ಮಾಂಸ ತಿನ್ನುವುದು, ತಿನ್ನದೇ ಇರುವದು ವಿವಾದವೇ ಅಲ್ಲ: ಸಿದ್ದರಾಮಯ್ಯ ಹೇಳಿದ್ದೇನು.?
ಬಿಜೆಪಿ ರಾಜ್ಯ ನಾಯಕರಿಗೆ ಜನರಿಗೆ ಮುಖ ತೋರಿಸುವ ಶಕ್ತಿ ಇಲ್ಲ. ಹೀಗಾಗಿ ಮೋದಿ ,ನಡ್ಡಾ ,ಅಮಿತ್ ಶಾ ಅವರನ್ನ ಕರೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಾಗಲಕೋಟೆ,ಫೆಬ್ರವರಿ23: ಮಾಂಸ ತಿಂದು ಈ ಹಿಂದೆ ಸಿದ್ದರಾಮಯ್ಯ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡಿದ್ದು, ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸುವ ಮೂಲಕ ಟೀಕೆ ಮಾಡಿದ್ರು.
ಆದರೆ ಬಿಜೆಪಿ ನಾಯಕ ಸಿ ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ವಿಚಾರಕ್ಕೆ ಇದೀಗ ಸಿದ್ದರಾಮಯ್ಯ ಉತ್ತರಿದ್ದಾರೆ. ದೇವಸ್ಥಾನಕ್ಕೆ ಹೋಗೋದು,ಹೋಗದೇ ಇರುವುದು, ಮಾಂಸ ತಿನ್ನುವುದು, ತಿನ್ನದೇ ಇರುವದು ವಿವಾದವೇ ಅಲ್ಲ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿವಾದಗಳು ಇರುವುದು ಜನರ ಸಮಸ್ಯೆಗಳು ಹಾಗೂ ಕೊರತೆಗಳಲ್ಲಿ. ನಾಡಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ನಾನು ಈಗಾಗಲೇ ಬಿಜೆಪಿಗರಿಗೆ ನಾವು ಚರ್ಚೆ ಮಾಡಲು ತಯಾರಿದ್ದೇವೆ. ನೀವು ತಯಾರಿದ್ದೀರಾ ಎಂದು ಕೇಳಿದ್ದೇನೆ ಎಂದು ಹೇಳಿದರು.
ಈ ನಾಡಿನ ರೈತರಿಗೆ, ಬಡವರಿಗೆ ಏನು ಮಾಡಿದೀರಿ ಅಂತ ಅವರು ಹೇಳಬೇಕು. ಜನರ ಸಮಸ್ಯೆಗಳನ್ನು ಬಗೆ ಹರಿಸುವದನ್ನು ಬಿಟ್ಟು. ನಾಮ(ತಿಲಕ) ಹಾಕಿಕೊಳ್ಳುವದು ದೇವಸ್ಥಾನಕ್ಕೆ ಹೋಗುವುದು, ಟಿಪ್ಪು ಸುಲ್ತಾನ,ಗಾಂಧಿ ,ಗೋಡ್ಸೆ,ಸಾವರ್ಕಕರ್ ಬಗ್ಗೆ ಮಾತನಾಡುವದು ಇವೆಲ್ಲ ರಿಲೆವೆಂಟ್ ವಿಷಯಗಳಲ್ಲ ಎಂದು ಕಿಡಿಕಾರಿದರು.

ಪ್ರಧಾನಮಂತ್ರಿ ಮೋದಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬರುತ್ತಿರುವ ವಿಚಾರವಾಗಿ ಮಾತನಾಡಿ, ಮೋದಿ ಪ್ರವಾಹ ಬಂದಾಗ ಬರಲಿಲ್ಲ.ಕೊವೀಡ್ ಬಂದಾಗ ಬರಲಿಲ್ಲ,ಕೊವೀಡ್ ಬಂದಾಗ ಆಕ್ಸಿಜನ್ ಇಲ್ಲದೆ ಜನರು ಸತ್ತರು. ಅವಾಗ ಕೂಡ ಬರಲಿಲ್ಲ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.
ನಮ್ಮ ಆಕ್ಸಿಜನ್ ಬೇರೆಯವರಿಗೆ ಕೊಡ್ತಾ ಇದ್ದರು,ಕೋರ್ಟ್ ನಮ್ಮ ಪರವಾಗಿ ನಿಂತು ಅಂತ ಆಕ್ಸಿಜನ್ ಇಲ್ಲೇ ಉಳಿತು. ಈಗ ಚುನಾವಣೆಗೋಸ್ಕರ ರಾಜ್ಯಕ್ಕೆ ಬರ್ತಾ ಇದ್ದಾರೆ. ಚುನಾವಣೆ ಗೆಲ್ಲಬೇಕು ಅನ್ನುವ ಉದ್ದೇಶದಿಂದ ಬರ್ತಾ ಇದ್ದಾರೆ. ಜನರ ಅಭಿವೃದ್ಧಿ ಬಗ್ಗೆ ಅವರು ಯೋಚನೆ ಮಾಡುತ್ತಿದ್ದಾರಾ? ಇಲ್ಲ . ರೈತರ ಸಮಸ್ಯೆ ವಿಚಾರ ಮಾಡತ್ತಾರಾ? ಇಲ್ಲ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯ ನಾಯಕರಿಗೆ ಜನರಿಗೆ ಮುಖ ತೋರಿಸುವ ಶಕ್ತಿ ಇಲ್ಲ. ಹೀಗಾಗಿ ಮೋದಿ ,ನಡ್ಡಾ ,ಅಮಿತ್ ಶಾ ಅವರನ್ನ ಕರೆಸುತ್ತಿದ್ದಾರೆ. ಭ್ರಷ್ಟರು ಆಗಿದ್ದಕ್ಕೆ ಜನರ ಮುಂದೆ ಹೋಗುವುದಕ್ಕೆ ಭಯವಾಗಿದೆ. ಮೋದಿ ಅವರನ್ನು ಮುಂದೆ ಇಟ್ಟುಕೊಂಡು ಬಿಜೆಪಿ ನಾಯಕರು ಹಿಂದಿಂದೆ ಜನರ ಬಳಿ ಹೋಗುತ್ತಾ ಇದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications