ಅನುಮಾನಕ್ಕೆ ಕಾರಣವಾದ ಕೆಎಎಸ್ ಪರೀಕ್ಷೆ
ಬೆಂಗಳೂರು, ಆ. 10: ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಸರ್ಕಾರದ ಎಲ್ಲ ನೇಮಕಾತಿಗಳನ್ನು ತಡೆಹಿಡಿಲು ರಾಜ್ಯ ಬಿಜೆಪಿ ಸರ್ಕಾರ ಆದೇಶ ಮಾಡಿದೆ. ಅದಕ್ಕಾಗಿ ಪ್ರತ್ಯೇಕ ಸುತ್ತೋಲೆಯನ್ನೂ ಹೊರಡಿಸಿದೆ. ಆದರೆ ಇದೀಗ ತಾನೇ ಹೊರಡಿಸಿದ ಸುತ್ತೋಲೆಯನ್ನು ಬದಿಗೆ ಸರಿಸಿ, ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ತರಾತುರಿಯಲ್ಲಿ ಕೆಎಎಸ್ ಪರೀಕ್ಷೆ ನಡೆಸಲು ಮುಂದಾಗಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Recommended Video
ರಾಜ್ಯದ 6 ಜಿಲ್ಲೆಗಳಲ್ಲಿ ಮಾತ್ರ ಕೆಪಿಎಸ್ಸಿ ಪರೀಕ್ಷಾ ಕೇಂದ್ರಗಳಿವೆ. ಕೊರೊನಾ ವೈರಸ್ ಸಂಕಷ್ಟದ ಈ ವೇಳೆಯಲ್ಲಿ 30 ಜಿಲ್ಲೆಗಳಿಂದ ವಿದ್ಯಾರ್ಥಿಗಳ ಪ್ರಯಾಣ ಮತ್ತು ವಾಸ್ತವ್ಯ ಬಹಳಷ್ಟು ಅಪಾಯಕಾರಿ. ಈ ಎಲ್ಲ ಅಂಶಗಳನ್ನು ಗಮನಿಸಿ ಆಗಷ್ಟ್ 24 ರಂದು ನಿಗದಿ ಮಾಡಿರುವ ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಬೇಕೆಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ಜೊತೆಗೆ ಕೆಪಿಎಎಸ್ಸಿ ಪರೀಕ್ಷೆ ಬರೆಯುವವರಲ್ಲಿ ಶೇಕಡಾ 20ರಷ್ಟು ಅಭ್ಯರ್ಥಿಗಳು ಸರ್ಕಾರಿ ನೌಕರಿಯಲ್ಲಿದ್ದಾರೆ. ಅವರೆಲ್ಲರೂ ಕಡ್ಡಾಯವಾಗಿ ಕೊರೊನಾ ವಾರಿಯರ್ಸ್ ಎಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತಹ ಕೊರೊನಾ ವಾರಿಯರ್ಸ್ಗಳಲ್ಲಿ ಯಾರಿಗಾದರೂ ಕೋವಿಡ್ ಸೋಂಕು ಇದ್ದಲ್ಲಿ ಅದು ಬೇರೆಯವರಿಗೂ ಹರಡುವ ಸಾಧ್ಯತೆಯಿದೆ.

ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಕ್ಷಣ ಈ ಬಗ್ಗೆ ಗಮನ ಹರಿಸಿ, ಪರೀಕ್ಷೆ ಮುಂದೂಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications