ಇಂದಿನಿಂದ ಸಿದ್ದರಾಮಯ್ಯ ಬರ ಪ್ರವಾಸ, ವಿವರಗಳು
ಬೆಂಗಳೂರು, ಏಪ್ರಿಲ್ 15 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರದಿಂದ ಬರ ಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲ ಹಂತದಲ್ಲಿ ಅವರು ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೀದರ್ಗೆ ತೆರಳುವ ಮುಖ್ಯಮಂತ್ರಿಗಳು, ಸೋಮವಾರದ ತನಕ ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಅವಲೋಕನ ನಡೆಸಿ, ಜಿಲ್ಲಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಿದ್ದಾರೆ. [ಉತ್ತರ ಕರ್ನಾಟಕ ಭಾಗಕ್ಕೆ ಮಹಾರಾಷ್ಟ್ರದಿಂದ 4 ಟಿಎಂಸಿ ನೀರು]

ಸಿದ್ದರಾಮಯ್ಯ ಪ್ರವಾಸದ ವಿವರ
* ಶುಕ್ರವಾರ ಬೆಳಗ್ಗೆ ಬೀದರ್ಗೆ ಭೇಟಿ, ಬರ ಪರಿಸ್ಥಿತಿ ತೀವ್ರವಾಗಿರುವ ತಾಲೂಕುಗಳಲ್ಲಿ ಅವಲೋಕನ, ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲಿಸುವರು. [ಸುಡುತ್ತಿದೆ ಕರ್ನಾಟಕ, ಬಾ ಮಳೆಯೇ ಬೇಗ ಬಾ]
* ಕಲಬುರಗಿಗೆ ಭೇಟಿ ಗ್ರಾಮಗಳು, ಮೇವು ಬ್ಯಾಂಕ್ ಮತ್ತು ಗೋಶಾಲೆಗಳಿಗೆ ಭೇಟಿ, ಅಧಿಕಾರಿಗಳ ಜೊತೆ ಸಭೆ
* ಶುಕ್ರವಾರ ರಾತ್ರಿ ಕಲಬುರಗಿಯಲ್ಲಿ ವಾಸ್ತವ್ಯ, ಶನಿವಾರ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಭೇಟಿ [ಕರ್ನಾಟಕದಲ್ಲಿ ಭೀಕರ ಬರಗಾಲ, ಹೇಳುವವರಿಲ್ಲ ಕೇಳುವವರಿಲ್ಲ]
* ಭಾನುವಾರ ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ, ಸೋಮವಾರ ಆ ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು. ಬಾಗಲಕೋಟೆಗೆ ಭೇಟಿ, ರಾತ್ರಿ ಬೆಂಗಳೂರಿಗೆ ವಾಪಸ್
ಜಿಲ್ಲಾಧಿಕಾರಿಗಳ ಜೊತೆ ಸಂವಾದ : ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳು ಇತ್ತೀಚೆಗೆ ಸಂವಾದ ನಡೆಸಿದ್ದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ 2 ದಿನ ಬರ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಬೇಕು. ಸ್ಥಳೀಯ ಶಾಸಕರನ್ನು ಭೇಟಿಯಾಗಿ ಸಮಾಲೋಚಿಸಬೇಕು. ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲಿಸಬೇಕು. ಮೇವು ಬ್ಯಾಂಕ್, ಗೋಶಾಲೆಗಳ ಸ್ಥಿತಿಗತಿ ಕುರಿತು ಪರಾಮರ್ಶಿಸಬೇಕು ಎಂದು ಸೂಚಿಸಿದ್ದರು.
ಕುಡಿಯುವ ನೀರು ಪೂರೈಕೆಗಾಗಿ ಸರ್ಕಾರ ಈಗಾಗಲೇ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 50 ಲಕ್ಷ ರೂ. ಬಿಡುಗಡೆ ಮಾಡಿದೆ. 70 ಮೇವು ಬ್ಯಾಂಕ್ ಮತ್ತು 11 ಕಡೆ ಗೋ ಶಾಲೆಗಳನ್ನು ತೆರೆಯಲಾಗಿದೆ. 2015-16ನೇ ಸಾಲಿನಲ್ಲಿ ಕುಡಿಯುವ ನೀರು ಪೂರೈಸುವ ಉದ್ದೇಶಕ್ಕಾಗಿ 275 ಕೋಟಿ ರೂ. ಬಿಡುಗಡೆ ಮಾಡಿದ್ದು 175 ಕೋಟಿ ರೂ. ವೆಚ್ಚವಾಗಿದೆ.
ಕರ್ನಾಟಕದಲ್ಲಿ ಈ ಬಾರಿ ಭೀಕರ ಬರಗಾಲದ ಪರಿಸ್ಥಿತಿ ಎದುರಾಗಿದ್ದು, 120ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ











Click it and Unblock the Notifications