾಕೆ ವಾಪಸ್ ಪಡೆದಿಲ್ಲ ಎಂದು ಕೇಳಿದರು. ಮತಬ್ಯಾಂಕ್ ಬಗ್ಗೆ ಮಾತ್ರ ನಿಮ್ಮ ಕಳಕಳಿಯೇ ಎಂದು ಪ್ರಶ್ನಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications