'ಸಾಧನೆಯ ಸಂಭ್ರಮ' ಸಿದ್ದರಾಮಯ್ಯ ರಾಜ್ಯ ಪ್ರವಾಸಕ್ಕೆ ಡಿ.13ರಂದು ಚಾಲನೆ
ಬೆಂಗಳೂರು, ಡಿಸೆಂಬರ್ 04 : ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 13ರಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. 'ಸಾಧನೆಯ ಸಂಭ್ರಮ' ಹೆಸರಿನಲ್ಲಿ ಈ ಪ್ರವಾಸ ನಡೆಯಲಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸ ಆರಂಭಿಸಲಿದ್ದು, 100 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸಿದ್ದರಾಮಯ್ಯ ಜೊತೆಗೆ ಇರಲಿದ್ದಾರೆ.
ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಿದ್ದರಾಮಯ್ಯ ಪ್ರವಾಸಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಡಿ.5, 6ರಂದು ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಪ್ರವಾಸ, ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಡಿ.5 ಮತ್ತು 6ರಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ, ಮೈಸೂರು, ಕಲಬುರಗಿ, ಬೆಂಗಳೂರು ವಿಭಾಗದ ಸಹ ಉಸ್ತುವಾರಿಗಳು, ಕೆಪಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆಗೆ ಪ್ರಚಾರ ನಡೆಸಲು 'ನವ ಕರ್ನಾಟಕ ಪರಿವರ್ತನಾ ಯಾತ್ರೆ' ಆರಂಭಿಸಿದೆ. ಯಾತ್ರೆ 23 ದಿನಗಳನ್ನು ಪೂರೈಸಿದ್ದು, ಕಲಬುರಗಿಯಲ್ಲಿ ಸದ್ಯ ಯಾತ್ರೆ ಸಂಚಾರ ನಡೆಸುತ್ತಿದೆ. ಜೆಡಿಎಸ್ ಸಹ 'ಕುಮಾರಪರ್ವ' ಹೆಸರಿನಲ್ಲಿ ಒಂದು ಹಂತದ ಪ್ರಚಾರ ಕಾರ್ಯ ನಡೆಸಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications