Get Updates
Get notified of breaking news, exclusive insights, and must-see stories!

ವಿಧಾನ ಪರಿಷತ್‌ ಸ್ಥಾನ ಇವರಿಗೇ ಕೊಡಬೇಕು: ಹೈಕಮಾಂಡ್‌ಗೆ ಪಟ್ಟಿ ಕೊಟ್ಟ ಸಿದ್ದರಾಮಯ್ಯ

ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರ ಜೊತೆಗೆ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳನ್ನು ತುಂಬುವ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಅವರೊಂದಿಗೆ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಕೆಲವು ನಾಯಕರ ಹೆಸರನ್ನೂ ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಈ ಸಮುದಾಯದ ನಾಯಕರುಗಳಿಗೆ ವಿಧಾನ ಪರಿಷತ್‌ ಸ್ಥಾನ ಕೊಡಬೇಕು ಎಂದೂ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಈ ಸ್ಥಾನಕ್ಕೆ ಯಾರೆಲ್ಲರ ಹೆಸರು ಮುನ್ನೆಲೆಗೆ ಬಂದಿದೆ ಎಂಬ ಮಾಹಿತಿ ಇಲ್ಲಿ ತಿಳಿಯಿರಿ.

ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಮುಖ್ಯ ಈ ಸಮುದಾಯದ ನಾಯಕರನ್ನೇ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ್‌ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಾಮನಿರ್ದೇಶನ ಪ್ರಕ್ರಿಯೆ ಅಂತಿಮಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿದ್ದು, ಈ ಸ್ಥಾನಕ್ಕೆ ಸಂಭಾವ್ಯರ ಪಟ್ಟಿಯನ್ನು ಕೂಡ ಖರ್ಗೆ ಅವರಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Siddaramaiah Urges To Allocate Legislative Council Seats For OBC Dalits Vokkaligas

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ ಸದ್ಯ 33 ಸ್ಥಾನಗಳನ್ನು ಹೊಂದಿದೆ. ಈಗ ಈ ನಾಲ್ಕು ಸದಸ್ಯರ ನಾಮನಿರ್ದೇಶನದ ಬಳಿಕ ಕಾಂಗ್ರೆಸ್‌ನ ಬಲವು 37ಕ್ಕೆ ಹೆಚ್ಚಾಗಲಿದೆ. ಹಾಗಾಗಿ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಒಮ್ಮತದಿಂದ ಸಂಭಾವ್ಯರ ಅಂತಿಮ ಪಟ್ಟಿಯನ್ನು ಹೈಕಮಾಂಡ್‌ಗೆ ಕಳಿಸಕೊಡುವಂತೆ ಖರ್ಗೆ ಸೂಚನೆ ನೀಡಿದ್ದಾರಂತೆ.

ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವಾಗ ಮುಖ್ಯವಾಗಿ ಒಕ್ಕಲಿಗ, ಇತರ ಹಿಂದುಳಿದ ವರ್ಗಗಳು ಹಾಗೂ ದಲಿತ ಸಮುದಾಯಕ್ಕೆ ಒತ್ತು ಕೊಡಬೇಕು ಎಂದು ಸಿಎಂ ಬೇಡಿಕೆ ಇಟ್ಟಿದ್ದಾರೆ. ಪಕ್ಷಕ್ಕಾಗಿ ದುಡಿಯುತ್ತಿರುವ ಸಣ್ಣ ಸಮುದಾಯಗಳ ನಾಯಕರಿಗೆ ಅವಕಾಶ ಕೊಡಬೇಕು. ಈ ಬಗ್ಗೆ ಪರಿಶೀಲನೆ ನಡೆಸಿ ಎಂದೂ ಖರ್ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

Siddaramaiah Urges To Allocate Legislative Council Seats For OBC Dalits Vokkaligas

ಒಕ್ಕಲಿಗ ಸಮುದಾಯದಿಂದ ಬಿ.ಎಲ್‌.ಶಂಕರ್‌, ರಘುನಂದನ್‌ ರಾಮಣ್ಣ, ವಿನಯ್‌ ಕಾರ್ತಿಕ್‌ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ. ಬಿ.ಎಲ್‌.ಶಂಕರ್ ಅವರನ್ನು ಪರಿಷತ್‌ಗೆ ನಾಮನಿರ್ದೇಶನ ಮಾಡಿ, ಸಭಾಪತಿ ಸ್ಥಾನ ಕೊಡಬೇಕು ಎಂಬ ಚಿಂತನೆಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರಂತೆ. ಈ ವಿಚಾರದಲ್ಲಿ ಒಕ್ಕಲಿಗ ಸಮುದಾಯದ ಕೋಟಾ ಬಿಟ್ಟುಕೊಡಲು ಡಿ.ಕೆ.ಶಿವಕುಮಾರ್ ಅವರೂ ರೆಡಿ ಇಲ್ಲ ಎಂದು ತಿಳಿದುಬಂದಿದೆ.

Take a Poll

ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್‌ ಆಕಾಂಕ್ಷಿಯಾಗಿದ್ದ ರಘುನಂದನ್‌ ರಾಮಣ್ಣ ಅವರನ್ನ ಪರಿಷತ್ ಸದಸ್ಯರನ್ನಾಗಿ ಮಾಡುವುದಾಗಿ ಡಿಕೆಶಿ ಭರವಸೆ ನೀಡಿದ್ದರು. ಹಾಗಾಗಿ ಪರಿಷತ್‌ಗೆ ನಾಮನಿರ್ದೇಶನ ಮಾಡಲು ರಘುನಂದನ್‌ ಕೂಡ ರೇಸ್‌ನಲ್ಲಿದ್ದಾರೆ. ಇನ್ನು ಒಬಿಸಿ ಸಮುದಾಯದಿಂದ ರಮೇಶ್‌ ಬಾಬು ಅವರಿಗೆ ಅವಕಾಶ ಕೊಡುವ ಚಿಂತನೆ ಇದೆ. ಪತ್ರಕರ್ತ ದಿನೇಶ್‌ ಅಮಿನ್‌ಮಟ್ಟು ಅವರ ಹೆಸರೂ ಸಹ ಈ ಸ್ಥಾನಕ್ಕೆ ಪ್ರಸ್ತಾಪವಾಗಿದೆ. ದಲಿತ ಸಮುದಾಯದಿಂದ ಡಿ.ಜಿ.ಸಾಗರ್ ಅಥವಾ ಪತ್ರಕರ್ತ ಶಿವಕುಮಾರ್ ಅವರನ್ನು ಪರಿಗಣಿಸುವಂತೆ ಸೂಚಿಸಲಾಗಿದೆ ಎಂದು ಪಕ್ಷದಲ್ಲಿ ಚರ್ಚೆಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+