Get Updates
Get notified of breaking news, exclusive insights, and must-see stories!

ನಿಜಲಿಂಗಪ್ಪರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಡಿಸೆಂಬರ್ 10: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಿದ್ದರಾಮಯ್ಯ ತಿಳಿಸಿದರು.

ಎಸ್. ನಿಜಲಿಂಗಪ್ಪ ಅವರ 115 ನೇ ಜನ್ಮದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಈ ಭರವಸೆ ನೀಡಿದರು.

Siddaramaiah urges Centre to honour S Nijalingappa with Bharat Ratna

ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಿಎಂ, ದೆಹಲಿ ಪಾರ್ಲಿಮೆಂಟ್ ಆವರಣದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸುವಂತೆಯೂ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುವುದು ಎಂದಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, "ನಿಜಲಿಂಗಪ್ಪ ಅವರು ದೇಶ ಕಂಡ ಒಬ್ಬ ಅಪ್ರತಿಮ ನಾಯಕ. ಅವರು ರಾಜಕೀಯ ಜೀವನದಲ್ಲಿ ಕೈ ಮತ್ತು ಬಾಯಿಯನ್ನು ಶುದ್ಧವಾಗಿಟ್ಟುಕೊಂಡಿದ್ದರು," ಎಂದು ಹೇಳಿದರು.

"ರಾಜ್ಯದ ಪ್ರಜೆಗಳ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದ ನಿಜಲಿಂಗಪ್ಪನವರು ರಾಜ್ಯದಲ್ಲಿ ನೀರಾವರಿಗೆ ನೀಡಿರುವ ಕೊಡುಗೆ ಅಪಾರ. ಅವರು ಬರೀ ರಾಜ್ಯಕ್ಕೆ ಮಾತ್ರ ನಾಯಕರಾಗಿರದೆ ರಾಷ್ಟ್ರಮಟ್ಟದ ನಾಯಕರೂ ಆಗಿದ್ದರು," ಅವರು ಅಭಿಪ್ರಾಯಪಟ್ಟರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+