ವಿಧಾನ ಪರಿಷತ್ ಸ್ಥಾನ ಇವರಿಗೇ ಕೊಡಬೇಕು: ಹೈಕಮಾಂಡ್ಗೆ ಪಟ್ಟಿ ಕೊಟ್ಟ ಸಿದ್ದರಾಮಯ್ಯ
ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜೊತೆಗೆ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳನ್ನು ತುಂಬುವ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಅವರೊಂದಿಗೆ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಕೆಲವು ನಾಯಕರ ಹೆಸರನ್ನೂ ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಈ ಸಮುದಾಯದ ನಾಯಕರುಗಳಿಗೆ ವಿಧಾನ ಪರಿಷತ್ ಸ್ಥಾನ ಕೊಡಬೇಕು ಎಂದೂ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಈ ಸ್ಥಾನಕ್ಕೆ ಯಾರೆಲ್ಲರ ಹೆಸರು ಮುನ್ನೆಲೆಗೆ ಬಂದಿದೆ ಎಂಬ ಮಾಹಿತಿ ಇಲ್ಲಿ ತಿಳಿಯಿರಿ.
ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಮುಖ್ಯ ಈ ಸಮುದಾಯದ ನಾಯಕರನ್ನೇ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಾಮನಿರ್ದೇಶನ ಪ್ರಕ್ರಿಯೆ ಅಂತಿಮಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿದ್ದು, ಈ ಸ್ಥಾನಕ್ಕೆ ಸಂಭಾವ್ಯರ ಪಟ್ಟಿಯನ್ನು ಕೂಡ ಖರ್ಗೆ ಅವರಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದ್ಯ 33 ಸ್ಥಾನಗಳನ್ನು ಹೊಂದಿದೆ. ಈಗ ಈ ನಾಲ್ಕು ಸದಸ್ಯರ ನಾಮನಿರ್ದೇಶನದ ಬಳಿಕ ಕಾಂಗ್ರೆಸ್ನ ಬಲವು 37ಕ್ಕೆ ಹೆಚ್ಚಾಗಲಿದೆ. ಹಾಗಾಗಿ ಪರಿಷತ್ನಲ್ಲಿ ಕಾಂಗ್ರೆಸ್ಗೆ ಬಹುಮತ ಸಿಗಲಿದೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಒಮ್ಮತದಿಂದ ಸಂಭಾವ್ಯರ ಅಂತಿಮ ಪಟ್ಟಿಯನ್ನು ಹೈಕಮಾಂಡ್ಗೆ ಕಳಿಸಕೊಡುವಂತೆ ಖರ್ಗೆ ಸೂಚನೆ ನೀಡಿದ್ದಾರಂತೆ.
ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವಾಗ ಮುಖ್ಯವಾಗಿ ಒಕ್ಕಲಿಗ, ಇತರ ಹಿಂದುಳಿದ ವರ್ಗಗಳು ಹಾಗೂ ದಲಿತ ಸಮುದಾಯಕ್ಕೆ ಒತ್ತು ಕೊಡಬೇಕು ಎಂದು ಸಿಎಂ ಬೇಡಿಕೆ ಇಟ್ಟಿದ್ದಾರೆ. ಪಕ್ಷಕ್ಕಾಗಿ ದುಡಿಯುತ್ತಿರುವ ಸಣ್ಣ ಸಮುದಾಯಗಳ ನಾಯಕರಿಗೆ ಅವಕಾಶ ಕೊಡಬೇಕು. ಈ ಬಗ್ಗೆ ಪರಿಶೀಲನೆ ನಡೆಸಿ ಎಂದೂ ಖರ್ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಒಕ್ಕಲಿಗ ಸಮುದಾಯದಿಂದ ಬಿ.ಎಲ್.ಶಂಕರ್, ರಘುನಂದನ್ ರಾಮಣ್ಣ, ವಿನಯ್ ಕಾರ್ತಿಕ್ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ. ಬಿ.ಎಲ್.ಶಂಕರ್ ಅವರನ್ನು ಪರಿಷತ್ಗೆ ನಾಮನಿರ್ದೇಶನ ಮಾಡಿ, ಸಭಾಪತಿ ಸ್ಥಾನ ಕೊಡಬೇಕು ಎಂಬ ಚಿಂತನೆಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರಂತೆ. ಈ ವಿಚಾರದಲ್ಲಿ ಒಕ್ಕಲಿಗ ಸಮುದಾಯದ ಕೋಟಾ ಬಿಟ್ಟುಕೊಡಲು ಡಿ.ಕೆ.ಶಿವಕುಮಾರ್ ಅವರೂ ರೆಡಿ ಇಲ್ಲ ಎಂದು ತಿಳಿದುಬಂದಿದೆ.
ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುನಂದನ್ ರಾಮಣ್ಣ ಅವರನ್ನ ಪರಿಷತ್ ಸದಸ್ಯರನ್ನಾಗಿ ಮಾಡುವುದಾಗಿ ಡಿಕೆಶಿ ಭರವಸೆ ನೀಡಿದ್ದರು. ಹಾಗಾಗಿ ಪರಿಷತ್ಗೆ ನಾಮನಿರ್ದೇಶನ ಮಾಡಲು ರಘುನಂದನ್ ಕೂಡ ರೇಸ್ನಲ್ಲಿದ್ದಾರೆ. ಇನ್ನು ಒಬಿಸಿ ಸಮುದಾಯದಿಂದ ರಮೇಶ್ ಬಾಬು ಅವರಿಗೆ ಅವಕಾಶ ಕೊಡುವ ಚಿಂತನೆ ಇದೆ. ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅವರ ಹೆಸರೂ ಸಹ ಈ ಸ್ಥಾನಕ್ಕೆ ಪ್ರಸ್ತಾಪವಾಗಿದೆ. ದಲಿತ ಸಮುದಾಯದಿಂದ ಡಿ.ಜಿ.ಸಾಗರ್ ಅಥವಾ ಪತ್ರಕರ್ತ ಶಿವಕುಮಾರ್ ಅವರನ್ನು ಪರಿಗಣಿಸುವಂತೆ ಸೂಚಿಸಲಾಗಿದೆ ಎಂದು ಪಕ್ಷದಲ್ಲಿ ಚರ್ಚೆಯಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications