ಮೂಢನಂಬಿಕೆ ವಿರೋಧಿ ಕಾಯ್ದೆ ಮೇಲೆ ಆಸೆ, ಚುನಾವಣೆ ಬಗ್ಗೆ ಪ್ರೀತಿ
ಬೆಂಗಳೂರು, ಜುಲೈ 3: 2018ರ ಚುನಾವಣೆಗೂ ಮೊದಲು ಮೂಢನಂಬಿಕೆ ವಿರೋಧಿ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಲಾಷೆ. ಆದರೆ ಈ ಕಾಯ್ದೆಯನ್ನು ವಿರೋಧಿಸುವ ವಿಪಕ್ಷಗಳಿಂದಾಗಿ ಎಲ್ಲಿ ಚುನಾವಣೆಗೆ ಮುಳುವಾಗುತ್ತದೋ ಎಂಬುದು ಸಿದ್ದರಾಮಯ್ಯನವರ ಆತಂಕವಾಗಿದೆ.
ವಿಪಕ್ಷಗಳ ಜತೆಗೆ ಸ್ವಪಕ್ಷಗಳ ನಾಯಕರೂ ಇದನ್ನು ವಿರೋಧಿಸುತ್ತಿರುವುದು ಸಿದ್ದರಾಮಯ್ಯನರ ಕನಸಿನ ಮೂಢನಂಬಿಕೆ ವಿರೋಧಿ ಕಾಯ್ದೆಗೆ ಗಂಡಾಂತರ ತಂದಿದೆ.

ಎಲ್ಲಿ ಮೂಢನಂಬಿಕೆ ವಿರೋಧಿ ಕಾಯ್ದೆ ತಂದರೆ ಜನ ಒಪ್ಪಿಕೊಳ್ಳದೆ ತಮ್ಮ ಮತಗಳಿಗೆ ಕುತ್ತು ಬೀಳುವುದೋ ಎಂಬುದು ಕಾಂಗ್ರೆಸ್ ನಾಯಕರ ಆತಂಕವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೇ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ.
ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ವಿಧಾನಸಭೆ ಮುಂದೆ ಮಂಡಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಆದರೆ ಈ ಕುರಿತು ಹೇಳಿಕೆ ನೀಡಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಕೆಲವು ವರ್ಗದವರು ಇದನ್ನು ವಿರೋಧಿಸುತ್ತಿದ್ದಾರೆ. ಈ ರೀತಿಯಾದರೆ ಸಾಧ್ಯವಿಲ್ಲ. ದೊಡ್ಡ ಬೆಂಬಲ ಸಿಕ್ಕಿದರೆ ಮಾತ್ರ ಈ ಕಾಯ್ದೆ ಜಾರಿಗೆ ತರಬಹುದು ಎಂದು ಹೇಳಿದ್ದಾರೆ.
"ಮೂಢನಂಬಿಕೆ ವಿರೋಧಿ ಕಾಯ್ದೆ ಜಾರಿಗೆ ತರುವುದು ಅಧಿಕಾರಕ್ಕೆ ಬಂದಂದಿನಿಂದ ಸಿದ್ದರಾಮಯ್ಯನವರ ಕನಸಾಗಿದೆ. ಜಾರಿಗೆ ತರುವುದು ಕಷ್ಟ ಎಂಬ ಕಾರಣಕ್ಕೆ ಮೂಲ ಕಾಯ್ದೆಯಿಂದ ಒಂದಷ್ಟು ಅಂಶಗಳನ್ನು ತೆಗೆದಿದ್ದೇವೆ. ಮಡೆ ಸ್ನಾನ, ಜ್ಯೋತಿಷ್ಯ, ಪ್ರಾಣಿ ಬಲಿಯಂಥ ಕೆಲವು ಪ್ರಮುಖ ಅಂಶಗಳನ್ನು ಕೈಬಿಟ್ಟಿದ್ದೇವೆ," ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
-
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications