HD Kumaraswamy : ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು. ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು, ಕರ್ನಾಟಕದಲ್ಲಿ ದೀರ್ಘ ಕಾಲ ಆಡಳಿತ ನಡೆಸಿದ್ದೇನೆ ಎಂಬುದಾಗಿ ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಕೆಟ್ಟ ಆಡಳಿತಕ್ಕೆ ನಿದರ್ಶನ. ಅವರ ಆಡಳಿತದ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಉತ್ತಮ ಆಡಳಿತಕ್ಕೆ ಸಾಕ್ಷಿಯಾಗಿದ್ದ ಕರ್ನಾಟಕ ಇಂದು ಅದಕ್ಷ, ಕೆಟ್ಟ ಆಡಳಿತಕ್ಕೆ ನಿದರ್ಶನ ಆಗಿದೆ. ದೇವರಾಜು ಅರಸು ಎಲ್ಲಿ? ಇವರಲ್ಲಿ? ಅರಸು ಅವರ ದಾಖಲೆ ಮುರಿಯುವುದು ಇರಲಿ, ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ. ಕಾಂಗ್ರೆಸ್ಸಿಗೆ ಮತದಾರರು ಬುದ್ಧಿ ಕಲಿಸುತ್ತಾರೆ. ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿಕೊಳ್ಳುವ ಇವರಿಗೆ ಮತದಾರರು ಸರಿಯಾಗಿ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಕಳೆದ ಎರಡೂವರೆ ವರ್ಷಗಳ ಆಡಳಿತ ಇತಿಹಾಸ ಸೇರುವಂತಹ ಕೆಟ್ಟ ಆಡಳಿತವಾಗಿದೆ, ಭ್ರಷ್ಟಾಚಾರ, ಕೊಲೆ, ಸುಲಿಗೆ, ಡ್ರಗ್ಸ್ ಮಾಫಿಯಾ, ಮಾರ್ಯಾದಾ ಹತ್ಯೆ ಪ್ರಕರಣಗಳು ನಿರಂತರವಾಗಿವೆ. ಇದನ್ನು ಹತ್ತಿಕ್ಕಲು ಸಾಧ್ಯವಾಗದೆ, ದಾಖಲೆಗೋಸ್ಕರ ಸಿದ್ದರಾಮಯ್ಯ ಆಡಳಿತ ನಡೆಸುತ್ತಿರುವಂತಿದೆ. ಅಧಿಕಾರಿಗಳು ಗುಲಾಮರಾಗಿದ್ದಾರೆ. ಅಧಿಕಾರಿಗಳು ಇವರ ಆಡಳಿತದಲ್ಲಿ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ, ಸ್ವಾತಂತ್ರ್ಯ ಎಂಬುದೇ ಇಲ್ಲ, ಬ್ಯಾಟರಿ ಹಾಕಿ ಹುಡುಕಿದರೂ ಒಬ್ಬ ಒಳ್ಳೆ ಅಧಿಕಾರಿ ಸಿಗುವುದಿಲ್ಲ ಎಂದು ಅವರು ಕಟುವಾಗಿ ಟೀಕಿಸಿದರು.
ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಕಲಿಶ್ಯಾಮರಂತೆ ವರ್ತಿಸುತ್ತಿದ್ದಾರೆ, ಗೃಹ ಸಚಿವರಿಗೆ ಅಧಿಕಾರದ ಗತ್ತು ಎಂಬುದೇ ಗೊತ್ತಿಲ್ಲ, ಯಾವುದೇ ಪ್ರಕರಣ ನಡೆದರೂ ಎಸ್ಐಟಿ ರಚಿಸಿ ಕೈತೊಳೆದುಕೊಳ್ಳುವುದು, ನಾಜೂಕಯ್ಯನ ರೀತಿ ಮಾತನಾಡುವುದೊಂದೇ ತಿಳಿದಿರುವುದು ಎಂದು ಅವರು ಕಿಡಿಕಾರಿದರು.
ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲೆ ಹಾಕಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ಭಕ್ತರ ಮೇಲೆ ಕಲ್ಲು ಎಸೆದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಓಂ ಶಕ್ತಿಗೆ ಯಾತ್ರೆಗೆ ಹೊರಟಿರುವ ಹೆಣ್ಣು ಮಕ್ಕಳ ಮೇಲೆ ಕಲ್ಲು ಎಸೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿವೆ ಎಂಬುದು ಅರ್ಥವಾಗುತ್ತದೆ. ಇದಕ್ಕೆಲ್ಲಾ ಈ ಸರ್ಕಾರದ ನಡವಳಿಕೆಯೇ ಕಾರಣ ಎಂದು ಅವರು ಟೀಕಿಸಿದರು.
-
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ












Click it and Unblock the Notifications