ಮಾಂಸ ತಿನ್ನುವುದು, ತಿನ್ನದೇ ಇರುವದು ವಿವಾದವೇ ಅಲ್ಲ: ಸಿದ್ದರಾಮಯ್ಯ ಹೇಳಿದ್ದೇನು.?
ಬಿಜೆಪಿ ರಾಜ್ಯ ನಾಯಕರಿಗೆ ಜನರಿಗೆ ಮುಖ ತೋರಿಸುವ ಶಕ್ತಿ ಇಲ್ಲ. ಹೀಗಾಗಿ ಮೋದಿ ,ನಡ್ಡಾ ,ಅಮಿತ್ ಶಾ ಅವರನ್ನ ಕರೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಾಗಲಕೋಟೆ,ಫೆಬ್ರವರಿ23: ಮಾಂಸ ತಿಂದು ಈ ಹಿಂದೆ ಸಿದ್ದರಾಮಯ್ಯ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡಿದ್ದು, ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸುವ ಮೂಲಕ ಟೀಕೆ ಮಾಡಿದ್ರು.
ಆದರೆ ಬಿಜೆಪಿ ನಾಯಕ ಸಿ ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ವಿಚಾರಕ್ಕೆ ಇದೀಗ ಸಿದ್ದರಾಮಯ್ಯ ಉತ್ತರಿದ್ದಾರೆ. ದೇವಸ್ಥಾನಕ್ಕೆ ಹೋಗೋದು,ಹೋಗದೇ ಇರುವುದು, ಮಾಂಸ ತಿನ್ನುವುದು, ತಿನ್ನದೇ ಇರುವದು ವಿವಾದವೇ ಅಲ್ಲ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿವಾದಗಳು ಇರುವುದು ಜನರ ಸಮಸ್ಯೆಗಳು ಹಾಗೂ ಕೊರತೆಗಳಲ್ಲಿ. ನಾಡಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ನಾನು ಈಗಾಗಲೇ ಬಿಜೆಪಿಗರಿಗೆ ನಾವು ಚರ್ಚೆ ಮಾಡಲು ತಯಾರಿದ್ದೇವೆ. ನೀವು ತಯಾರಿದ್ದೀರಾ ಎಂದು ಕೇಳಿದ್ದೇನೆ ಎಂದು ಹೇಳಿದರು.
ಈ ನಾಡಿನ ರೈತರಿಗೆ, ಬಡವರಿಗೆ ಏನು ಮಾಡಿದೀರಿ ಅಂತ ಅವರು ಹೇಳಬೇಕು. ಜನರ ಸಮಸ್ಯೆಗಳನ್ನು ಬಗೆ ಹರಿಸುವದನ್ನು ಬಿಟ್ಟು. ನಾಮ(ತಿಲಕ) ಹಾಕಿಕೊಳ್ಳುವದು ದೇವಸ್ಥಾನಕ್ಕೆ ಹೋಗುವುದು, ಟಿಪ್ಪು ಸುಲ್ತಾನ,ಗಾಂಧಿ ,ಗೋಡ್ಸೆ,ಸಾವರ್ಕಕರ್ ಬಗ್ಗೆ ಮಾತನಾಡುವದು ಇವೆಲ್ಲ ರಿಲೆವೆಂಟ್ ವಿಷಯಗಳಲ್ಲ ಎಂದು ಕಿಡಿಕಾರಿದರು.

ಪ್ರಧಾನಮಂತ್ರಿ ಮೋದಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬರುತ್ತಿರುವ ವಿಚಾರವಾಗಿ ಮಾತನಾಡಿ, ಮೋದಿ ಪ್ರವಾಹ ಬಂದಾಗ ಬರಲಿಲ್ಲ.ಕೊವೀಡ್ ಬಂದಾಗ ಬರಲಿಲ್ಲ,ಕೊವೀಡ್ ಬಂದಾಗ ಆಕ್ಸಿಜನ್ ಇಲ್ಲದೆ ಜನರು ಸತ್ತರು. ಅವಾಗ ಕೂಡ ಬರಲಿಲ್ಲ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.
ನಮ್ಮ ಆಕ್ಸಿಜನ್ ಬೇರೆಯವರಿಗೆ ಕೊಡ್ತಾ ಇದ್ದರು,ಕೋರ್ಟ್ ನಮ್ಮ ಪರವಾಗಿ ನಿಂತು ಅಂತ ಆಕ್ಸಿಜನ್ ಇಲ್ಲೇ ಉಳಿತು. ಈಗ ಚುನಾವಣೆಗೋಸ್ಕರ ರಾಜ್ಯಕ್ಕೆ ಬರ್ತಾ ಇದ್ದಾರೆ. ಚುನಾವಣೆ ಗೆಲ್ಲಬೇಕು ಅನ್ನುವ ಉದ್ದೇಶದಿಂದ ಬರ್ತಾ ಇದ್ದಾರೆ. ಜನರ ಅಭಿವೃದ್ಧಿ ಬಗ್ಗೆ ಅವರು ಯೋಚನೆ ಮಾಡುತ್ತಿದ್ದಾರಾ? ಇಲ್ಲ . ರೈತರ ಸಮಸ್ಯೆ ವಿಚಾರ ಮಾಡತ್ತಾರಾ? ಇಲ್ಲ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯ ನಾಯಕರಿಗೆ ಜನರಿಗೆ ಮುಖ ತೋರಿಸುವ ಶಕ್ತಿ ಇಲ್ಲ. ಹೀಗಾಗಿ ಮೋದಿ ,ನಡ್ಡಾ ,ಅಮಿತ್ ಶಾ ಅವರನ್ನ ಕರೆಸುತ್ತಿದ್ದಾರೆ. ಭ್ರಷ್ಟರು ಆಗಿದ್ದಕ್ಕೆ ಜನರ ಮುಂದೆ ಹೋಗುವುದಕ್ಕೆ ಭಯವಾಗಿದೆ. ಮೋದಿ ಅವರನ್ನು ಮುಂದೆ ಇಟ್ಟುಕೊಂಡು ಬಿಜೆಪಿ ನಾಯಕರು ಹಿಂದಿಂದೆ ಜನರ ಬಳಿ ಹೋಗುತ್ತಾ ಇದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications