ಸದ್ಯದಲ್ಲೇ ಕನ್ನಡ ಧ್ವಜವಾಗಲಿದೆ 'ರಾಜ್ಯ ಧ್ವಜ' : ಸಿದ್ದರಾಮಯ್ಯ
ಕನ್ನಡ ಧ್ವಜವನ್ನು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ, ಕನ್ನಡ ಸಾಹಿತ್ಯ ಸಮಾವೇಶಗಳಲ್ಲಿ, ಕನ್ನಡ ಸಂಸ್ಕೃತಿ ಸಮ್ಮೇಳನಗಳಲ್ಲಿ, ಮತ್ತು ಎಲ್ಲೆಂದರಲ್ಲಿ ಹಾರಿಸುತ್ತಾರಾದರೂ ಅದಕ್ಕೊಂದು ಅಧಿಕೃತ ಮಾನ್ಯತೆ ಸಿಕ್ಕಿಯೇ ಇಲ್ಲ.
ಬೆಂಗಳೂರು, ನವೆಂಬರ್ 08 : ಕರ್ನಾಟಕ ಏಕೀಕರಣಗೊಂಡ 60ನೇ ವರ್ಷಾಚರಣೆ ಸಂಭ್ರಮದಲ್ಲಿರುವಾಗಲೇ, ಮತ್ತೊಂದು ಸಂತಸದ ಸುದ್ದಿಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
ಈಗಿರುವ ಕನ್ನಡ ಧ್ವಜ, ರಾಜ್ಯಧ್ವಜವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದರು. ಈ ಸಂಬಂಧ, ಸದ್ಯದಲ್ಲೇ ಆದೇಶ ಹೊರಬೀಳಲಿದೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.
ಕನ್ನಡ ಧ್ವಜ ರಾಜ್ಯ ಧ್ವಜವಾಗಬೇಕೆಂಬುದು ಹಲವಾರು ದಶಕಗಳ ಆಗ್ರಹವಾಗಿದೆ. ಸುಮಂಗಲಿಯರ ಪಾವಿತ್ರ್ಯದ ಸಂಕೇತವಾಗಿರುವ ಅರಿಷಿಣ ಮತ್ತು ಕುಂಕುಮ ಬಣ್ಣವನ್ನು ಧ್ವಜದಲ್ಲಿ ಮೇಲೆ ಮತ್ತು ಕೆಳಗೆ ಧರಿಸಿರುವ ಕನ್ನಡ ಧ್ವಜ ಕರ್ನಾಟಕ ರಾಜ್ಯದ ಸಮೃದ್ಧಿಯ ಸಂಕೇತವೂ ಆಗಿದೆ. [ಕರ್ನಾಟಕ ರಾಜ್ಯಕ್ಕೆ ಅಧಿಕೃತ ಬಾವುಟ ಇಲ್ಲ]

ಕನ್ನಡ ಧ್ವಜ ಹುಟ್ಟಿದ್ದು ಹೇಗೆ? : ಕನ್ನಡದ ಕಟ್ಟಾಳು, ಬರಹಗಾರ, ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ ಮ ರಾಮಮೂರ್ತಿ ಅವರು 1960ರಲ್ಲಿ ಕನ್ನಡ ಧ್ವಜದ ಜನಕ. ರಾಜ್ಯಾದ್ಯಂತ ಪಾದಯಾತ್ರೆ ಮಾಡಿ, ಪಕ್ಕದ ರಾಜ್ಯದವರು ನಮ್ಮ ರಾಜ್ಯದಲ್ಲಿ ಧ್ವಜ ಹಾರಿಸುವುದನ್ನು ವಿರೋಧಿಸಿ, ನಂತರ ನಮ್ಮದೇ ಆದ ಸ್ವತಂತ್ರ ಧ್ವಜವಿರಬೇಕೆಂದು ಪ್ರಸ್ತುತ ಧ್ವಜದ ಜನನಕ್ಕೆ ಕಾರಣರಾದರು.
ಈ ಧ್ವಜವನ್ನು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ, ಕನ್ನಡ ಸಾಹಿತ್ಯ ಸಮಾವೇಶಗಳಲ್ಲಿ, ಕನ್ನಡ ಸಂಸ್ಕೃತಿ ಸಮ್ಮೇಳನಗಳಲ್ಲಿ, ಮತ್ತು ಎಲ್ಲೆಂದರಲ್ಲಿ ಹಾರಿಸುತ್ತಾರಾದರೂ ಅದಕ್ಕೊಂದು ಅಧಿಕೃತ ಮಾನ್ಯತೆ ಸಿಕ್ಕಿಯೇ ಇಲ್ಲ. ಕನ್ನಡ ಸಿನೆಮಾಗಳಲ್ಲಿ, ಆಟೋಗಳಲ್ಲಿ, ಕನ್ನಡಪರ ಚಳವಳಿಗಳಲ್ಲಿ ರಾರಾಜಿಸುತ್ತಲೇ ಇರುತ್ತದೆ.
ರಾಷ್ಟ್ರಧ್ವಜಕ್ಕೆ ಇರುವಷ್ಟು ಮಾನ್ಯತೆ ಕರ್ನಾಟಕದಲ್ಲಿ ಕನ್ನಡ ಧ್ವಜಕ್ಕೂ ಇದೆ. ಗೋಕಾಕ್ ಚಳವಳಿಯಲ್ಲಿ ಕನ್ನಡ ಧ್ವಜವನ್ನು ಕನ್ನಡಿಗರ ಐಕ್ಯತೆಯ ಸಂಕೇತವಾಗಿ ಬಳಸಲಾಗಿತ್ತು. 1998ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಧ್ವಜವನ್ನು ರಾಜ್ಯ ಧ್ವಜವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿತ್ತು. ಆದರೆ, ಕಾನೂನು ಅಡಚಣೆಯಿಂದಾಗಿ ಅದು ಸಾಧ್ಯವಾಗಿರಲಿಲ್ಲ.
ಡಿವಿ ಸದಾನಂದ ಗೌಡರು ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ರಾಜ್ಯೋತ್ಸವದಂದು ಎಲ್ಲ ಸರಕಾರಿ ಕಟ್ಟಡಗಳ ಮೇಲೆ ಕಡ್ಡಾಯವಾಗಿ ಕನ್ನಡ ಧ್ವಜವನ್ನು ಹಾರಿಸಬೇಕೆಂದು ಸುತ್ತೋಲೆ ಹೊರಡಿಸಿತ್ತು. ಆದರೆ, ಕರ್ನಾಟಕ ಹೈಕೋರ್ಟ್ ಇದನ್ನು ಪ್ರಶ್ನಿಸಿದ್ದರಿಂದ ಆದೇಶವನ್ನು ಹಿಂಪಡೆಯಬೇಕಾಗಿತ್ತು.
ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿದರೆ ಯಾವ ರಾಜ್ಯದಲ್ಲೂ ಅಧಿಕೃತವಾಗಿ ರಾಜ್ಯಧ್ವಜವಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications